Bangalore: ವಿದೇಶಿ ಪೆಡ್ಲರ್‌ನಿಂದ 12.6 ಲಕ್ಷ ರೂ. ಜಪ್ತಿ : ದೇಶದಲ್ಲೇ ಮೊದಲು

ಮಾದಕ ವಸ್ತು ಮಾರಾಟ ಮಾಡಿ ಲಕ್ಷಾಂತರ ರೂ. ಸಂಪಾದಿಸಿದ್ದ ಆರೋಪಿ

Team Udayavani, Jan 13, 2024, 3:45 PM IST

8-bng

ಬೆಂಗಳೂರು: ವಿದೇಶಿ ಡ್ರಗ್ಸ್‌ ಪೆಡ್ಲರ್‌ನನ್ನು ಹೆಡೆಮುರಿಕಟ್ಟಿದ ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳ ವಿಭಾಗದ ಪೊಲೀಸರು 12.60 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ಡ್ರಗ್ಸ್‌ ಪೆಡ್ಲರ್‌ನಿಂದ ಹಣ ಮುಟ್ಟುಗೋಲು ಹಾಕಿಕೊಂಡಿರುವುದು ದೇಶದಲ್ಲೇ ಮೊದಲ ಪ್ರಕರಣ ಇದಾಗಿದೆ. ಈ ಕುರಿತು ಪೊಲೀಸ್‌ ಇಲಾಖೆ ತಿಳಿಸಿದೆ.

ನೈಜೀರಿಯಾ ಮೂಲದ ಪೀಟರ್‌ ಇಕೆಡಿ ಬೆಲನ್ವು (38) ಬಂಧಿತ.

12.60 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. 2023ರ ನವೆಂಬರ್‌ನಲ್ಲಿ ಡ್ರಗ್ಸ್‌ ಪೆಡ್ಲರ್‌ ಆಗಿದ್ದ ಆರೋಪಿ ಪೀಟರ್‌ ಇಕೆಡಿ ಬೆಲನ್ವುನನ್ನು ವಿದ್ಯಾರಣ್ಯ ಪುರ ಠಾಣಾ ಪೊಲೀಸರು ಬಂಧಿಸಿದ್ದರು. ಈತ ಡ್ರಗ್ಸ್‌ ನಿಂದ ಲಕ್ಷಾಂತರ ರೂ. ಸಂಪಾದಿಸಿರುವುದು ಹಾಗೂ ವಿವಿಧ ಬ್ಯಾಂಕ್‌ ಗಳ ಪಾಸ್‌ಬುಕ್‌, ಡೆಬಿಟ್‌ ಕಾರ್ಡ್‌ ಹೊಂದಿರುವ ಸಂಗತಿ ಸಿಸಿಬಿ ಪೊಲೀಸರ ಗಮನಕ್ಕೆ ಬಂದಿತ್ತು.

ಸಿಸಿಬಿ ಪೊಲೀಸರು ಎನ್‌ಡಿಪಿಎಸ್‌ ಕಾಯ್ದೆಯಡಿ ತನಿಖಾಧಿ ಕಾರಿಗಳಿಗಿರುವ ಅಧಿಕಾರ ಚಲಾಯಿಸಿ ಆರೋಪಿಯ ಪತ್ನಿಯ ಎರಡು ಬ್ಯಾಂಕ್‌ ಖಾತೆಯಿಂದ 2.55 ಲಕ್ಷ ರೂ. ಹಾಗೂ ಆರೋಪಿಯ ಇತರ 5 ಬ್ಯಾಂಕ್‌ ಖಾತೆಗಳಲ್ಲಿದ್ದ 4.90 ಲಕ್ಷ ಸೇರಿ 7 ಬ್ಯಾಂಕ್‌ ಖಾತೆಗಳಲ್ಲಿ ಒಟ್ಟು 12.60 ಲಕ್ಷ ರೂ. ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಸಕ್ಷಮ ಪ್ರಾಧಿಕಾರ ಮತ್ತು ಆಡಳಿತಾಧಿಕಾರಿಗಳಾದ ಸಫೇಮಾ (ಎಫ್ಒಪಿ) ಹಾಗೂ ಎನ್‌ಡಿಪಿಎಸ್‌ಎ, ಚೆನ್ನೈರವರು ಎನ್‌ಡಿಪಿಎಸ್‌ ಕಾಯ್ದೆ ಅಧ್ಯಾಯ 5(ಎ) ಕಲಂ. 68(ಎಫ್)(2) ರಲ್ಲಿ ವಿಚಾರಣೆ ಕೈಗೊಂಡು, ಜ.11ರಂದು ಈ ಮುಟ್ಟುಗೋಲು ಆದೇಶ ಅನು ಮೋದಿಸಲ್ಪಟ್ಟಿದೆ ಎಂದು ತಿಳಿದು ಬಂದಿದೆ.

