Puttige Paryaya: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜನ್ಮಭೂಮಿಯ ಗೌರವಾಭಿನಂದನೆ


Team Udayavani, Jan 11, 2024, 1:51 PM IST

Puttige Paryaya: ಪುತ್ತಿಗೆ ಸುಗುಣೇಂದ್ರ ತೀರ್ಥ ಶ್ರೀಪಾದರಿಗೆ ಜನ್ಮಭೂಮಿಯ ಗೌರವಾಭಿನಂದನೆ

ಪಡುಬಿದ್ರಿ: ಮಾಣಿಯೂರು ಅನಂತ ಪದ್ಮನಾಭನ ಸನ್ನಿಧಾನ ಅಭಿವೃದ್ಧಿಯಾಗಿರುವುದು ಸಂತಸ ತಂದಿದೆ. ಅತನ ಪೂಜೆಯೇ ತನಗೆ ಮುಂದೆ ಕೃಷ್ಣಪೂಜಾ ದೀಕ್ಷೆಯು ದೊರೆಯಲು ಕಾರಣವಾಗಿತ್ತು. ಜನ್ಮಭೂಮಿಯ ದರ್ಶನದ ಸಂತೋಷ ಎಲ್ಲಿ ಹೋದರೂ ಆಗದು. ಅನಂತ ಪದ್ಮನಾಭನ ಜಾಗೃತ ಸನ್ನಿಧಾನ ಇಲ್ಲಿದೆ. ನಮ್ಮ ಪರ್ಯಾಯವು ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಹಾಗೂ ನಮ್ಮ ಜನ್ಮಭೂಮಿ ಮಾಣಿಯೂರಿನ ಅಭಿವೃದ್ಧಿಯ ನೆನಪಲ್ಲಿ ಸದಾ ಹಸಿರಾಗಿರುತ್ತದೆ. ಈ ಬಾರಿಯೂ ಮಾಣಿಯೂರಿನವರದ್ದೇ ಪರ್ಯಾಯ. ತಾವೆಲ್ಲರೂ ಉಡುಪಿಯಲ್ಲಿದ್ದು ಅದನ್ನು ನಡೆಸಿಕೊಡಬೇಕೆಂದು ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.

ಅವರು ಜ. 11ರಂದು ಎಲ್ಲೂರು ಸಮೀಪದ ಮಾಣಿಯೂರು ಮಠದಲ್ಲಿ ತಾವು ಕಲಿತು ಈಗ ಮುನ್ನಡೆಸುತ್ತಿರುವ ಕೆಮುಂಡೇಲು ಅನುದಾನಿತ ಹಿ. ಪ್ರಾ. ಶಾಲೆ, ಶ್ರೀ ಪಾಂಡುರಂಗ ಭಜನ ಮಂಡಳಿ ಕೆಮುಂಡೇಲು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುದರಂಗಡಿ ಮತ್ತು ಜನ್ಮಭೂಮಿ ಗೌರವಾಭಿನಂದನ ಸಮಿತಿಗಳ ಆಶ್ರಯದಲ್ಲಿನ `ಗೌರವಾಭಿನಂದನೆ’ಯನ್ನು ಸ್ವೀಕರಿಸಿ ನೆರೆದಿದ್ದವರನ್ನು ಹರಸಿ ಮಾತನಾಡಿದರು.

ಕೆಮುಂಡೇಲು ಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಜಗನ್ನಾಥ ಶೆಟ್ಟಿ, ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಪುಲ್ಲ ಶೆಟ್ಟಿ, ಮುದರಂಗಡಿಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣ ದೇವಾಡಿಗ, ಪಾಂಡುರಂಗ ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್, ಎಲ್ಲೂರು ಗ್ರಾ. ಪಂ. ಮಾಜಿ ಅಧ್ಯಕ್ಷ ಜಯಂತಕುಮಾರ್ ಉಪಸ್ಥಿತರಿದ್ದರು.

ಮಾಣಿಯೂರು ಮಠಕ್ಕಾಗಮಿಸುವ ರಸ್ತೆ ಕಾಂಕ್ರೀಟೀಕರಣಕ್ಕೆ ಹಾಗೂ ಅಭಿವೃದ್ಧಿಗೆ ಸಹಕರಿಸಿದ ಮಾಜಿ ಗ್ರಾ. ಪಂ. ಸದಸ್ಯೆ ತೆರೇಸಾ, ಜಯಂತ್ ಕುಮಾರ್ ಹಾಗೂ ಗಂಜೀಫಾ ಚಿತ್ರಕಲೆಗಳಿಂದ ಮಾಣಿಯೂರು ಮಠದ ಅಂದವನ್ನು ಹೆಚ್ಚಿಸಿರುವ ಉಪಾಧ್ಯಾಯ ಮೂಡುಬೆಳ್ಳೆ ಅವರನ್ನು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಮಂತ್ರಾಕ್ಷತೆಗಳನ್ನಿತ್ತು ಗೌರವಿಸಿ ಅಭಿನಂದಿಸಿದರು.

ಶ್ರೀಗಳ ಚತುರ್ಥ ಪರ್ಯಾಯ ಕಾಲದಲ್ಲಿ ಗೈಯ್ಯಲಾಗಿರುವ ಮಾಣಿಯೂರು ಮಠದ ಶ್ರೀ ಅನಂತಪದ್ಮನಾಭ ಸನ್ನಿಧಾನದ ಅಭಿವೃದ್ಧಿಕಾರ್ಯಗಳನ್ನು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಲೋಕಾರ್ಪಣೆಗೈದರು. ಕೆಮುಂಡೇಲು ಶ್ರೀ ಪಾಂಡುರಂಗ ಭಜನ ಮಂದಿರದ ಪಾಂಡುರಂಗ ದೇವರಿಗೆ ಶ್ರೀಪಾದರು ಪೂಜೆ ಸಲ್ಲಿಸಿ ತಾವು ಕಲಿತ ಕೆಮುಂಡೇಲು ಅ. ಹಿ. ಪ್ರಾ. ಶಾಲೆಗೆ ತೆರಳಿ ಅಲ್ಲಿ ನೂತನ ಶಾಲಾ ಕೊಠಡಿಗಳ ಕಟ್ಟಡವನ್ನು ಈ ಸಂದರ್ಭದಲ್ಲಿ ಉದ್ಘಾಟಿಸಿದರು. ಮಾಣಿಯೂರು ಮಠಕ್ಕೆ ಬರುವ ಸೂಚನಾ ಫಲಕವನ್ನೂ ಶ್ರೀಪಾದರು ಅನಾವರಣಗೊಳಿಸಿದರು.

ಕೆಮುಂಡೇಲು ಅ. ಹಿ. ಪ್ರಾ. ಶಾಲಾ ಮುಖ್ಯೋಪಾಧ್ಯಾಯ ಚಂದ್ರಹಾಸ ಪ್ರಭು ಸ್ವಾಗತಿಸಿ ಶ್ರೀ ಶ್ರೀಗಳ ಸಮ್ಮಾನಪತ್ರವನ್ನು ವಾಚಿಸಿದರು. ಜಾನಪದ ವಿದ್ವಾಂಸ ಕೆ. ಎಲ್. ಕುಂಡಂತಾಯ ಪ್ರಾಸ್ತಾವಿಸಿದರು. ಹರೀಶ್ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.