![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Jan 12, 2024, 4:47 PM IST
ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯಿರುವ ಶ್ರೀ ರಾಮೇಶ್ವರ ದೇವಸ್ಥಾನದ ಎಳ್ಳಮಾವಾಸ್ಯೆ ಜಾತ್ರೆಯ ಎರಡನೇ ದಿನವಾದ ಶುಕ್ರವಾರ ಶ್ರೀ ರಾಮೇಶ್ವರ ದೇವರ ರಥೋತ್ಸವ ನಡೆಯಿತು.
ಈ ರಥೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ರಥಕ್ಕೆ ಹಣ್ಣುಕಾಯಿ ಮಾಡಿಸುವುದರ ಮುಖಾಂತರ ಶ್ರದ್ಧಾ ಭಕ್ತಿಯಿಂದ ಪಾಲ್ಗೊಂಡಿದ್ದರು. ಮಧ್ಯಾಹ್ನ ಅನ್ನ ದಾಸೋಹ ಮಿತ್ರವೃಂದದಿಂದ ಪಾಲ್ಗೊಂಡ ಎಲ್ಲಾ ಭಕ್ತಾದಿಗಳಿಗೆ ಅನ್ನ ಪ್ರಸಾದ ವಿತರಿಸಲಾಯಿತು. ಈ ಅನ್ನ ಪ್ರಸಾದವನ್ನು ಭಕ್ತರು ಸರದಿ ಸಾಲಿನಲ್ಲಿ ನಿಂತು ಶಿಸ್ತು ಬದ್ಧವಾಗಿ ಸ್ವೀಕರಿಸಿದರು. ಈ ಭೋಜನ ಪ್ರಸಾದ ಸ್ವೀಕರಿಸುವ ಸಂದರ್ಭದಲ್ಲಿ ಇಂದಿರಾನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಂಹಿತಾ ಎಂಬ ಪುಟ್ಟ ವಿದ್ಯಾರ್ಥಿನಿಯೋರ್ವಳು ಜನಸಂದಣಿಯಲ್ಲಿ ಕೈತಪ್ಪಿ ಬಿದ್ದ ಅನ್ನ ಪ್ರಸಾದವನ್ನು ಅಲ್ಲೇ ಬಿಡದೆ ಅಷ್ಟೊಂದು ಜನರ ನಡುವೆಯೂ ಸ್ವಚ್ಛತೆಯೆಡೆಗೆ ವಿಶೇಷ ಗಮನಹರಿಸಿ ಸಂಪೂರ್ಣವಾಗಿ ತೆಗೆದು ಸ್ವಚ್ಛ ಮಾಡಿದಳು.
ಈ ದೃಶ್ಯವನ್ನು ನೋಡಿದಂತಹ ಅಲ್ಲಿ ನೆರೆದಂತ ಅನೇಕ ಭಕ್ತಾದಿಗಳು ಆಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುವುದರ ಜೊತೆಗೆ ಆಕೆಯ ಉತ್ತಮ ಸಂಸ್ಕಾರಯುತ ನಡತೆಯನ್ನು ನೋಡಿ ಸಂತಸ ವ್ಯಕ್ತಪಡಿಸಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.