Lakshadweep;ಬೌದ್ಧರು, ಹಿಂದೂಗಳಿದ್ದ ಲಕ್ಷದ್ವೀಪದಲ್ಲಿ ಇಸ್ಲಾಂ ಪ್ರಾಬಲ್ಯ ಸಾಧಿಸಿದ್ದು ಹೇಗೆ

ಸ್ವಾತಂತ್ರ್ಯ ಪೂರ್ವ ಕಾಲದಲ್ಲಿ ಇದು ಮದ್ರಾಸ್‌ ಪ್ರೆಸಿಡೆನ್ಸಿಗೆ ಸೇರಿತ್ತು.

Team Udayavani, Jan 8, 2024, 1:40 PM IST

ಬೌದ್ಧರು, ಹಿಂದೂಗಳು ಅಧಿಕವಾಗಿದ್ದ ಲಕ್ಷದ್ವೀಪದಲ್ಲಿ ಇಸ್ಲಾಂ ಪ್ರಾಬಲ್ಯ ಸಾಧಿಸಿದ್ದು ಹೇಗೆ?

ಲಕ್ಷದ್ವೀಪಕ್ಕೆ ಭೇಟಿ ನೀಡಿ ಆಕರ್ಷಕ ಫೋಟೋಗಳನ್ನು ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಮಾಲ್ಡೀವ್ಸ್‌ ಗೆ ಲಕ್ಷದ್ವೀಪ ಪರ್ಯಾಯ ಪ್ರವಾಸಿ ತಾಣವಾಗಬಹುದು ಎಂಬ ಅಭಿಪ್ರಾಯ ಹುಟ್ಟುಹಾಕಲು ಕಾರಣರಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಹೇಳಿಕೆ ನೀಡಿದ್ದ ಮಾಲ್ಡೀವ್ಸ್‌ ಸಚಿವರುಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಭಾರತ ಕೂಡ ಆಕ್ಷೇಪ ವ್ಯಕ್ತಪಡಿಸಿತ್ತು. ಸಾಮಾಜಿಕ ಜಾಲತಾಣದಲ್ಲಿ ಭಾರತೀಯರಿಂದ ಬಾಯ್ಕಾಟ್‌ ಮಾಲ್ಡೀವ್ಸ್‌ ಅಭಿಯಾನ ಟ್ರೆಂಡಿಂಗ್‌ ಆದ ಪರಿಣಾಮ ಸಾವಿರಾರು ಮಂದಿ ಪ್ರವಾಸ ರದ್ದುಗೊಳಿಸಿದ್ದ ಪರಿಣಾಮ ಮಾಲ್ಡೀವ್ಸ್‌ ಮೂವರು ಸಚಿವರ ತಲೆದಂಡ ಮಾಡಿತ್ತು. ಈ ಎಲ್ಲಾ ರಂಪಾಟದ ನಡುವೆ ಒಂದು ಕಾಲದಲ್ಲಿ ಬೌದ್ಧರು ಮತ್ತು ಹಿಂದುಗಳು ಪಾರುಪತ್ಯದಲ್ಲಿದ್ದ ಲಕ್ಷದ್ವೀಪದಲ್ಲಿ ಮುಸ್ಲಿಮರ ಪ್ರಾಬಲ್ಯ ಹೇಗೆ ಬೆಳೆಯಿತು ಎಂಬ ಸಂಕ್ಷಿಪ್ತ ಇತಿಹಾಸ ಇಲ್ಲಿದೆ…

ದ್ವೀಪಗಳ ಸಮೂಹ:

ಲಕ್ಷದ್ವೀಪ ಭಾರತದ ಪುಟ್ಟ ಕೇಂದ್ರಾಡಳಿತ ಪ್ರದೇಶವಾಗಿದೆ. ಇಲ್ಲಿ 36 ದ್ವೀಪಗಳಿವೆ. ಲಕ್ಷದ್ವೀಪದ ಆಡಳಿತದ ರಾಜಧಾನಿ ಕವರಟ್ಟಿ. ಇಲ್ಲಿನ ಶೇ.95ರಷ್ಟು ಜನರು ಇಸ್ಲಾಂ ಧರ್ಮವನ್ನು ಅನುಸರಿಸುತ್ತಿದ್ದಾರೆ. ಆದರೆ ಲಕ್ಷದ್ವೀಪದಲ್ಲಿ ಹಿಂದೆ ಹಿಂದೂಗಳು, ಬೌದ್ಧರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಹಾಗಾದರೆ ಲಕ್ಷದ್ವೀಪದಲ್ಲಿ ಇಸ್ಲಾಂ ಹೇಗೆ ಪ್ರಬಲವಾಗಿ ಬೆಳೆಯಿತು ಎಂಬ ಬಗ್ಗೆ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ.

