ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ
ಅಭಿವೃದ್ದಿ ಕಾಣದೇ ಸೊರಗುತ್ತಿದೆ ಇತಿಹಾಸ ಪ್ರಸಿದ್ಧ ದೇವಾಲಯ
Team Udayavani, Jan 12, 2024, 10:14 PM IST
ಕೊರಟಗೆರೆ: ತಾಲೂಕಿನ ಹೊಳವನಹಳ್ಳಿ ಹೋಬಳಿಯ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರವಾದ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಉಪ ತಹಸೀಲ್ದಾರ್ ಜಯಪ್ರಕಾಶ್ ನೇತೃತ್ವದಲ್ಲಿ ಎಣಿಸಲಾಯಿತು.
ವರ್ಷಕ್ಕೆ ಎರಡು ಬಾರಿ ಹುಂಡಿಯಲ್ಲಿರುವ ಹಣವನ್ನು ತೆಗೆಯಲಾಗುತ್ತದೆ. ಪ್ರತಿವರ್ಷ ದನಗಳ ಜಾತ್ರೆ ನಡೆಯುವ ಒಂದು ತಿಂಗಳ ಮುಂಚಿತವಾಗಿ ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿರುವ ಹುಂಡಿಯನ್ನ ಹೊಡೆದು ದೇವಸ್ಥಾನದ ಖಾತೆಗೆ ಹಾಕಲಾಗುತ್ತದೆ. ಈ ಭಾರಿ ದೇವಸ್ಥಾನದ ಹುಂಡಿಯಲ್ಲಿ ಸುಮಾರು 7 ಲಕ್ಷದ 2,640 ರೂ ಸಂಗ್ರಹವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹುಣಸೆ ಮರ ಹಣ್ಣಿನ ಹರಾಜು
ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನದ ಸುತ್ತಮುತ್ತ ಸುಮಾರು 25 ಕ್ಕೂ ಹೆಚ್ಚು ಹುಣಸೆ ಮರಗಳು ಇದ್ದು, ಪ್ರತಿವರ್ಷದಂತೆ ಈ ವರ್ಷವು ಸಹ ಹುಣಸೆ ಮರಗಳ ಹಣ್ಣನ್ನು ಹರಾಜು ಮಾಡಲಾಗಿದೆ. ಹರಾಜಿನಲ್ಲಿ 76 ಸಾವಿರಕ್ಕೆ ಹರಾಜು ಮಾಡಲಾಗಿದೆ ಎಂದು ತಿಳಿದುಬಂದಿದೆ.
ದನಗಳ ಜಾತ್ರೆ ಹರಾಜು
2024 ರ ದನಗಳ ಜಾತ್ರೆ, ವಾಹನದ ಸುಂಕ, ಅಂಗಡಿಗಳ ಸುಂಕ ಹಾಗೂ ಬ್ರಹ್ಮರಥೋತ್ಸವದ ದಿನದೊಂದು ಹಣ್ಣುಕಾಯಿಯ ಸುಂಕದ ಹರಾಜು ಪ್ರಕ್ರಿಯೆ ನಡೆದಿದೆ. ದನಗಳಿಗೆ ಸುಂಕ ಹಾಗೂ ವಾಹನದ ಸುಂಕವನ್ನು 1 ಲಕ್ಷದ 30 ಸಾವಿರಕ್ಕೆ ಹರಾಜು ನಡೆದಿದೆ. ದೇವಸ್ಥಾನದ ಸುತ್ತಮುತ್ತ ಇರುವ ಅಂಗಡಿಗಳ ಸುಂಕವನ್ನು 1 ಲಕ್ಷದ 52 ಸಾವಿರಕ್ಕೆ ಹರಾಜು ನೆಡೆದಿದೆ. ಬ್ರಹ್ಮರಥೋತ್ಸವದ ದಿನದೊಂದು ಹಣ್ಣುಕಾಯಿ ಸುಂಕವನ್ನ 15 ಸಾವಿರಕ್ಕೆ ಹರಾಜು ನಡೆದಿದೆ ಎಂದು ತಿಳಿದುಬಂದಿದೆ.
ಹರಾಜು ಪ್ರಕ್ರಿಯೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ನರಸಿಂಹಮೂರ್ತಿ, ಕಂದಾಯ ಅಧಿಕಾರಿ ಜಯಪ್ರಕಾಶ್, ಸತ್ಯನಾರಾಯಣ್ ರಾವ್ ಮುಖಂಡರಾದ ಜಯರಾಮ್, ರಾಮಕೃಷ್ಣಯ್ಯ, ಸುಬಾನ್, ಬಾಲರಾಜು, ಕೇಶವಮೂರ್ತಿ, ಕಾಳಿಚರಣ್, ಜಯರಾಜ್, ಶಶಿಧರ್, ಚಂದ್ರಣ್ಣ, ಹನುಮಂತರಾಜು, ಉಮಾಶಂಕರ್, ಸಣ್ಣರಂಗಯ್ಯ, ಮಂಜಣ್ಣ, ರಂಗರಾಜು, ಶ್ರೀನಿವಾಸ್ ಸೇರಿದಂತೆ ಸಾರ್ವಜನಿಕರು ಹಾಜರಿದ್ದರು.
ಅಭಿವೃದ್ಧಿ ಕಾಣದ ಆಂಜನೇಯಸ್ವಾಮಿ ದೇವಸ್ಥಾನ
ಕ್ಯಾಮೇನಹಳ್ಳಿ ಆಂಜನೇಯಸ್ವಾಮಿ ದೇವಸ್ಥಾನ ಸುಮಾರು 3 ಸಾವಿರಕ್ಕೂ ಅಧಿಕ ಪುರಾತನ ಕಾಲದ ದೇವಸ್ಥಾನವಾಗಿದ್ದು, ಅದರೆ ಅಭಿವೃದ್ದಿ ಕಾಣದೇ ಸೊರಗುತ್ತಿದೆ. ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದ್ದು, ದೇವಸ್ಥಾನದ ಖಾತೆಯಲ್ಲಿ ಸಾಕಷ್ಟು ಹಣ ಇದ್ದರೂ ದೇವಸ್ಥಾನದ ಅಭಿವೃದ್ದಿ ಮಾಡುವಲ್ಲಿ ಅಧಿಕಾರಗಳು ವಿಫಲರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Pavagada: ಆಂಬ್ಯುಲೆನ್ಸ್ ಸಿಗದೆ ವೃದ್ದ ಮೃತದೇಹವನ್ನು ಬೈಕ್ ನಲ್ಲಿಯೇ ಕೊಂಡೊಯ್ದ ಮಕ್ಕಳು
Minister V. Somanna ಹಾಲಿನ ದರ ಏರಿಕೆ ಗ್ಯಾರಂಟಿಗೆ ಬಳಸಿದ್ರೆ ವಿರೋಧ
Tumkur ಕೊಟ್ಟಿಗೆಗೆ ನುಗ್ಗಿದ 5 ಚಿರತೆಗಳು: 32 ಕುರಿಗಳ ಸಾವು
BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.