![River](https://www.udayavani.com/wp-content/uploads/2024/07/River-415x234.jpg)
Bribe; ಲಂಚಕ್ಕೆ ಆಮಿಷವೊಡ್ಡಿದ ಟೆಂಡರ್ದಾರ ಲೋಕಾಯುಕ್ತ ಬಲೆಗೆ!
ಅಪರೂಪದ ಪ್ರಕರಣ... ದೂರು ನೀಡಿದ್ದ ಸರ್ಕಾರಿ ಅಧಿಕಾರಿ!
Team Udayavani, Jan 11, 2024, 9:59 PM IST
![1-sadsa](https://www.udayavani.com/wp-content/uploads/2024/01/1-sadsa-620x345.jpg)
ಹಾವೇರಿ:ಟೆಂಡರ್ದಾರನೊಬ್ಬ ಲಂಚ ಕೊಡುವ ಆಮಿಷವೊಡ್ಡುತ್ತಿದ್ದಾನೆ ಎಂದು ಸರ್ಕಾರಿ ಅಧಿಕಾರಿಯೇ ದೂರು ನೀಡಿ, ಟೆಂಡರ್ದಾರನನ್ನು ಲೋಕಾಯುಕ್ತ ಬಲೆಗೆ ಬೀಳಿಸಿದ ಅಪರೂಪದ ಪ್ರಕರಣ ನಗರದಲ್ಲಿ ಗುರುವಾರ ನಡೆದಿದೆ.
ತಾಲೂಕಿನ ಗುತ್ತಲದ ಗುರುಕೃಪಾ ಎಂಟರ್ಪ್ರೈಸಸ್ ಮಾಲೀಕ ಶರಣಪ್ಪ ಸಿದ್ದಪ್ಪ ಶೆಟ್ಟರ್ ಬಂಧಿತ ಟೆಂಡರ್ದಾರ. ಇವರ ವಿರುದ್ಧ ಹಾವೇರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಭರತ್ ಹೆಗಡೆ ದೂರು ಕೊಟ್ಟಿದ್ದರು.
ಹಾವೇರಿ ತಾಲೂಕು ಪಂಚಾಯಿತಿಯಿಂದ ಸಾಮಗ್ರಿ ಪೂರೈಕೆಗಾಗಿ ಕರೆದ ಟೆಂಡರ್ನಲ್ಲಿ ಶರಣಪ್ಪ ಅವರು ಈ ಟೆಂಡರ್ ನನಗೇ ಸಿಗುವಂತೆ ಮಾಡಿದ್ದಲ್ಲಿ ಟೆಂಡರ್ ಮೊತ್ತದ ಶೇ. 20ರಷ್ಟು ಹಣವನ್ನು ನಿಮಗೆ ಕೊಡುತ್ತೇನೆ ಎಂದು ಒತ್ತಾಯಿಸಿ, ಲಂಚ ತೆಗೆದುಕೊಳ್ಳುವಂತೆ ಆಮಿಷ ಒಡ್ಡಿದ್ದರು ಎಂದು ತಾಪಂ ಇಒ ಭರತ್ ಹೆಗಡೆ ಲೋಕಾಯುಕ್ತರಿಗೆ ದೂರು ನೀಡಿದ್ದರು.
2 ಲಕ್ಷ ರೂ., ಮುಂಗಡವಾಗಿ ನೀಡಲು ಭರವಸೆ ನೀಡಿ, ನಗರದ ಖಾಸಗಿ ಹೋಟೆಲ್ನಲ್ಲಿ 90 ಸಾವಿರ ರೂ.,ಲಂಚ ಕೊಡುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಸರ್ಕಾರಿ ಅಧಿಕಾರಿ ಲಂಚ ಮುಟ್ಟದೆ, ಲಂಚ ಕೊಡುವವನನ್ನೇ ಹಿಡಿದುಕೊಟ್ಟಿದ್ದು, ಲೋಕಾಯುಕ್ತ ಪ್ರಕರಣಗಳಲ್ಲಿಯೇ ವಿರಳ ಘಟನೆ ಎನಿಸಿದೆ. ಇದನ್ನು ರಿವರ್ಸ್ ಟ್ರ್ಯಾಪ್ ಎನ್ನುತ್ತೇವೆ ಎಂದು ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ಬಿ.ಪಿ. ತಿಳಿಸಿದರು.
ಟಾಪ್ ನ್ಯೂಸ್
![River](https://www.udayavani.com/wp-content/uploads/2024/07/River-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![River](https://www.udayavani.com/wp-content/uploads/2024/07/River-150x84.jpg)
Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ, ಇಬ್ಬರು ಸಾವು
![Goverment-school](https://www.udayavani.com/wp-content/uploads/2024/07/Goverment-school-150x90.jpg)
Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ
![1-sa-dsadsa](https://www.udayavani.com/wp-content/uploads/2024/07/1-sa-dsadsa-150x84.jpg)
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
![1-asdsad](https://www.udayavani.com/wp-content/uploads/2024/07/1-asdsad-150x100.jpg)
Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ
![pejawar swamiji reacts to Rahul Gandhi’s Hindu remark on parliament](https://www.udayavani.com/wp-content/uploads/2024/07/pejara-150x83.jpg)
Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.