Tragedy: ರಾತ್ರಿ ಮಲಗಿದ್ದ 7ಮಂದಿಯಲ್ಲಿ ಬೆಳಗಾಗುತ್ತಲೇ ಐವರು ಶವವಾಗಿ ಪತ್ತೆ, ಇಬ್ಬರು ಗಂಭೀರ
ಉತ್ತರ ಪ್ರದೇಶದಲ್ಲೊಂದು ಘೋರ ದುರಂತ
Team Udayavani, Jan 10, 2024, 10:31 AM IST
ಉತ್ತರ ಪ್ರದೇಶ: ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ಮನೆಯಲ್ಲಿ ಮಲಗಿದ್ದ ಕುಟುಂಬದ ಏಳು ಮಂದಿಯಲ್ಲಿ ಮಕ್ಕಳು ಸೇರಿದಂತೆ ಐದು ಮಂದಿ ಶವವಾಗಿ ಪತ್ತೆಯಾಗಿರುವ ದಾರುಣ ಘಟನೆ ಬೆಳಕಿಗೆ ಬಂದಿದ್ದು ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತರನ್ನು ಸೋನಂ (19), ವಾರಿಸ್ (17), ಮೆಹಕ್ (16), ಜೈದ್ (15) ಮತ್ತು ಮಾಹಿರ್ (12) ಎಂದು ಗುರುತಿಸಲಾಗಿದೆ.
ಏನಿದು ಘಟನೆ:
ಕಳೆದ ಸೋಮವಾರ ರಾತ್ರಿ ರಹೀಸುದ್ದೀನ್ ಕುಟುಂಬದ ಏಳು ಮಂದಿ ಸದಸ್ಯರು ಊಟ ಮಾಡಿ ಮಲಗಿದ್ದಾರೆ ಮಂಗಳವಾರ ಸಂಜೆಯವರೆಗೂ ಮನೆಯ ಬಾಗಿಲು ತೆರೆಯಲಿಲ್ಲ ಇದರಿಂದ ಅನುಮಾನಗೊಂಡ ಪಕ್ಕದ ಮನೆಯ ಸದಸ್ಯರು ಬಾಗಿಲು ಬಡಿದಿದ್ದಾರೆ ಆದರೆ ಒಳಗಿನಿಂದ ಯಾವುದೇ ಉತ್ತರ ಬರಲಿಲ್ಲ, ಇದರಿಂದ ಅನುಮಾನಗೊಂಡ ನೆರೆಮನೆಯವರು ಬಾಗಿಲು ಮುರಿದು ಒಳ ಪ್ರವೇಶಿಸಿದವರು ಬೆಚ್ಚಿ ಬಿದ್ದಿದ್ದಾರೆ ಕಾರಣ ಮನೆಯಲ್ಲಿದ್ದ ಏಳು ಮಂದಿಯಲ್ಲಿ ಐದು ಮಂದಿ ಶವವಾಗಿ ಪತ್ತೆಯಾಗಿದ್ದರೆ ಇಬ್ಬರು ಗಂಭೀರ ಸ್ಥಿತಿಯಲ್ಲಿ ಒದ್ದಾಡುತ್ತಿದ್ದರು. ಇದನ್ನು ಕಂಡ ನೆರೆಮನೆಯವರು ಕೂಡಲೆ ವಿಚಾರ ಪೊಲೀಸರಿಗೆ ತಿಳಿಸಿದ್ದಾರೆ ಅಲ್ಲದೆ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಪೊಲೀಸರೊಂದಿಗೆ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಅದರಂತೆ ಮನೆಯವರು ಮನೆಯಲ್ಲಿ ಮಲಗುವ ವೇಳೆ ಚಳಿಯಿಂದ ಬೆಚ್ಚಗಾಗಲು ಕಲ್ಲಿದ್ದಲಿನಿಂದ ಬೆಂಕಿ ಹಚ್ಚಿ ಮಲಗಿದರು. ಆ ಸಮಯದಲ್ಲಿ ಮನೆಯ ಎಲ್ಲಾ ಬಾಗಿಲು, ಕಿಟಕಿಗಳನ್ನು ಮುಚ್ಚಿದ್ದಾರೆ. ಈ ವೇಳೆ ಕಲ್ಲಿದ್ದಲು ಉರಿಯುತ್ತಿರುವಾಗ ಹೊಗೆ ಹೊರಹೋಗಲಾರದೆ ಇಡೀ ಮನೆಯನ್ನು ತುಂಬಿಕೊಂಡಿದೆ. ಇದರಿಂದ ಮನೆಯಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗಿ ಒಳಗೆ ಮಲಗಿದ್ದ ಎಲ್ಲರೂ ಉಸಿರುಗಟ್ಟಿ 5 ಮಂದಿ ಸಾವನ್ನಪ್ಪಿರುವುದಾಗಿ ಗೊತ್ತಾಗಿದೆ.
ಚಳಿಗಾಗಿ ಹಾಕಿದ ಬೆಂಕಿ ಐವರ ಜೀವಕ್ಕೆ ಕುತ್ತು ತಂದಿರುವುದು ಘೋರ ದುರಂತವೇ ಸರಿ. ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಸದ್ಯ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು ಅದರ ವರದಿ ಬಂದ ಬಳಿಕವೇ ಇನ್ನೂ ಹೆಚ್ಚಿನ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: MS Dhoni; ಮೂರು ಐಸಿಸಿ ಟ್ರೋಫಿ ಗೆದ್ದರೂ ಧೋನಿಗೆ ಯಾಕೆ ಸಿಕ್ಕಿಲ್ಲ ಅರ್ಜುನ ಪ್ರಶಸ್ತಿ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ
J-K Election: ಚುನಾವಣೆ ಫಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್ ಆಕ್ಷೇಪ
Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ
Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್ಗೆ ಹೋಗುತ್ತಿಲ್ಲ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.