December ತಿಂಗಳಲ್ಲಿ ಮದ್ಯ ಮಾರಾಟ; ಉಡುಪಿ: ದಾಖಲೆ ಪ್ರಮಾಣದಲ್ಲಿ ವಹಿವಾಟು


Team Udayavani, Jan 11, 2024, 7:20 AM IST

December ತಿಂಗಳಲ್ಲಿ ಮದ್ಯ ಮಾರಾಟ;  ಉಡುಪಿ: ದಾಖಲೆ ಪ್ರಮಾಣದಲ್ಲಿ ವಹಿವಾಟು

ಉಡುಪಿ: ಜಿಲ್ಲೆಯಲ್ಲಿ ಪ್ರತೀ ವರ್ಷದಂತೆ ಈ ವರ್ಷವು ದಾಖಲೆ ಪ್ರಮಾಣದಲ್ಲಿ ಮದ್ಯ ವಹಿವಾಟು ನಡೆದಿದ್ದು, ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಅಬಕಾರಿ ಅದಾಯ ಜಿಲ್ಲೆಯಿಂದ ಜಮೆಯಾಗಿದೆ.

ಡಿಸೆಂಬರ್‌ 20ರ ಅನಂತರ ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಕ್ರಿಸ್ಮಸ್‌ ರಜೆ ಸಹಿತ ಡಿ. 31 ರಾತ್ರಿಯ ಮೋಜಿನ ಕೂಟವನ್ನು ಸಂಭ್ರಮದಿಂದ ಆಚರಿಸಿದ್ದರು. ವರ್ಷಾಂತ್ಯದಲ್ಲಿ ಮದ್ಯ ಮಾರಾಟ ಪ್ರಮಾಣ ಗಣನೀಯ ಏರಿಕೆ ಕಂಡಿದ್ದು, ಈ ವರ್ಷ ಡಿಸೆಂಬರ್‌ನಲ್ಲಿ 1,45,358 ಬಾಕ್ಸ್‌ ಮದ್ಯ ಮಾರಾಟವಾಗಿದ್ದು, 1,58,658 ಬಾಕ್ಸ್‌ ಬಿಯರ್‌ ಸೇರಿದಂತೆ ಒಟ್ಟು 3.4 ಲಕ್ಷ ಬಾಕ್ಸ್‌ ಮದ್ಯ ಮಾರಾಟವಾಗಿದೆ.

ಕಳೆದ ವರ್ಷ ಡಿಸೆಂಬರ್‌ ತಿಂಗಳಲ್ಲಿ 1,45,290 ಬಾಕ್ಸ್‌ ಮದ್ಯ, 1,38,681 ಬಾಕ್ಸ್‌ ಬಿಯರ್‌ ಮಾರಾಟವಾಗಿತ್ತು. ಹೊಸ ವರ್ಷ ಆಚರಣೆಗಾಗಿ ಒಂದು ದಿನದ ಪರವಾನಿಗೆ (ಸಿಎಲ್‌-5 ಸನ್ನದು) 9 ಕಡೆಗಳಿಗೆ ನೀಡಲಾಗಿದೆ. ಕಳೆದ ವರ್ಷ ಮೂರು ಪರವಾನಿಗೆ ನೀಡಲಾಗಿತ್ತು ಎಂದು ಜಿಲ್ಲೆಯ ಅಬಕಾರಿ ಇಲಾಖೆ ಡಿಸಿ ಬಿಂದುಶ್ರೀ ತಿಳಿಸಿದ್ದಾರೆ.

32 ಬಾಟಲಿ ಗೋವಾ ಮದ್ಯ ವಶಕ್ಕೆ
ವರ್ಷಾಂತ್ಯ ಹಿನ್ನೆಲೆಯಲ್ಲಿ ಅಬಕಾರಿ ಅಕ್ರಮ ಚಟುವಟಿಕೆ ತಡೆಗಟ್ಟುವ ಸಲುವಾಗಿ ಬೈಂದೂರು ಶಿರೂರು ಟೋಲ್‌ಗೇಟ್‌ನಲ್ಲಿ ವಾಹನ ತಪಾಸಣೆ ನಡೆಸಿದಾಗ ಗೂಡ್ಸ್‌ ವಾಹನದಲ್ಲಿ ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 24 ಲೀ. ಮದ್ಯ ಪತ್ತೆಯಾಗಿದೆ. 750 ಎಂಎಲ್‌ನ 32 ಮದ್ಯದ ಬಾಟಲಿಯನ್ನು ಗಸ್ತಿನಲ್ಲಿದ್ದ ಅಬಕಾರಿ ತಂಡ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

ದ.ಕ.: ಶೇ. 4ರಷ್ಟು ಕುಸಿತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಡಿಸೆಂಬರ್‌ ತಿಂಗಳಲ್ಲಿ ಮದ್ಯಮಾರಾಟ ಕುಸಿತ ಕಂಡಿದೆ. 2022ರ ಡಿಸೆಂಬರ್‌ ತಿಂಗಳಿಗೆ ಹೋಲಿಕೆ ಮಾಡಿದರೆ 9,857 (ಶೇ.4) ಬಾಕ್ಸ್‌ ಮದ್ಯ ಕಡಿಮೆ ಮಾರಾಟವಾಗಿದೆ ಎಂದು ಅಬಕಾರಿ ಇಲಾಖಾ ಅಂಕಿ ಅಂಶ ತಿಳಿಸಿದೆ. ಇದೇ ವೇಳೆ ಬಿಯರ್‌ ಮಾರಾಟದಲ್ಲಿ ಶೇ.12.7ರಷ್ಟು ಹೆಚ್ಚಳವಾಗಿದ್ದು, 2,58,663 ಬಾಕ್ಸ್‌ ಮಾರಾಟವಾಗಿದೆ.

2022ರ ಡಿಸೆಂಬರ್‌ನಲ್ಲಿ ಜಿಲ್ಲೆಯಲ್ಲಿ ಒಟ್ಟು 2,50,891 ಬಾಕ್ಸ್‌ ಮದ್ಯ ಮಾರಾಟವಾಗಿತ್ತು. ಈ ಬಾರಿ 2,41,034 ಬಾಕ್ಸ್‌ ಮಾತ್ರ ಮಾರಾಟವಾಗಿದೆ, ಇದರ ಪ್ರಮಾಣ 84,770 ಲೀ. ಹೊಸ ವರ್ಷದ ಪಾರ್ಟಿಗಳಿಗೆ ಕಡ್ಡಾಯ ನಿಯಮಾವಳಿ, ಕೆಲವೊಂದು ವರ್ಗದ ಕಾರ್ಮಿಕರು ವಲಸೆಗೆ ಹೋಗಿರುವುದು, ಮದ್ಯದ ಬೆಲೆ ಏರಿಕೆ ಮೊದಲಾದವುಗಳು ಮಾರಾಟ ಕಡಿಮೆಯಾಗಲು ಕಾರಣವಾಗಿದೆ ಎಂದು ಅಬಕಾರಿ ಇಲಾಖೆ ಡಿಸಿ ಟಿ.ಎಂ. ಶ್ರೀನಿವಾಸ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.