ಲಕ್ಷದ್ವೀಪಕ್ಕೆ ಇಸ್ಲಾಂ ಕಾಲಿಟ್ಟಿದ್ದು ಹೇಗೆ?

ಲಕ್ಷದ್ವೀಪವನ್ನು ಒಂದು ಕಾಲದಲ್ಲಿ ಲಖದೀವ್‌, ಮಿನಿಕೋಯ್‌ ಮತ್ತು ಅಮಿನ್‌ ದಿವಿ ದ್ವೀಪಗಳೆಂದು ಕರೆಯಲಾಗುತ್ತಿದ್ದ ಅರಬ್ಬಿ ಸಮುದ್ರ ನಡುವೆ ಇರುವ ಒಂದು ದ್ವೀಪ ಸಮೂಹವಾಗಿತ್ತು. ಲಕ್ಷದ್ವೀಪದ ಒಟ್ಟು ಭೂ ವಿಸ್ತೀರ್ಣ 4,200 ಚದರ ಕಿಲೋ ಮೀಟರ್‌. ಲಕ್ಷದ್ವೀಪದ ರಾಜಧಾನಿ ಕವರಟ್ಟಿ ಕೇರಳ ಹೈಕೋರ್ಟ್‌ ಪರಿಧಿಯಲ್ಲಿ ಬರುತ್ತದೆ.

ಸ್ವಾತಂತ್ರ್ಯ ಪೂರ್ವ ಕಾಲದಲ್ಲಿ ಇದು ಮದ್ರಾಸ್‌ ಪ್ರೆಸಿಡೆನ್ಸಿಗೆ ಸೇರಿತ್ತು. 1956ರಲ್ಲಿ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲ್ಪಟ್ಟಿತ್ತು. ಇಲ್ಲಿ ಒಟ್ಟು 39 ದ್ವೀಪಗಳಿದ್ದು, 10ರಲ್ಲಿ ಮಾತ್ರ ಜನವಸತಿ ಇದೆ. 2011ರ ಜನಗಣತಿ ಪ್ರಕಾರ ಲಕ್ಷದ್ವೀಪದಲ್ಲಿ 64,429 ಜನಸಂಖ್ಯೆ ಇದ್ದು, ಶೇ.95ರಷ್ಟು ಮುಸಲ್ಮಾನರು. ಇವರು ಮಲಯಾಳಂ ಭಾಷೆಯಲ್ಲಿ ವ್ಯವಹರಿಸುತ್ತಾರೆ.

ಚೇರ ಸಾಮ್ರಾಜ್ಯದ ಕೊನೆಯ ಅರಸು ಚೇರಮನ್‌ ಪೆರುಮಾಳ್‌ ಕಾಲದಲ್ಲಿ ಇಲ್ಲಿ ಜನವಸತಿ ಆರಂಭವಾಗಿತ್ತು. ಮೊದಲು ಅಮಿನಿ, ಕಾಲ್‌ ಪೇನಿ, ಆಂಡ್ರೋಟ್‌, ಕವರಟ್ಟಿ, ಅಗಾಟ್ಟಿ ದ್ವೀಪಗಳಲ್ಲಿ ಕೇರಳದಿಂದ ಬಂದು ನೆಲಸಿದ್ದ ಜನರಿದ್ದರು. ಪುರಾತತ್ವ ಇಲಾಖೆಯ ದಾಖಲೆಯ ಪ್ರಕಾರ ಇಲ್ಲಿ ಕ್ರಿಸ್ತ ಶಕ 5-6ನೇ ಶತಮಾನದಲ್ಲಿ ಬೌದ್ಧ ಧರ್ಮ ಉಚ್ಚ್ರಾಯ ಸ್ಥಿತಿಯಲ್ಲಿತ್ತು. ಹಿಂದೂಗಳು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಕ್ರಿ.ಶ.661ರಲ್ಲಿ ಉಬೇದುಲ್ಲ ಎಂಬ ಅರಬ್‌ ಇಲ್ಲಿಗೆ ಇಸ್ಲಾಂ ಧರ್ಮವನ್ನು ತಂದಿದ್ದ.

ಕ್ರಿ.ಶ 825ರಲ್ಲಿ ರಾಜ ಚೇರಮನ್‌ ಪೆರುಮಾಳ್‌ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದ. ನಂತರ ಬಹುತೇಕರು ಇಸ್ಲಾಂಗೆ ಮತಾಂತರಗೊಂಡ ಪರಿಣಾಮ ಬೌದ್ಧರು ಮತ್ತು ಹಿಂದೂಗಳ ಪ್ರಾಬಲ್ಯ ಕುಂಠಿತಗೊಂಡಿತ್ತು ಎಂದು ಇತಿಹಾಸದಲ್ಲಿ ದಾಖಲಾಗಿದೆ.

