Captain Miller Movie: ಕ್ಯಾಪ್ಟನ್ ಮಿಲ್ಲರ್ ಹಾಡಿಗೆ ಶಿವಣ್ಣ ಹೆಜ್ಜೆ
Team Udayavani, Jan 7, 2024, 1:30 PM IST
ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಡಬಲ್ ಮಾಡೋದಿಕ್ಕೆ ಬರುತ್ತಿರುವ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು “ಕ್ಯಾಪ್ಟನ್ ಮಿಲ್ಲರ್’.
ಕನ್ನಡಿಗರು ಕೂಡ ಕಾತುರದ ಕಣ್ಣುಗಳಿಂದ ಈ ಸಿನಿಮಾವನ್ನು ಎದುರು ನೋಡುತ್ತಿದ್ದಾರೆ. ಅದಕ್ಕೆ ಕಾರಣ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್. ತಮಿಳು ನಟ ಧನುಷ್ ನಾಯಕನಾಗಿ ನಟಿಸಿರುವ “ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ಕನ್ನಡದ ನಟ ಶಿವರಾಜಕುಮಾರ್ ಕೂಡ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.
ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಎರಡು ಹಾಡುಗಳ ಮೂಲಕ ಗಮನ ಸೆಳೆದಿರುವ “ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಮೂರನೇ ಹಾಡು ಇತ್ತೀಚೆಗೆಗಷ್ಟೇ ಬಿಡುಗಡೆಯಾಗಿದೆ. ಇನ್ನು ಬಹು ಭಾಷೆಯಲ್ಲಿ ಈ ಹಾಡು ರಿಲೀಸ್ ಆಗಿದ್ದು, ಕನ್ನಡದಲ್ಲಿ ಪ್ರಮೋದ್ ಜೋಯಿಸ್ “ಕ್ಯಾಪ್ಟನ್ ಮಿಲ್ಲರ್’ ಹಾಡಿಗೆ ಸಾಹಿತ್ಯ ಬರೆದಿದ್ದು, ದರ್ಶನ್ ನಾರಾಯಣ್ ಹಾಗೂ ಶೆಂಬಾಗರಾಜ್ ಧನುಶ್ ಧ್ವನಿಯಾಗಿದ್ದಾರೆ.
ಜಿ. ವಿ. ಪ್ರಕಾಶ್ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ “ಈರಪ್ಪನು…’ ಎಂಬ ಸಾಹಿತ್ಯದ ಈ ಹಾಡಿಗೆ ನಟರಾದ ಶಿವರಾಜಕುಮಾರ್ ಮತ್ತು ಧನುಶ್ ಜೋಡಿಯಾಗಿ ಹೆಜ್ಜೆ ಹಾಕಿ ಕುಣಿದು ಕುಪ್ಪಳಿಸಿದ್ದಾರೆ.
“ಕ್ಯಾಪ್ಟನ್ ಮಿಲ್ಲರ್’ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ತಮಿಳು, ತೆಲುಗು, ಕನ್ನಡ, ಹಿಂದಿ ಹೀಗೆ ಎಲ್ಲ ಭಾಷೆಗಳಲ್ಲೂ ಸಿನಿಮಾ ಏಕಕಾಲಕ್ಕೆ ತೆರೆಗೆ ಬರುತ್ತಿದೆ. ಸಿನಿಮಾವನ್ನು ಅರುಣ್ ಮಾಥೇಶ್ವರನ್ ನಿರ್ದೇಶಿಸಿದ್ದಾರೆ. ಧನುಷ್ ಜೋಡಿಯಾಗಿ ಪ್ರಿಯಾಂಕಾ ಮೋಹನನ್ ನಟಿಸಿದ್ದಾರೆ.
ಇದು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ತೆರೆದುಕೊಳ್ಳುವ ಕಥೆ ಎಂದು ಹೇಳಲಾಗುತ್ತಿದೆ. ನಾಯಕ ನಟ ಧನುಷ್ ಉದ್ದ ಕೂದಲು, ಗಡ್ಡ ಮೀಸೆ ಬಿಟ್ಟು ವಿಭಿನ್ನವಾಗಿ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗೆಯೇ ನಟ ಶಿವರಾಜಕುಮಾರ್ ಕೂಡ ಮತ್ತೂಂದು ವಿಭಿನ್ನ ಗೆಟಪ್ನ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಈಗಾಗಲೇ “ಕ್ಯಾಪ್ಟನ್ ಮಿಲ್ಲರ್’ ಸಿನಿಮಾಗೆ ಸೆನ್ಸಾರ್ ಮಂಡಳಿಯಿಂದ “ಯು/ಎ’ ಸರ್ಟಿಫಿಕೇಟ್ ಸಿಕ್ಕಿದ್ದು, ಸಿನಿಮಾ ಇದೇ ಜನವರಿ 12ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Kerala: ಮಲಯಾಳಂ ಚಿತ್ರರಂಗದ ಜನಪ್ರಿಯ ವಿಲನ್ ನಟ “ಕೀರಿಕ್ಕಡನ್ ಜೋಸ್” ವಿಧಿವಶ
Jani Master: ಅತ್ಯಾಚಾರ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ಗೆ ಷರತ್ತುಬದ್ಧ ಜಾಮೀನು
Indian 3: ʼಇಂಡಿಯನ್ -2ʼ ನಿಂದ ಅಪಾರ ನಷ್ಟ; ಮೂರನೇ ಭಾಗ ನೇರವಾಗಿ ಓಟಿಟಿಯಲ್ಲಿ ರಿಲೀಸ್?
Tollywood: ಸಮಂತಾ – ನಾಗ ಚೈತನ್ಯ ಬಗ್ಗೆ ಸಚಿವೆ ಸುರೇಖಾ ಹೇಳಿಕೆಗೆ ಇಡೀ ಟಾಲಿವುಡ್ ಆಕ್ರೋಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.