POCSO ಕಾಯ್ದೆ ಅರಿವು ಮೂಡಿಸಲು ಶಾಲೆಗಳಲ್ಲಿ “ತೆರೆದ ಮನೆ” ಕಾರ್ಯಕ್ರಮ
ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ, ಮಾರ್ಗಸೂಚಿ ಒದಗಿಸಿದ ಶಾಲಾ ಶಿಕ್ಷಣ ಇಲಾಖೆ
Team Udayavani, Jan 11, 2024, 11:59 PM IST
ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ ಕುರಿತು ಅರಿವು ಮೂಡಿಸಲು ಎಲ್ಲ ಶಾಲೆಗಳಲ್ಲಿ “ತೆರೆದ ಮನೆ’ ಕಾರ್ಯಕ್ರಮ ಆಯೋಜಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಪ್ರತಿ ಶಾಲೆಗಳಿಗೆ ಸೂಚನೆ ನೀಡಿದೆ.
18 ವರ್ಷದೊಳಗಿನ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಕಿರುಕುಳ ಮುಂತಾದ ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯಕ್ರಮ ಅನುಷ್ಠಾನ ಮಾಡಲು ಸೂಚಿಸಿದೆ. ಮಕ್ಕಳಿಗೆ ರಕ್ಷಣೆ, ಭದ್ರತೆ, ನ್ಯಾಯ ಒದಗಿಸಿ, ಅವರ ಆಸಕ್ತಿ, ಹಿತ ಕಾಪಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚಿಸಲಾಗಿದೆ. ಕರ್ನಾಟಕ ರಾಜ್ಯ ಮಕ್ಕಳ ರಕ್ಷಣ ನೀತಿ-2016 ಹಾಗೂ ಫೋಕ್ಸೋ ಕಾಯ್ದೆ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಂಬಂಧಿಸಿದ ಶಾಲೆಗಳು, ಆಡಳಿತ ಮಂಡಳಿ, ಇಲಾಖೆಗಳು, ಪಾಲಕರು, ಎಸ್ಡಿಎಂಸಿ ಸಹಿತ ಎಲ್ಲ ಪಾಲುದಾರರು ಕೈಗೊಳ್ಳಬೇಕಾದ ಕ್ರಮಗಳ ಕುರಿತ ಪ್ರಮಾಣೀಕೃತ ಕಾರ್ಯಚರಣ ವಿಧಾನ, ಮಾರ್ಗಸೂಚಿಯನ್ನು ಆಯೋಗವು ಈಗಾಗಲೇ ಒದಗಿಸಿದೆ.
ಯಾವಾಗ “ತೆರೆದ ಮನೆ”?
ಶಾಲೆಗಳಲ್ಲಿ ಪ್ರಾರ್ಥನಾ ಸಮಯ, ಬಿಡುವಿನ ವೇಳೆ, ಸಂದರ್ಭ ಅನುಸಾರ ಬೋಧನಾ ಅವಧಿ, ವಿವಿಧ ಸಾಂಸ್ಕೃತಿಕ ಚಟುವಟಿಕೆ, ರಾಷ್ಟ್ರೀಯ ಹಬ್ಬಗಳ ಸಂದರ್ಭ, ಪೋಷಕರ ಸಭೆ, ತಾಯಂದಿರ ಸಭೆ, ಸಮುದಾಯದತ್ತ ಶಾಲೆಯಂತಹ ಕಾರ್ಯಕ್ರಮಗಳಲ್ಲಿ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕೆಂದು ಎಲ್ಲ ಶಾಲೆಗಳಿಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸೂಚಿಸಿದ್ದಾರೆ. ಇಲಾಖೆಯ ಎಲ್ಲ ಶಾಲಾ ಉಸ್ತುವಾರಿ ಮತ್ತು ಮೇಲ್ವಿಚಾರಣ ಅಧಿಕಾರಿಗಳು, ರಾಜ್ಯದ ಎಲ್ಲ ಸರಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಶಿಕ್ಷಕರಿಗೆ ಈ ಮೂಲಕ ಸೂಚನೆ ಕೊಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.