Karnataka: ರಾಜ್ಯದ 36 ಸಾವಿರ ಕಡುಬಡವರಿಗೆ ಮುಂದಿನ ತಿಂಗಳು ಮನೆ ಹಂಚಿಕೆ : ಜಮೀರ್
- ಈ ವರ್ಷದ ಅಂತ್ಯದೊಳಗೆ 2.32 ಲಕ್ಷ ಮನೆ ಪೂರ್ಣ ಗೊಳಿಸಿ ಹಂಚಿಕೆ ಗುರಿ: ಸಚಿವ
Team Udayavani, Jan 16, 2024, 9:54 PM IST
ಬೆಂಗಳೂರು: ಬಡವರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ರೂಪಿಸಿದ್ದು, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಡಿ ರಾಜ್ಯದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುತ್ತಿರುವ ಮನೆಗಳ ಪೈಕಿ 36 ಸಾವಿರ ಮನೆಗಳನ್ನು ಮುಂದಿನ ತಿಂಗಳು ಹಂಚಿಕೆ ಮಾಡಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಶೇಷಾದ್ರಿಪುರಂನ ಶಿರೂರ್ ಪಾರ್ಕ್ನಲ್ಲಿ ಮಂಗಳವಾರ ನಡೆದ “ಮನೆ ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸುಮಾರು 2.32 ಲಕ್ಷ ಮನೆ ಗಳನ್ನು ಈ ವರ್ಷದ ಅಂತ್ಯದೊಳಗೆ ಪೂರ್ಣ ಗೊಳಿಸಿ ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 36 ಸಾವಿರ ಮನೆ ಫೆಬ್ರವರಿಯಲ್ಲಿ ಹಂಚಿಕೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೊಳಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಿಂದ 2013 ರಿಂದ ಇದುವರೆಗೆ 2.32 ಲಕ್ಷ ಮನೆ ನಿರ್ಮಿಸಲಾಗುತ್ತಿದ್ದು ಬಡ ಕುಟುಂಬಗಳು ಫಲಾನುಭವಿಗಳ ಪಾಲಿನ ವಂತಿಗೆ 8,200 ರೂ. ಸರ್ಕಾರವೇ ಭರಿಸಲಿದ್ದು, ಮೊದಲ ಕಂತು 500 ಕೋಟಿ ರೂ. ಬಿಡುಗಡೆಯಾಗಿದ್ದು ಮನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಒಂಟಿ ಮನೆ ನಿರ್ಮಾಣ 3 ವರ್ಷದಿಂದ ಸಾಧ್ಯವಾಗಿಲ್ಲ: ಬೆಂಗಳೂರಿನಲ್ಲಿ ಒಂಟಿ ಮನೆ ಸಮಸ್ಯೆ ಕಾಡುತ್ತಿದೆ. ಕಳೆದ ಮೂರು ವರ್ಷಗಳಿಂದ ಒಂಟಿ ಮನೆ ನಿರ್ಮಿಸಲು ಸಾಧ್ಯವಾಗಿಲ್ಲ. ಸುಮಾರು 4 ಲಕ್ಷ ಜನರಿಗೆ ಸೂರು ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಯೋಜನೆ ರೂಪಿಸಿದೆ. ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದಡಿ ರಾಜ್ಯದ ಬಡ ಕುಟುಂಬಗಳಿಗೆ ನಿರ್ಮಿಸಿಕೊಡುವ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Government Failure: ಹಿಂದೂಗಳ ಮೇಲೆ ಕಾಂಗ್ರೆಸ್ ಸರಕಾರ ದಬ್ಬಾಳಿಕೆ: ಬಿಜೆಪಿ
BJP; ಬೇಗುದಿಗೆ ವರಿಷ್ಠರ ಸೂತ್ರ : ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆ ಇಲ್ಲ
Karnataka Govt; ರಾಜ್ಯಪಾಲ ಅರ್ಕಾವತಿ ಬಾಣ :ಕಾಳಗ ಈಗ ಮತ್ತೊಂದು ಸುತ್ತಿಗೆ!
World Book of Records; ಪ್ರಜಾಪ್ರಭುತ್ವ ಮಾನವ ಸರಪಳಿಗೆ ವಿಶ್ವದಾಖಲೆ ಗರಿ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.