Sagara; ಅದ್ದೂರಿ ಸಿಗಂದೂರು ಜಾತ್ರೆಗೆ ಚಾಲನೆ ನೀಡಿದ ಶಿವಗಿರಿಯ ಸಚ್ಚಿದಾನಂದ ಸ್ವಾಮೀಜಿ

ನಾಡಿನ ಶ್ರೇಯಸ್ಸಿಗೆ ಸಿಗಂದೂರು ದೇವಿಯ ಆಶೀರ್ವಾದ ಇರುತ್ತದೆ

Team Udayavani, Jan 14, 2024, 7:44 PM IST

Sagara; ಅದ್ದೂರಿ ಸಿಗಂದೂರು ಜಾತ್ರೆಗೆ ಚಾಲನೆ ನೀಡಿದ ಶಿವಗಿರಿಯ ಸಚ್ಚಿದಾನಂದ ಸ್ವಾಮೀಜಿ

ಸಾಗರ: ಮಲೆನಾಡಿನ ವನದೇವತೆಯಾದ ಸಿಗಂದೂರು ಚೌಡಮ್ಮ ದೇವಿ ನಾಡಿನ ಜನರನ್ನು ಪೊರೆಯುವ ಆರಾಧ್ಯ ದೇವಿಯಾಗಿದ್ದಾಳೆ. ಧರ್ಮ ರಕ್ಷಣೆಯೊಂದಿಗೆ ನಾಡಿನ ಶ್ರೇಯಸ್ಸಿಗೆ ದೇವಿಯ ಆಶೀರ್ವಾದ ಇರುತ್ತದೆ ಎಂದು ಕೇರಳದ ಶಿವಗಿರಿಯ ನಾರಾಯಣ ಗುರು ಪೀಠದ ಪೀಠಾಧಿಪತಿ ಸಚ್ಚಿದಾನಂದ ಸ್ವಾಮೀಜಿ ಹೇಳಿದರು.

ತಾಲೂಕಿನ ಸಿಗಂದೂರಿನಲ್ಲಿ ಭಾನುವಾರ ಆರಂಭವಾಗಿರುವ ಸಿಗಂದೂರು ಜಾತ್ರೆಗೆ ಧರ್ಮಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದ ಅವರು, ಹಿಂದುಳಿದ ವರ್ಗಗಳಿಗೆ ಸ್ವಾಭಿಮಾನ ನೀಡಿದ್ದ ಸಂತ ನಾರಾಯಣಗುರುಗಳು ಜಗತ್ತಿಗೆ ಮಾದರಿಯಾದರು. ಬುದ್ದ ಬಸವ, ಗಾಂಧಿ ಮತ್ತು ನಾರಾಯಣಗುರುಗಳ ತತ್ವಗಳು ಇಂದಿಗೂ ಮನುಕುಲಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮಾತನಾಡಿ, ಸಿಗಂದೂರು ಚೌಡೇಶ್ವರಿ ದೇವಾಲಯ ಇಂದು ರಾಜ್ಯದಲ್ಲಿ ಪ್ರಸಿದ್ದಿಯಾಗಿದೆ. ತಾಯಿಯ ಆಶೀರ್ವಾದ ಪಡೆಯಲು ಬರುವ ಭಕ್ತರಿಗೆ ಅಗತ್ಯವಿರುವ ಸೌಲಭ್ಯ ಕಲ್ಪಿಸಲಾಗಿದೆ. ಸರ್ಕಾರ ಮುಂದಿನ ದಿನಗಳಲ್ಲಿ ದೇವಾಲಯಕ್ಕೆ ಬೇಕಿರುವ ಅಗತ್ಯ ಸೌಲಭ್ಯ ಕೊಡಲಿದೆ. ಶ್ರೀಕ್ಷೇತ್ರದ ಮಹಿಮೆ ಅಪಾರವಾಗಿದೆ. ಸಿಗಂದೂರು ಆಡಳಿತದಲ್ಲಿ ನಮ್ಮ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದರು.

