Hubli; ಇಂಡಿಯಾ ಮೈತ್ರಿಕೂಟ ಅಸ್ತಿತ್ವದಲ್ಲೇ ಇಲ್ಲ: ಪ್ರಹ್ಲಾದ ಜೋಶಿ ವ್ಯಂಗ್ಯ
Team Udayavani, Jan 15, 2024, 11:23 AM IST
ಹುಬ್ಬಳ್ಳಿ: ಇಂಡಿಯಾ ಮೈತ್ರಿಕೂಟ ಅಸ್ತಿತ್ವದಲ್ಲೇ ಇಲ್ಲವಾಗಿದೆ. ಆ ಮೈತ್ರಿಕೂಟ ಒಳಜಗಳಕ್ಕೆ ಸಿಲುಕಿದೆ. ಲೋಕಸಭಾ ಸ್ಪರ್ಧಗೆ ಕೆಲವೊಂದು ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸ್ಥಾನ ಒಪ್ಪಿಕೊಳ್ಳಲು ಕಾಂಗ್ರೆಸ್ ಸಿದ್ಧವೆನ್ನುವ ಸ್ಥಿತಿಗೆ ತಲುಪಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ.
ಸೋಮವಾರ ಇಲ್ಲಿನ ಸಾಯಿನಗರದಲ್ಲಿ ಸಿದ್ಧಪ್ಪಜ್ಜನ ಮಠ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇಂಡಿಯಾ ಮೈತ್ರಿ ಕೂಟದಲ್ಲಿ ಪಶ್ಚಿಮ ಬಂಗಾಲ, ಮಹಾರಾಷ್ಟ್ರ, ಉತ್ತರ ಪ್ರದೇಶ ಗಳಲ್ಲಿ ಜಗಳ ಹೆಚ್ಚಿದೆ. ಇದೊಂದು ರೀತಿ ಮನೆಮುರುಕ ಘಟಬಂಧನ. ರಾಹುಲ್ ಗಾಂಧಿ ಭಾರತ ಜೋಡೊ ಯಾತ್ರೆ ಮಾಡಿದಷ್ಟು ಒಳ್ಳೆಯದು ಎಂದು ನುಡಿದರು.
ಶ್ರೀರಾಮ ಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವವರು ಯಾರು ಎಂಬುದು ಜನತೆಗೆ ತಿಳಿದಿದೆ. ಶ್ರೀರಾಮ ಮಂದಿರ ಸಮಾರಂಭಕ್ಕೆ ಎಲ್ಲಿಗೂ ಆಹ್ವಾನ ನೀಡಲಾಗಿದೆ. ಸಹಜವಾಗಿ ಬಂದಿದ್ದರೆ ಇಷ್ಟು ಚರ್ಚೆ ಆಗುತ್ತಿರಲಿಲ್ಲ. ಸಂಸದ ಅನಂತಕುಮಾರ ಹೆಗ್ಡೆ ಅವರ ವಿವಾದಾತ್ಮಕ ಹೇಳಿಕೆಗೆ ಪ್ರತಿಕ್ರಿಸಲಾರೆ. ಒಳ್ಳೆ ವಾತಾವರಣದಲ್ಲಿ ಶ್ರೀರಾಮ ಮಂದಿರ ಲೋಕಾರ್ಪಣೆ ಆಗಬೇಕೆಂಬುದಷ್ಟೆ ನಮ್ಮ ಉದ್ದೇಶವಾಗಿದೆ ಎಂದರು.
ನೈತಿಕ ಪೊಲೀಸ್ ಗಿರಿ ಬಗ್ಗೆ ಈ ಹಿಂದೆ ದೊಡ್ಡದಾಗಿ ಮಾತನಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಹಾನಗಲ್ಲ ಘಟನೆಯಲ್ಲಿ ಮೌನಕ್ಕೆ ಜಾರಿದ್ದಾರೆ. ಹಾನಗಲ್ಲ ಘಟನೆಯಲ್ಲಿ ರಾಜ್ಯ ಸರ್ಕಾರದ ನಡೆ ನೋಡಿದರೆ ಯಾರನ್ನೋ ರಕ್ಷಿಸಲು ಮುಂದಾದಂತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.