Udupi; ದೇಶ ಸೇವೆ ಈಶ ಸೇವೆಯಲ್ಲಿ ಸಾರ್ಥಕ್ಯ ಕಂಡ ಶ್ರೇಷ್ಠ ತಪಸ್ವಿ: ಪಲಿಮಾರು ಶ್ರೀ

ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸಂಸ್ಮರಣೆ

Team Udayavani, Jan 15, 2024, 12:04 AM IST

Udupi; ದೇಶ ಸೇವೆ ಈಶ ಸೇವೆಯಲ್ಲಿ ಸಾರ್ಥಕ್ಯ ಕಂಡ ಶ್ರೇಷ್ಠ ತಪಸ್ವಿ: ಪಲಿಮಾರು ಶ್ರೀ

ಉಡುಪಿ: ಪೇಜಾವರ ಮಠದ ಕೀರ್ತಿಶೇಷ ಶ್ರೀ ವಿಶ್ವೇಶತೀರ್ಥಶ್ರೀಪಾದರ ಚತುರ್ಥ ಆರಾಧನೋತ್ಸವದ ಪ್ರಯುಕ್ತ ಪೇಜಾವರ ಮಠದಲ್ಲಿ ರವಿವಾರ ಗುರುಸಂಸ್ಮರಣೆ ಜರಗಿತು.

ಶ್ರೀ ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಮತ್ತು ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಸಾನಿಧ್ಯ ವಹಿಸಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ದಿವ್ಯ ಪಾದುಕೆ ಮತ್ತು ಸಾಲಂಕೃತ ಭಾವಚಿತ್ರಕ್ಕೆ ಮಂಗಳಾರತಿ ಬೆಳಗಿದರು.

ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಅನುಗ್ರಹಿಸಿ, ವಿಶ್ವೇಶತೀರ್ಥ ಶ್ರೀಪಾದರು ನಡೆಸಿದ ಲೋಕೋತ್ತರ ಕಾರ್ಯಗಳು ಮತ್ತು ಆ ನೆಲೆಯಲ್ಲೇ ಪಡೆದ ಅಪಾರ ಮನ್ನಣೆಗಳನ್ನು ಸ್ಮರಿಸಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಹಿಂದೆ ಅವರ ದೂರದೃಷ್ಟಿ ಮತ್ತು ಕ್ರತುಶಕ್ತಿಯ ಪರಿಣಾಮದಿಂದ ಭವ್ಯ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಇಂತಹ ಮಹಾನುಭಾವರ ಸ್ಮರಣೆ ಅತ್ಯಂತ ಶ್ರೇಯಸ್ಕರ. ದೇಶ ಸೇವೆ ಈಶ ಸೇವೆಯಲ್ಲಿ ಸಾರ್ಥಕ್ಯ ಕಂಡ ಶ್ರೇಷ್ಠ ತಪಸ್ವಿಗಳು ಎಂದು ತಿಳಿಸಿ ಹತ್ತು ಬಾರಿ ರಾಮತಾರಕ ಮಂತ್ರವನ್ನು ಸಾಮೂಹಿಕವಾಗಿ ಬೋಧಿಸಿದರು.

ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಆಶೀರ್ವಚಿಸಿ, ಶ್ರೀಪಾದರು ಪರಮಕಾರುಣ್ಯಮೂರ್ತಿ ಯಾಗಿದ್ದು ಸಜ್ಜನ ಮತ್ತು ವಿದ್ವತ್ಪಕ್ಷಪಾತಿಯಾಗಿದ್ದರು. ಕಿರಿಯರು ಹಿರಿಯರ ಮೇಲೆ ಏಕಪ್ರಕಾರದ ಪ್ರೀತಿ, ಅಭಿಮಾನಗಳನ್ನು ಧಾರೆಯೆರೆದಿರುವುದಕ್ಕೆ ತಾನೇ ಸಾಕ್ಷಿ ಎಂದರು.

ಮಠದ ದಿವಾನರಾದ ಎಂ. ರಘುರಾಮಾಚಾರ್ಯ, ಸಿಇಒ ಸುಬ್ರಹ್ಮಣ್ಯ ಭಟ್‌, ಮಠದ ವಿದ್ಯಾರ್ಥಿಗಳು ಶ್ರೀಪಾದರಿಗೆ ಭಕ್ತಿ ಗೌರವ ಸಮರ್ಪಿಸಿದರು. ವಿದ್ವಾಂಸರಾದ ರಾಮಚಂದ್ರ ಭಟ್‌, ಗೋಪಾಲ ಜೋಯಿಸ್‌, ಬಾಲಕೃಷ್ಣ ಭಟ್‌ ನೀರೆ, ಹೆರ್ಗ ಹರಿಪ್ರಸಾದ, ನರಸಿಂಹ ಭಟ್‌, ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ವಿಹಿಂಪ ಮುಖಂಡ ಪ್ರೊ| ಎಂ.ಬಿ. ಪುರಾಣಿಕ್‌, ಮಾಜಿ ಶಾಸಕ ರಘುಪತಿ ಭಟ್‌, ಪ್ರಮುಖರಾದ ಉಮೇಶ್‌ ರಾವ್‌, ಮುರಲಿ ಕಡೆಕಾರ್‌, ಎಸ್‌.ವಿ.ಭಟ್‌, ಗಂಗಾಧರ ರಾವ್‌, ಪದ್ಮನಾಭ ಭಟ್‌, ರಾಘವೇಂದ್ರ ಕಿಣಿ, ಮಠದ ಕೊಟ್ಟಾರಿ ಸಂತೋಷ ಭಟ್‌, ವ್ಯವಸ್ಥಾಪಕ ಇಂದುಶೇಖರ, ವೇದವ್ಯಾಸ ಭಟ್‌, ಕೃಷ್ಣ ಸಾಮಗ, ಸುಬ್ರಹ್ಮಣ್ಯ ಹೆಬ್ಬಾರ್‌ ಮೊದಲಾದವರು ಉಪಸ್ಥಿತರಿದ್ದರು. ವಾಸುದೇವ ಭಟ್‌ ಪೆರಂಪಳ್ಳಿ ನಿರೂಪಿಸಿದರು.

ಟಾಪ್ ನ್ಯೂಸ್

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

20

J. B. Shruti Sagar: ಏಕಾಗ್ರತೆಗೆ ಭಂಗ ತರುವ ಏನನ್ನೂ  ಬಳಸಿದರೂ ಸಾಧನೆಗೆ ತೊಡಕೇ

BSYadiyurappa

Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್‌ ಪ್ರಕರಣ: ಲೋಕಾಯುಕ್ತದಿಂದ ಬಿಎಸ್‌ವೈ ವಿಚಾರಣೆ

CM-Mysore

Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Colera

Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Vijayendra (2)

BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ

Thavar chand gehlot

Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!

MDNL

Kasaragodu: ಎಂಡಿಎಂಎ ಬೆಂಗಳೂರಿನಿಂದ ಪೂರೈಕೆ: ಎಸ್‌ಪಿ ಶಿಲ್ಪಾ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

Moodbidri: ಸರ ಕಳ್ಳತನ; ಇಬ್ಬರು ಆರೋಪಿಗಳ ಸೆರೆ

1-qwewqwqe

World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.