Thalaivar 172: ʼಕರ್ಣನ್ʼ ನಿರ್ದೇಶಕನ ಜೊತೆ ಸೂಪರ್ ಸ್ಟಾರ್ ರಜಿನಿಕಾಂತ್ ಸಿನಿಮಾ
Team Udayavani, Jan 8, 2024, 3:57 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಬಳಿಕ ಮತ್ತೊಮ್ಮೆ ಖಾಕಿ ಅವತಾರದಲ್ಲಿ ಕಾಣಿಸಿಕೊಳ್ಳುವ ಸಿನಿಮಾದಲ್ಲಿ ನಟಿಸುತಿದ್ದಾರೆ. ಅವರು ಟಿಜೆ ಜ್ಞಾನವೇಲ್ ಅವರ ʼವೆಟ್ಟಯ್ಯನ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ʼವೆಟ್ಟಯ್ಯನ್ʼ ಸಿನಿಮಾದ ಬಳಿಕ ರಜಿನಿಕಾಂತ್ ಸ್ಟಾರ್ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದ ತಯಾರಿಯಲ್ಲಿ ಲೋಕೇಶ್ ನಿರತರಾಗಿದ್ದಾರೆ. ಈ ನಡುವೆ ʼತಲೈವಾʼಅವರ ಮುಂದಿನ ಸಿನಿಮಾದ ಬಗ್ಗೆ ಸುದಿಯೊಂದು ಹೊರಬಿದ್ದಿದೆ.
ʼತಲೈವರ್ 172ʼ ಸಿನಿಮಾವನ್ನು ಯಾರು ನಿರ್ದೇಶನ ಮಾಡಲಿದ್ದಾರೆ ಎನ್ನುವುದರ ಬಗ್ಗೆ ಸುದ್ದಿಯೊಂದು ಹೊರಬಿದ್ದಿದೆ.
ʼಪರಿಯೆರುಮ್ ಪೆರುಮಾಳ್ʼ, ʼಕರ್ಣನ್ʼ ಹಾಗೂ ಇತ್ತೀಚೆಗೆ ಬಂದ ʼಮಾಮಣ್ಣನ್ʼ ಮೂಲಕ ಸದ್ದು ಮಾಡಿರುವ ಖ್ಯಾತ ನಿರ್ದೇಶಕ ಮಾರಿ ಸೆಲ್ವರಾಜ್ ರಜಿನಿಕಾಂತ್ ಅವರೊಂದಿಗೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ರಜಿನಿಕಾಂತ್ ಅವರು ʼತಲೈವರ್ 172ʼ ಸಿನಿಮಾಕ್ಕಾಗಿ ಒನ್ ಲೈನ್ ಸ್ಟೋರಿ ಕೇಳಿ, ಮಾರಿ ಸೆಲ್ವರಾಜ್ ಅವರಿಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎನ್ನಲಾಗಿದೆ. ಈ ಸಿನಿಮಾ ಸೋಶಿಯಲ್ ಡ್ರಾಮಾದ ಕಥೆಯನ್ನೊಳಗೊಳ್ಳಲಿದೆ ಎನ್ನಲಾಗಿದೆ.
ರಜಿನಿಕಾಂತ್ ಇನು 2-3 ವರ್ಷ ನಿರಂತರ ಸಿನಿಮಾ ಮಾಡುವ ಯೋಜನೆಯಲ್ಲಿದ್ದು, ಮುಂದೆ ʼಜೈಲರ್ʼ ಸಿನಿಮಾದ ನಿರ್ದೇಶಕ ನೆಲ್ಸನ್ ಅವರೊಂದಿಗೆ ಮತ್ತೆ ಸಿನಿಮಾ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಸದ್ಯ ಮಾರಿ ಸೆಲ್ವರಾಜ್ ಅವರರೊಂದಿಗೆ ಸಿನಿಮಾದ ಬಗ್ಗೆ ಮುಂದೆ ಅಧಿಕೃತವಾಗಿ ಘೋಷಣೆ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್ ಟಿಆರ್ ಸಿನಿಮಾ ವೀಕ್ಷಿಸಿದ ರೋಗಿ.!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.