ಪುತ್ತಿಗೆ ಪರ್ಯಾಯ-2024: ವಿಶಾಲ ವೇದಿಕೆ, ಹೊರೆಕಾಣಿಕೆ ಆವರಣ, ವಸ್ತು ಪ್ರದರ್ಶನ ಮಳಿಗೆ


Team Udayavani, Jan 8, 2024, 2:15 PM IST

ಪುತ್ತಿಗೆ ಪರ್ಯಾಯ-2024: ವಿಶಾಲ ವೇದಿಕೆ, ಹೊರೆಕಾಣಿಕೆ ಆವರಣ, ವಸ್ತು ಪ್ರದರ್ಶನ ಮಳಿಗೆ

ಉಡುಪಿ: ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಪರ್ಯಾಯೋತ್ಸವಕ್ಕೆ ಕೃಷ್ಣನಗರಿ ಸಜ್ಜಾಗುತ್ತಿದ್ದು, ವಿದ್ಯುದ್ದೀಪಾಲಂಕಾರ, ಸ್ವಚ್ಛತಾ ಕಾರ್ಯ ಸಹಿತ ಹಲವು ಕೆಲಸ ಭರದಿಂದ ಸಾಗುತ್ತಿದೆ. ಪರ್ಯಾಯದ ಪ್ರಮುಖ ಕಾರ್ಯ
ಕ್ರಮ ನಡೆಸುವ ವೇದಿಕೆ ಕೆಲಸ ಅಂತಿಮ ಹಂತಕ್ಕೆ ತಲುಪಿದೆ. ಕೃಷ್ಣಮಠ ಪಾರ್ಕಿಂಗ್‌ ಸಮೀಪದ 4 ಎಕ್ರೆ ಜಾಗದಲ್ಲಿ ಹೊರೆ ಕಾಣಿಕೆ ಆವರಣ, 40 ಅಡಿ ಅಗಲದ ಬೃಹತ್‌ ವೇದಿಕೆ, ವಸ್ತು ಪ್ರದರ್ಶನ ಮಳಿಗೆ ಇರಲಿದೆ.ಕಳೆದ 15 ದಿನಗಳಿಂದ 100ಕ್ಕೂ ಅಧಿಕ ಮಂದಿ
ಕಾರ್ಮಿಕರು ರಾತ್ರಿ ಹಗಲು ಶ್ರಮಿಸಿದ್ದಾರೆ.

ಆರಂಭದಲ್ಲಿ ಭೂಮಿಯನ್ನು ಸಮತಟ್ಟು ಮಾಡಿ, ಎಲ್ಲ ಕಡೆಗೆ ಮ್ಯಾಟ್‌ ಹೊದೆಸಿ ವ್ಯವಸ್ಥಿತವಾಗಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ಈ ವೇದಿಕೆಗೆ ಕನಕದಾಸ ಮಂಟಪ ಎಂದು ಹೆಸರಿಡಲಾಗಿದ್ದು, ಸಾಂಪ್ರದಾಯಿಕ ಶೈಲಿಯಲ್ಲಿ ವಿದ್ಯುತ್‌ ಅಲಂಕಾರದಿಂದ ವೇದಿಕೆ ಕಂಗೊಳಿಸಲಿದೆ.

ಇಲ್ಲಿ ಜ. 9ರ ಸಂಜೆಯಿಂದ ಸಾಂಸ್ಕೃತಿಕ ಕಾರ್ಯಕ್ರಮ ಆರಂಭಗೊಳ್ಳಲಿದೆ. ವೇದಿಕೆ ಮುಂಭಾಗ ಒಂದು ಸಾವಿರ ಮಂದಿ ಕುಳಿತು ಕಾರ್ಯಕ್ರಮ ವೀಕ್ಷಣೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಇದೇ ಸ್ಥಳದಲ್ಲಿ ಪರ್ಯಾಯ ದಿನದಂದು ಅನ್ನಸಂತರ್ಪಣೆ ನಡೆಯಲಿದ್ದು, ಬಫೆ ಮತ್ತು ಕುಳಿತುಕೊಂಡು ಊಟ ಮಾಡುವ ವ್ಯವಸ್ಥೆಯನ್ನು ಮಾಡಲಾಗುತ್ತದೆ.

