ಫುಲೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು:ಶಾಂತಲಿಂಗ ಶ್ರೀ


Team Udayavani, Jan 8, 2024, 3:50 PM IST

ಫುಲೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು:ಶಾಂತಲಿಂಗ ಶ್ರೀ

ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್‌: ದಮನಿತ ಸಮುದಾಯದ ಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು ತೆರೆದು ಕ್ರಾಂತಿಕಾರಿ ಚಳವಳಿ ಮಾಡಿದ ಭಾರತದ ಆಧುನಿಕ ಶಿಕ್ಷಣದ ಮೊದಲ ಅಕ್ಷರದಾತೆ ಸಾವಿತ್ರಿಬಾಯಿ ಫುಲೆ. ಆಗಿನ ಕಾಲದಲ್ಲಿಯೇ ರಾತ್ರಿ ಶಾಲೆಗಳನ್ನು ಆರಂಭಿಸಿ ಸಮಾನ ಶಿಕ್ಷಣದ ಕಲ್ಪನೆ ಕೊಟ್ಟ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಿರಿದಾದುದು ಎಂದು ಶಾಂತಲಿಂಗ ಶ್ರೀ ಹೇಳಿದರು.

ಭೈರನಹಟ್ಟಿ ಗ್ರಾಮದ ದೊರೆಸ್ವಾಮಿ ವಿರಕ್ತಮಠದಲ್ಲಿ ಶ್ರೀ ದೊರೆಸ್ವಾಮಿ ವಿವಿಧೋದ್ದೇಶ ಟ್ರಸ್ಟ್‌ ಹಾಗೂ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಸ್ತ್ರೀಯರು ಕೂಡಾ ಪುರುಷರಂತೆ ಶಿಕ್ಷಣ ಪಡೆಯಬೇಕೆಂದು 12 ನೇ ಶತಮಾನದ ಬಸವಾದಿ ಶಿವಶರಣರ ಕನಸನ್ನು ನನಸಾಗಿಸಲು
ಹೆಣ್ಣು ಮಕ್ಕಳಿಗಾಗಿಯೇ ವಿಶೇಷ ಶಾಲೆ, ಶಿಶು ಕೇಂದ್ರ ಸ್ಥಾಪಿಸಿ ಆ ಮೂಲಕ ಮಹಿಳೆಯರ ಮತ್ತು ಮಕ್ಕಳ ಬದುಕಿಗೆ ಭದ್ರವಾದ
ನೆಲೆಕೊಟ್ಟ ದಿಟ್ಟ ಸಾಮಾಜಿಕ ಹೋರಾಟಗಾರ್ತಿ ಫುಲೆಯವರು. ವಿವಾಹ ಬಾಹಿರ ಸಂಬಂಧದಿಂದ ಹುಟ್ಟಿದ ಮಕ್ಕಳಿಗೂ ಸಹಿತ ಅವರ ಶಿಕ್ಷಣಕ್ಕೆ ರಹದಾರಿಯನ್ನು ಕಲ್ಪಿಸಿದ ಶಿಕ್ಷಣ ಮಾತೆ ಎಂದು ಬಣ್ಣಿಸಿದರು.

ಸ್ನೇಹಜೀವಿ ವಿದ್ಯಾಲಯದ ಮುಖ್ಯಶಿಕ್ಷಕಿ ಮಾಲಾ ಪಾಟೀಲ ಮಾತನಾಡಿ, ಸತ್ಯಶೋಧಕ ಸಮಾಜದ ಅಧ್ಯಕ್ಷೆಯಾಗಿ 19ನೇ ಶತಮಾನದಲ್ಲಿ ಬಾಲ್ಯವಿವಾಹ, ಸತಿಸಹಗಮನ ಪದ್ಧತಿಯಂತ ಅನಿಷ್ಟ ಪದ್ಧತಿಗಳ ವಿರುದ್ಧ ಧ್ವನಿ ಎತ್ತಿದ ವೀರ
ಮಹಿಳೆ ಸಾವಿತ್ರಿಬಾಯಿ ಫುಲೆಯವರು. ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನುಗ್ಗುತ್ತಿರುವುದಕ್ಕೆ ಸಾವಿತ್ರಿಬಾಯಿ
ಹೋರಾಟ ಮುಖ್ಯವಾಗಿದೆ. ಪ್ರತಿಯೊಬ್ಬ ಮಹಿಳೆಯರು ಅಕ್ಷರದಾತೆಯನ್ನು ನೆನೆಯಬೇಕು ಅದು ಎಲ್ಲರ ಆದ್ಯ ಕರ್ತವ್ಯ ಎಂದು ಅವರು ಹೇಳಿದರು.

ಸಾವಿತ್ರಿಬಾಯಿ ಫುಲೆಯವರ ಇತಿಹಾಸವನ್ನು ಪ್ರತಿಯೊಬ್ಬರು ಅರಿಯಬೇಕಿದೆ. ಶಿಕ್ಷಕ ಸಮುದಾಯಕ್ಕೆ ಅವರ ಚಿಂತನೆಗಳು,
ವಿಚಾರಧಾರೆಗಳು ಪ್ರೇರಣೆ. ಅವರಂತೆಯೇ ಎಲ್ಲರೂ ಅನ್ಯಾಯದ ವಿರುದ್ಧ ಪ್ರತಿಭಟಿಸುವ ಮನೋಭಾವನೆ ಬೆಳೆಸಿಕೊಳ್ಳಬೇಕು.
ಫುಲೆಯವರ ಜಯಂತಿಯನ್ನು ಶಿಕ್ಷಕಿಯರ ದಿನವನ್ನಾಗಿ ಆಚರಿಸಲು ಸರಕಾರ ಘೋಷಣೆ ಮಾಡಬೇಕೆಂದು ಬೈರನಹಟ್ಟಿ ಪೂಜ್ಯ
ಶಾಂತಲಿಂಗ ಶ್ರೀ ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯಶಿಕ್ಷಕ ಸಲ್ಮಾ ಎ.ಎಸ್‌. ಹಾಗೂ ಮಾಲಾ ಪಾಟೀಲ ಅವರನ್ನು ಶ್ರೀಮಠದಿಂದ ಸನ್ಮಾನಿಸಲಾಯಿತು. ಅಂಗನವಾಡಿ ಕಾರ್ಯಕರ್ತೆಯರಾದ ಶರಣಮ್ಮ ತೆಗ್ಗಿನಮನಿ, ರೇಣುಕಾ ಹುಜರತ್ತಿ, ಮೋಹನಕೃಷ್ಣ, ರೇಣಕ್ಕ ನರಸಾಪುರ ಪ್ರಮುಖರು ಉಪಸ್ಥಿತರಿದ್ದರು.ಮಹಾಂತೇಶ ಹಿರೇಮಠ ನಿರೂಪಿಸಿ-ವಂದಿಸಿದರು.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ..ರಾತ್ರಿಯಿಡಿ ಸಾಗುವ ರಥೋತ್ಸವ

ಮಹಾಲಿಂಗಪುರದ ಮಹಾಜಾತ್ರೆ…: ಲಕ್ಷಾಂತರ ಭಕ್ತರು ಭಾಗಿ… ರಾತ್ರಿಯಿಡಿ ಸಾಗುವ ರಥೋತ್ಸವ

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.