TRS ಹೆಸರು BRS ಆಗಿದ್ದಕ್ಕೆ ತೆಲಂಗಾಣದಲ್ಲಿ ಸೋಲು
ಮತ್ತೆ ಹೆಸರು ಬದಲಿಸಲು ನಾಯಕರಿಗೆ ಕಾರ್ಯಕರ್ತರ ಒತ್ತಡ
Team Udayavani, Jan 14, 2024, 12:40 AM IST
ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂದು ಬದಲಿಸಿದ್ದೇ ಇತ್ತೀಚೆಗೆ ನಡೆದ ತೆಲಂಗಾಣ ಚುನಾವಣೆಯಲ್ಲಿ ಸೋಲಿಗೆ ಕಾರಣ. ಹೀಗಾಗಿ, ಮತ್ತೆ ಪಕ್ಷದ ಹೆಸರನ್ನು ತೆಲಂಗಾಣ ರಾಷ್ಟ್ರ ಸಮಿತಿ ಎಂದು ಬದಲಿಸಲು ಬೇಡಿಕೆ ಹೆಚ್ಚತೊಡಗಿದೆ. ಈ ಬಗ್ಗೆ ಪಕ್ಷದ ಕಾರ್ಯಾಧ್ಯಕ್ಷ ಮತ್ತು ಮಾಜಿ ಡಿಸಿಎಂ ಕೆ.ಟಿ.ರಾಮ ರಾವ್ ಅವರಿಗೆ ಪಕ್ಷದ ಕಾರ್ಯಕರ್ತರು ಸಲಹೆಗಳನ್ನು ನೀಡಿದ್ದಾರೆ.
ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಮಾತನಾಡಿ ತೆಲಂಗಾಣ ರಾಷ್ಟ್ರ ಸಮಿತಿ ಹೆಸರಿನಿಂದ ತೆಲಂಗಾಣ ಪದವನ್ನು ತೆಗೆದುಹಾಕಿದ್ದು ಮೇಲ್ನೋಟಕ್ಕೆ ರಾಜ್ಯದ ಜತೆಗೆ ಸಂಬಂಧವನ್ನು ಕಡಿದುಕೊಂಡಂತೆ ಆಗಿದೆ ಎಂದಿದ್ದಾರೆ. ಇತ್ತೀಚಿನ ವಿಧಾನಸಭೆ ಚುನಾ ವಣೆಯಲ್ಲಿ ಸೋಲಿನ ಕಾರಣಗಳನ್ನು ಕಂಡು ಕೊಳ್ಳಲು ಮತ್ತು ಮುಂದಿನ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆ.ಟಿ.ರಾಮ ರಾವ್ ಮತ್ತು ಇತರರು ಈಗ ಪ್ರತೀ ಲೋಕಸಭಾ ಕ್ಷೇತ್ರಕ್ಕೆ ತೆರಳಿ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಆ ಸಂದರ್ಭದಲ್ಲಿ ಹೆಸರು ಬದಲಾವಣೆ ಮಾಡಿದ್ದೇ ಸೋಲಿಗೆ ಕಾರಣ ಎಂದು ಕಾರ್ಯಕರ್ತರು ಹೇಳಿದ್ದಾರೆ.
2022ರಲ್ಲಿ ಕೆ.ಚಂದ್ರಶೇಖರ ರಾವ್ ಅವರು ಟಿಆರ್ಎಸ್ ಅನ್ನು ರಾಷ್ಟ್ರ ಮಟ್ಟಕ್ಕೆ ವಿಸ್ತರಿಸುವ ನಿಟ್ಟಿನಲ್ಲಿ ಭಾರತ ರಾಷ್ಟ್ರ ಸಮಿತಿ ಎಂದು ಬಲಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ… ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Supreme court ಯೂಟ್ಯೂಬ್ ಲೈವ್ ಸ್ಟ್ರೀಮ್ ಚಾನೆಲ್ ಹ್ಯಾಕ್…ಕ್ರಿಪ್ಟೋ ವಿಡಿಯೋ ಪೋಸ್ಟ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Tirupati Laddu; ರಾಜ್ಯದ ಪವಿತ್ರ ಕ್ಷೇತ್ರಗಳ ಪ್ರಸಾದ ಪರೀಕ್ಷಿಸಬೇಕು: ಜೋಶಿ ಆಗ್ರಹ
Flipkart Big Billion Day ಸೆ. 27 ರಿಂದ ಆರಂಭ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Ankola: ಶಿರೂರು ಗುಡ್ಡ ಕುಸಿತ ಪ್ರಕರಣ; ಗೋವಾದಿಂದ ಯಂತ್ರ; ಇಂದಿನಿಂದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.