Prostitution: ಸ್ಪಾನಲ್ಲಿ ವೇಶ್ಯಾವಾಟಿಕೆ; ಸ್ಥಳೀಯ ಮಹಿಳೆಯರಿಂದಲೂ ದಂಧೆ!
Team Udayavani, Jan 15, 2024, 11:11 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೆ.ಆರ್.ಪುರದಲ್ಲಿರುವ ನಿರ್ವಾಣ ಸ್ಪಾ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಮಾರತಹಳ್ಳಿ ಉಪವಿಭಾಗದ ಎಸಿಪಿ ಪ್ರಿಯದರ್ಶಿನಿ ನೇತೃತ್ವದ ತಂಡ, ಆರೋಪಿ ಅನಿಲ್ ರೆಡ್ಡಿ ವಿದೇಶಿಯರು, ನೆರೆ ರಾಜ್ಯದವರು ಮಾತ್ರವಲ್ಲದೆ, ಸ್ಥಳೀಯ ಮಹಿಳೆಯರಿಂದಲೂ ವೇಶ್ಯಾವಾಟಿಕೆ ದಂಧೆ ನಡೆಸುತ್ತಿರುವುದು ಪತ್ತೆ ಹಚ್ಚಿದೆ.
ಈ ಹಿನ್ನೆಲೆಯಲ್ಲಿ ಸ್ಪಾ ಮಾಲೀಕ ಮತ್ತು ಮಹಿಳೆಯರ ನಡುವಿನ ಮಧ್ಯವರ್ತಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದೆ. ಪ್ರಕರಣದಲ್ಲಿ ಸ್ಪಾನಲ್ಲಿದ್ದ 23 ಜನ ಕೆಲಸಗಾರರನ್ನು ಸಾಕ್ಷಿಗಳಾಗಿ ಪರಿಗಣಿಸಿರುವ ಪೊಲೀಸರು, ಈಗಾಗಲೇ ಹಲವು ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ, ಮಾಲೀಕ ಹಾಗೂ ಪ್ರಮುಖ ಆರೋಪಿಯಾಗಿರುವ ಅನಿಲ್ ರೆಡ್ಡಿ, ವಿಚಾರಣೆ ವೇಳೆ ಮಧ್ಯ ವರ್ತಿಗಳ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಆದ್ದರಿಂದ ದಾಳಿ ಸಂದರ್ಭದಲ್ಲಿ ರಕ್ಷಿಸಲ್ಪಟ್ಟ 44 ಜನ ಮಹಿಳೆಯರ ವಿಚಾರಣೆಯನ್ನು ಪೊಲೀಸರು ಮತ್ತೂಮ್ಮೆ ಆರಂಭಿಸಿದ್ದಾರೆ. ಅಲ್ಲದೆ, ದಾಳಿ ವೇಳೆ ಸಿಕ್ಕ 47 ಜನ ಗ್ರಾಹಕರಿಗೂ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.
ಏನಿದು ಪ್ರಕರಣ?: ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ನಿರ್ವಾಣ ಸ್ಪಾ ಮೇಲೆ ಜ.6ರ ರಾತ್ರಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಸುಮಾರು 4 ಗಂಟೆಗಳ ಕಾಲ ಪರಿಶೀಲನೆ ನಡೆಸಿ ವಿದೇಶ, ಹೊರ ರಾಜ್ಯ, ರಾಜ್ಯಗಳ ಒಟ್ಟು 44 ಮಹಿಳೆಯರ ರಕ್ಷಣೆ ಮಾಡಲಾಗಿತ್ತು. ಪ್ರಮುಖ ಆರೋಪಿ ಅನಿಲ್ರೆಡ್ಡಿ ಸಹಿತ 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈ ಸಂಬಂಧ ಮಹಾದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅಪಾರ್ಟ್ಮೆಂಟ್ನಿಂದ ಜಾರಿ ಬಿದ್ದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು!
Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ
Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ
Arrested: ದೇವರಾಜ ಅರಸು ಟ್ರಕ್ ಟರ್ಮಿನಲ್ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ
Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್ ವೆಲ್ಡಿಂಗ್ ದೋಷ ಕಾರಣ; ಸಮಿತಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hubbali: ಅಪಾರ್ಟ್ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು
Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು
Mangaluru: ಕಲೆಗೆ ಜೀವ ತಳೆವ ನವದುರ್ಗೆಯರು!
ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್
Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.