ಕೇರಳ ವರ್ಕಲ್ ಮಠದ ಸತ್ಯಾನಂದ ಸ್ವಾಮೀಜಿ ಮಾತನಾಡಿ, ಉತ್ತರಾಯಣ ಪುಣ್ಯಕಾಲದಲ್ಲಿ ದೇವಿಯ ಜಾತ್ರೆ ನಡೆಯುತ್ತಿದ್ದು, ಎಲ್ಲರಿಗೂ ಸನ್ಮಂಗಳ ಉಂಟುಮಾಡಲಿ ಎಂದು ಹೇಳಿದರು.

ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದ ಕರ್ನಾಟಕ ಪ್ರದೇಶ ಆರ್ಯ ಈಡಿಗ ಸಂಘದ ಅಧ್ಯಕ್ಷ ತಿಮ್ಮೇಗೌಡ ಮಾತನಾಡಿ, ಸಮಾಜದ ಆಡಳಿತ ಮಂಡಳಿಯಿರುವ ಈ ದೇವಾಲಯದ ಅಭಿವೃದ್ಧಿ ಮತ್ತು ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ಮಳಲಿಮಠದ ಡಾ.ನಾಗಭೂಷಣ್ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಗುರುವಿನಲ್ಲಿ ಶ್ರದ್ಧೆ ದೇವರಲ್ಲಿ ಭಕ್ತಿ ಇದ್ದರೆ ಸಾಧನೆ ಮಾಡಬಹುದು. ರಾಮಪ್ಪನವರ ಶ್ರಮ, ತಾಳ್ಮೆ ಸಿಗಂದೂರು ಕ್ಷೇತ್ರ ಇಷ್ಟು ದೊಡ್ಡದಾಗಿ ಬೆಳೆಯಲು ಕಾರಣವಾಗಿದೆ ಎಂದು ಹೇಳಿದರು.

ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ, ಧರ್ಮದರ್ಶಿ ಡಾ. ಎಸ್.ರಾಮಪ್ಪನವರು ಮಾತನಾಡಿದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಕಾಂಗ್ರೆಸ್ ಮುಖಂಡ ಎಂ.ಶ್ರೀಕಾಂತ್, ಪ್ರಮುಖರಾದ ಮಲ್ಲಿಕಾರ್ಜುನ ಹಕ್ರೆ, ಸೂರಜ್ ನಾಯ್ಕ್, ಸೈದಪ್ಪ ಗುತ್ತೇದಾರ್, ತುಮರಿ ಗ್ರಾಮಪಂಚಾಯ್ತಿ ಅಧ್ಯಕ್ಷೆ ಶ್ರೀದೇವಿ ರಾಮಚಂದ್ರ, ದೇವಾಲಯದ ಪ್ರಧಾನ ಕಾರ್ಯದರ್ಶಿ ಎಚ್.ಆರ್. ರವಿಕುಮಾರ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.

ವಿವಿಧ ಜಾನಪದ ಕಲಾ ತಂಡಗಳ ಆಕರ್ಷಕ ನೃತ್ಯದಿಂದ ಜಾತ್ರೆಗೆ ಸಾಂಸ್ಕೃತಿಕ ಮೆರಗು ಬಂದಿತ್ತು. ದೇವಿಯ ಮೂಲ ಸ್ಥಾನದಿಂದ ಜ್ಯೋತಿಯನ್ನು ಮೆರವಣಿಗೆ ಮೂಲಕ ಸಿಗಂದೂರು ದೇವಾಲಯಕ್ಕೆ ಕರೆತರಲಾಯಿತು. ವಿವಿಧ ಪೂಜಾ ವಿಧಿವಿಧಾನಗಳು ನಡೆದವು. ಸಂಜೆ ದೇಗುಲದಲ್ಲಿ ಭಜನೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಯಕ್ಷಗಾನ ಪ್ರದರ್ಶನ ಏರ್ಪಡಿಸಲಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.