Ayodhya Ram Mandir ಲೋಕಾರ್ಪಣೆಯಲ್ಲಿ ಭಿನ್ನಾಭಿಪ್ರಾಯವಿಲ್ಲ: ಹರಿಹರಪುರ ಶ್ರೀ
ವದಂತಿಗಳಿಗೆ ಯಾರೂ ಕಿವಿಗೊಡಬಾರದೆಂದು ಶ್ರೀಗಳ ವಿಡಿಯೋ ಹೇಳಿಕೆ
Team Udayavani, Jan 13, 2024, 12:39 PM IST
ಚಿಕ್ಕಮಗಳೂರು: ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆಗೆ ಶಂಕರಗುರು ಪರಂಪರೆ ಮಠಗಳ ಭಿನ್ನಾಭಿಪ್ರಾಯವಿಲ್ಲ. ವದಂತಿಗಳಿಗೆ ಯಾರೂ ಕಿವಿಗೊಡಬಾರದು ಎಂದು ಹರಿಹರಪುರ ಮಠದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ತಿಳಿಸಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ನೀಡಿರುವ ಅವರು, ಶ್ರೀರಾಮಮಂದಿರ ಲೋಕಾರ್ಪಣೆ ವಿಷಯದಲ್ಲಿ ಯಾರಿಗೂ ಅಸಮಾಧಾನವಿಲ್ಲ. ಯಾರಾದರೂ ಅಸಮಾಧಾನಗೊಂಡಿದ್ದರೆ ಅದು ಅವರ ವೈಯಕ್ತಿಕ ವಿಷಯ. ಶ್ರೀರಾಮ ಮತ್ತು ಶಂಕರ ಪರಂಪರೆಗೂ ಏನು ಸಂಬಂಧ ಎಂಬುದನ್ನು ತಿಳಿದುಕೊಳ್ಳಬೇಕು. ಶಂಕರ ಪರಂಪರೆಯ ಮೂಲ ಪುರುಷರಾದ ಆದಿಶಂಕರರು ತಮ್ಮ ಅದ್ವೈತ ಸಿದ್ಧಾಂತದ ಮೂಲಕ ಪರಮಾತ್ಮನನ್ನು ತತ್ವ ಸ್ವರೂಪ ದಲ್ಲಿ ಆರಾಧಿಸುವ ಪದ್ಧತಿಯನ್ನು ಜಗತ್ತಿಗೆ ಕೊಟ್ಟಿದ್ದಾರೆ. ಹರಿ-ಹರ ಇಬ್ಬರೂ ಸಮಾನವಾದ ರೂಪಗಳು. ಈ ಇಬ್ಬರನ್ನೂ ಸಮಾನವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸುವ ಏಕೈಕ ಪರಂಪರೆ ಎಂದರೆ ಶಂಕರ ಪರಂಪರೆ. ಅಯೋಧ್ಯೆ ಶ್ರೀರಾಮ ಎಂದರೆ ಭಾರತೀಯ ಸಂಸ್ಕೃತಿಗೆ ಸೇರಿದ ದೇವರು. ಶ್ರೀರಾಮ ಹುಟ್ಟಿದ್ದು ಅಯೋಧ್ಯೆಯಲ್ಲಿ. ಅಲ್ಲಿ ಪುರಾತನ ದೇವಾಲಯ ಇತ್ತು. ಆಕ್ರಮಣದಿಂದ ಅದು ನಾಶವಾಗಿತ್ತು. 500 ವರ್ಷ ಞಗಳ ತ್ಯಾಗ, ಸಮ ರ್ಪಣಾ ಮನೋಭಾವದಿಂದ ಅದೇ ಸ್ಥಳದಲ್ಲಿ ಶ್ರೀರಾಮಚಂದ್ರ ನೆಲೆಸುತ್ತಿದ್ದಾನೆ. ಇದು ಭಾರತೀಯರಿಗೆ ಹೆಮ್ಮೆಯ ವಿಷಯವಾಗಿದೆ. ರಾಮಮಂದಿರ ಲೋಕಾ ರ್ಪಣೆಗೊಳ್ಳುವ ದಿನ ಎಲ್ಲಾ ಮಠಗಳಲ್ಲೂ ಶ್ರೀ ರಾಮಚಂದ್ರನ ಆರಾಧನೆ ಮಾಡಲು ಸಂಕಲ್ಪ ಮಾಡಿದ್ದೇವೆ. ಸನಾತನ ಧರ್ಮದ ಎಲ್ಲರೂ ಸೇರಿ ಒಟ್ಟಾಗಿ ಪೂಜಿಸಬೇಕು. ಇದರಲ್ಲಿ ಜಾತಿ ಮತ್ತು ಪಕ್ಷವನ್ನು ತರಬಾರದು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ದಾಳಿ
MUDA Case: ಸಿದ್ದರಾಮಯ್ಯ ಕಳಂಕ ರಹಿತರೆಂದು ತನಿಖೆಯಲ್ಲಿ ಸಾಬೀತಾಗಲಿ: ಎಂಎಲ್ಸಿ ಸಿ.ಟಿ.ರವಿ
ಮುತ್ತೋಡಿ ಅಭಯಾರಣ್ಯಕ್ಕೆ ರಜತ ಸಂಭ್ರಮ; ಕಣ್ಮನ ಸೆಳೆಯುತ್ತಿವೆ ಜೀವ ಸಂಕುಲ
Kottigehara: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು
Navaratri: ಅ.3ರಿಂದ ಕೊಟ್ಟಿಗೆಹಾರ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ ಆರಂಭ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.