ಡ್ರಗ್ಸ್ ವಹಿವಾಟಿಗಾಗಿ 7 ಬ್ಯಾಂಕ್‌ ಖಾತೆ‌

ಆರೋಪಿಯು 2018ರಲ್ಲಿ ವೈದ್ಯಕೀಯ ವೀಸಾದ ಆಧಾರದಲ್ಲಿ ಭಾರತಕ್ಕೆ ಬಂದಿದ್ದ. ನಂತರ 2022ರಲ್ಲಿ ಮಣಿಪುರ ಮೂಲದ ಮಹಿಳೆಯನ್ನು ವಿವಾಹವಾಗಿದ್ದ. ಆಕೆಯ ಹೆಸರಿನಲ್ಲಿ ಬೆಂಗಳೂರು ನಗರದಲ್ಲಿ ಎರಡು ಬ್ಯಾಂಕ್‌ ಖಾತೆಗಳನ್ನು ಹಾಗೂ ನಕಲಿ ದಾಖಲಾತಿಗಳನ್ನು ನೀಡಿ ಇತರರ ಹೆಸರಿನಲ್ಲಿ ಐದು ಬ್ಯಾಂಕ್‌ ಖಾತೆಗಳು ಸೇರಿದಂತೆ ಒಟ್ಟು ಏಳು ಬ್ಯಾಂಕ್‌ ಖಾತೆಗಳನ್ನು ತೆರೆದಿದ್ದ. ಈ ಖಾತೆಗಳಿಂದ ಗೂಗಲ್‌ ಪೇ ಹಾಗೂ ಫೋನ್‌ ಪೇ ಮೂಲಕ ಡ್ರಗ್ಸ್‌ ಪೆಡ್ಲಿಂಗ್‌ ಹಣದ ವಹಿವಾಟನ್ನು ನಿರ್ವಹಿಸುತ್ತಿದ್ದ ಎಂಬ ಅಂಶಗಳು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಏಳು ಡ್ರಗ್ಸ್ ಪೆಡ್ಲರ್‌ಗಳ ಬಂಧನ, 1.66 ಕೋಟಿ ರೂ. ಮಾದಕ ವಸ್ತು ಜಪ್ತಿ

ಬೆಂಗಳೂರು: ಕಳೆದ ಒಂದು ವಾರದಿಂದ ಪ್ರತ್ಯೇಕ 5 ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತಾರಾಷ್ಟ್ರೀಯ ಡ್ರಗ್ಸ್‌ ಪೆಡ್ಲರ್‌ ಸೇರಿದಂತೆ 7 ಮಾದಕ ವಸ್ತುಗಳ ದಂಧೆಕೋರರನ್ನು ಬಂಧಿಸಿರುವ ಸಿಸಿಬಿ ಪೊಲೀಸರು, 1.66 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ.

ಬಂಧಿತರಿಂದ 18.5 ಕೆಜಿ ಗಾಂಜಾ, 203 ಗ್ರಾಂ ಎಂಡಿಎಂಎ, 410 ಎಕ್ಸ್‌ಟಸಿ ಪಿಲ್ಸ್, 7 ಮೊಬೈಲ್, 2 ದ್ವಿ‌ ಚಕ್ರ ವಾಹನ, 1 ಕಾರು ಜಪ್ತಿ ಮಾಡಿಕೊಳ್ಳಲಾಗಿದೆ.

ಏಳು ಜನ ಡ್ರಗ್‌ ಪೆಡ್ಲರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1.66 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ್ದಾರೆ. ಸಿಸಿಬಿ ಪೊಲೀಸರು ಕಳೆದ ಒಂದು ವಾರದಲ್ಲಿ ಬೆಂಗಳೂರಿನ ಗಿರಿನಗರ, ಮಡಿವಾಳ, ಚಿಕ್ಕಜಾಲ, ಆರ್‌ಟಿ ನಗರ, ಬೈಯಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಬಗೆಯ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ್ದರು.

■ ಉದಯವಾಣಿ ಸಮಾಚಾರ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.