Mining;ಉಪ ಖನಿಜಗಳ ಗಣಿಗಾರಿಕೆ ಗುತ್ತಿಗೆ ಅವಧಿ ವಿಸ್ತರಣೆಗೆ ಆಕ್ಷೇಪ,ವರದಿ ಕೇಳಿದ ಹೈಕೋರ್ಟ್
Team Udayavani, Jan 9, 2024, 11:27 PM IST
ಬೆಂಗಳೂರು: ಕಲ್ಲುಗಣಿ, ಎಂ-ಸ್ಯಾಂಡ್ ಸೇರಿ ಉಪ ಖನಿಜಗಳ ಗಣಿ ಗುತ್ತಿಗೆಗಳ ಅವಧಿಯನ್ನು ಗರಿಷ್ಠ 30 ವರ್ಷ ಮತ್ತು 50 ವರ್ಷ ವಿಸ್ತರಿಸಲು ಅವಕಾಶ ಮಾಡಿಕೊಟ್ಟಿರುವ “ಕರ್ನಾಟಕ ಉಪ ಖನಿಜ ರಿಯಾಯಿತಿ (ತಿದ್ದುಪಡಿ) ನಿಯಮ-2023′ ಅನ್ನು ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸಮಗ್ರ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ವಿಚಾರವಾಗಿ ಮಾಹಿತಿ ಹಕ್ಕು ಕಾರ್ಯಕರ್ತ ಕೆ.ಪಿ. ಶಿವಕುಮಾರ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲೆ ವಿಜೇತಾ ಆರ್.ನಾಯಕ್ ವಾದ ಮಂಡಿಸಿದರು. ಸರ್ಕಾರದ ಪರ ವಕೀಲ ಎಸ್.ಎಸ್. ಮಹೇಂದ್ರ ಸರ್ಕಾರದ ಕ್ರಮವನ್ನು ಸಮರ್ಥಿಸಿಕೊಂಡರು.
ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಇದೊಂದು ಗಂಭೀರ ವಿಚಾರವಾಗಿದೆ. ಅರ್ಜಿಯಲ್ಲಿ ಆಕ್ಷೇಪಿಸಲಾದ ವಿಷಯಗಳ ಬಗ್ಗೆ ಸಮಗ್ರ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಇದೇ ವೇಳೆ ಅರ್ಜಿಯಲ್ಲಿ ತಮ್ಮನ್ನು ಪ್ರತಿವಾದಿಯಾಗಿ ಸೇರಿಸಬೇಕೆಂದು ಫೆಡರೇಷನ್ ಆಫ್ ಕರ್ನಾಟಕ ಗ್ರಾನೈಟ್ ಇಂಡಸ್ಟ್ರಿ ಸಲ್ಲಿಸಿದ ಮಧ್ಯಂತರ ಅರ್ಜಿ ಅಂಗೀಕರಿಸಿ ನೋಟಿಸ್ ಜಾರಿಗೊಳಿಸಿದ ನ್ಯಾಯಪೀಠ ವಿಚಾರಣೆಯನ್ನು ಜ.19ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.