17ನೇ ಶತಮಾನದಲ್ಲಿ ಕಣ್ಣೂರಿನ “ಅಲಿ ರಜಾ ಅರಕ್ಕಲ್‌ ಭೀವಿಗೆ” ಈ ಲಕ್ಷದ್ವೀಪಗಳು ಕೊಳತ್ತಿರಿ ರಾಜರಿಂದ ಕಾಣಿಕೆಯಾಗಿ ಸಿಕ್ಕಿತ್ತು. ಅವಿನ್‌ ದೀವಿ ದ್ವೀಪಗಳು 1787ರಲ್ಲಿ ಟಿಪ್ಪು ಸುಲ್ತಾನ್‌ ವಶಕ್ಕೆ ಬಂದಿತ್ತು. ಬಳಿಕ ಬ್ರಿಟಿಷರ ಸಮಯದಲ್ಲಿ ಅವು ದಕ್ಷಿಣ ಕೆನರಾ ಭಾಗವಾಯಿತು. ಉಳಿದ ದ್ವೀಪಗಳನ್ನು ಕಣ್ಣಾನೂರಿನ ಅರಕ್ಕಲ್‌ ಮನೆತನ ಆಳುತ್ತಿತ್ತು. ಅರಕ್ಕಲ್‌ ರಾಜ, ಕಪ್ಪ ಕೊಡದ ಕಾರಣ ಬ್ರಿಟಿಷರು ಈ ದ್ವೀಪಗಳನ್ನು ವಶಪಡಿಸಿಕೊಂಡು ಮದ್ರಾಸ್‌ ಪ್ರೆಸಿಡೆನ್ಸಿಯ ಮಲಬಾರ್‌ ಜಿಲ್ಲೆಗೆ ಸೇರಿಸಿದ್ದರು.

ಟಾಪ್ ನ್ಯೂಸ್

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರMangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Mangaluru ಪಾಲಿಕೆ ಆಯುಕ್ತರ ವರ್ಗಾವಣೆ ರದ್ದುಗೊಳಿಸಿದ ಸರಕಾರ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

Heavy Rain ದಕ್ಷಿಣ ಕನ್ನಡದಲ್ಲಿ ಸೋಮವಾರವೂ ಭಾರೀ ಮಳೆ

CM-Siddaramaiah

Government ಜಮೀನು ಒತ್ತುವರಿ ನಿರ್ದಾಕ್ಷಿಣ್ಯ ತೆರವು: ಸಿಎಂ ಸಿದ್ದರಾಮಯ್ಯ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ

Rain ಮೈದುಂಬಿದ ನೇತ್ರಾವತಿ, ಕುಮಾರಧಾರಾ ನದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

Tour:ವಿದೇಶ ಪ್ರವಾಸ ಕಥನ -2; ರಾಜಪ್ರಭುತ್ವದ ನೆಲದಲ್ಲಿ ಪ್ರಜಾಪ್ರಭುತ್ವ ಅಭಿವೃದ್ಧಿಯ ಬೆಳಕು

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

“Symphony Of The Sea’: 21ನೇ ಶತಮಾನದ ವಿಸ್ಮಯ, ಅತೀ ದೊಡ್ಡ ಹಡಗು

1-qewewq

Yakshagana ರಂಗದಿಂದ ಮರೆಯಾದ ಮೃದು ಮಧುರ ಮಾತುಗಳ ಕುಂಬಳೆ ಶ್ರೀಧರ್ ರಾವ್

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

supreem

Supreme Court: ಬೇಸಗೇಲಿ 1,170 ಕೇಸ್‌ ಇತ್ಯರ್ಥ

Jalashaya

Monsoon: ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ; ಹಲವು ಪ್ರದೇಶ ಜಲಾವೃತ

Supreme Court

NEET ಪರೀಕ್ಷೆ ರದ್ದು ತನಿಖೆ ಬಳಿಕ ತೀರ್ಮಾನ: ಸುಪ್ರೀಂ ಕೋರ್ಟ್‌

police crime

BSP ಅಧ್ಯಕ್ಷ ಹತ್ಯೆ ಬೆನ್ನಲ್ಲೇ ಚೆನ್ನೈ ಪೊಲೀಸ್‌ ಕಮಿಷನರ್‌ ಎತ್ತಂಗಡಿ

1-mm

France ಸಂಸತ್‌ ಅತಂತ್ರ?: ಎಡಪಕ್ಷ ಕೂಟಕ್ಕೆ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.