ವಸ್ತು ಪ್ರದರ್ಶನ ಮಳಿಗೆ ಆಕರ್ಷಣೆ
ಈ ಬಾರಿ ಪರ್ಯಾಯದಲ್ಲಿ ವಿಶೇಷ ಎಂಬಂತೆ ವಸ್ತು ಪ್ರದರ್ಶನ ಮಳಿಗೆ ಆಕರ್ಷಣೆಯ ಕೇಂದ್ರವಾಗಲಿದೆ. 30ಕ್ಕೂ ಅಧಿಕ ಮಳಿಗೆಗಳು ಇಲ್ಲಿದ್ದು, ಕೃಷಿ, ತೋಟಗಾರಿಕೆ, ಗೋವಿನ ಉತ್ಪನ್ನ, ಗೃಹಉತ್ಪನ್ನ, ಉಡುಪಿ ಸೀರೆ, ಸಾಂಪ್ರದಾಯಿಕ ಕರಕುಶಲ ಮಾರಾಟಗಳು ಸೇರಿದಂತೆ ಹಲವಾರು ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇಲ್ಲಿರಲಿದೆ.

ಹೊರೆ ಕಾಣಿಕೆ ಸಂಗ್ರಹಕ್ಕೆ ಸಕಲ ಸಿದ್ಧತೆ
ಊರ , ಪರ ಊರಿನಿಂದ ಆಗಮಿಸುವ ಹೊರೆ ಕಾಣಿಕೆ ಸಂಗ್ರಹಕ್ಕೆ ಸಕಲ ಸಿದ್ಧತೆ ನಡೆದಿದೆ. ಇದೇ ಜಾಗದಲ್ಲಿ ಅಚ್ಚುಕಟ್ಟಾಗಿ
ಹೊರೆಕಾಣಿಕೆ ರೂಪದಲ್ಲಿ ಬರುವ ಅಕ್ಕಿ, ಬೇಳೆ, ಧಾನ್ಯ, ಎಣ್ಣೆ, ಬೆಲ್ಲ, ತುಪ್ಪ, ಹಣ್ಣು, ತರಕಾರಿ ಮತ್ತಿತರ ವಸ್ತುಗಳ ಸಂಗ್ರಹಕ್ಕೆ
ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಸಾರ್ವಜನಿಕರಿಗೆ ಹೊರೆ ಕಾಣಿಕೆ ವೀಕ್ಷಿಸಲು ಪ್ರದರ್ಶನ ಮಾದರಿಯಲ್ಲಿ ವ್ಯವಸ್ಥೆ
ಮಾಡಲಾಗುತ್ತದೆ ಎಂದು ಪುತ್ತಿಗೆ ಮಠದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

3

Kollywood: ಮಾಜಿ ಆಳಿಯನ ಜತೆ ರಜಿನಿ ನಟನೆ? ಒಂದೇ ಚಿತ್ರದಲ್ಲಿ ಧನುಷ್ – ರಜಿನಿಕಾಂತ್?

3-ptr

Puttur: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ‌‌ ಪೂಜೆ; ಅರುಣ್ ಪುತ್ತಿಲ ಆಗಮನಕ್ಕೆ ವಿರೋಧ

2

Actor Yash: ‘ರಾಮಾಯಣʼಕ್ಕೆ ನಾನೇ ʼರಾವಣʼ.. ಬಿಗ್‌ ಬಜೆಟ್‌ ಚಿತ್ರದ ಬಗ್ಗೆ ಯಶ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

byndoor

Kundapura: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

7-koppala

Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ

surathkal

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ : ಮೆಸೇಜ್ ಮಾಡಿ ಕಿರುಕುಳ; ಆರೋಪಿ ವಶಕ್ಕೆ

5-mukka

Mangaluru: ನೀರಿನಲ್ಲಿ ಆಡುತ್ತಿದ್ದ ಯುವಕ ಸಮುದ್ರ ಪಾಲು

4-bntwl

Farangipete: ಪೂರ್ವದ್ವೇಷದ ಹಿನ್ನಲೆ ತಲ್ವಾರ್ ದಾಳಿ; ಇಬ್ಬರಿಗೆ ಗಾಯ

6

Actor Yash: ‘ಕೆಜಿಎಫ್‌-3ʼ ಬಗ್ಗೆ ಯಶ್‌ ಕೊಟ್ರು ಬಿಗ್‌ ಅಪ್ಡೇಟ್; ಯಾವಾಗ ಬರಲಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.