Ayodhya: 40 ಮನೆಗಳಿಂದ ಉಣ್ಣೆ ಸಂಗ್ರಹಿಸಿ ತಯಾರಿಸಿದ ಕಂಬಳಿ ಅಯೋಧ್ಯೆ ರಾಮಲಲ್ಲಾಗೆ ಅರ್ಪಣೆ
Team Udayavani, Jan 17, 2024, 1:05 AM IST
ಶಿವಮೊಗ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪಗಡಲಬಂಡೆ ಗ್ರಾಮಸ್ಥರು ಅಯೋಧ್ಯೆಯ ಶ್ರೀರಾಮ ಲಲ್ಲಾನಿಗೆ ಅರ್ಪಿಸಲು ಗದ್ದುಗೆ ಕಂಬಳಿಯನ್ನು ಮಾಜಿ ಸಚಿವ ಈಶ್ವರಪ್ಪ ಅವರಿಗೆ ನೀಡಿದರು. ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬಳಸಲು ಗ್ರಾಮದ 40ಕ್ಕೂ ಹೆಚ್ಚು ಮನೆಯಿಂದ ಪವಿತ್ರ ಉಣ್ಣೆಯನ್ನು ಸಂಗ್ರಹಿಸಿ ಕೈಯಿಂದಲೇ ನೇಕಾರರು 3 ದಿನಗಳ ಕಾಲ ಈ ಕರಿ ಕಂಬಳಿ ಯನ್ನು ನೇಯ್ದು ಈಶ್ವರಪ್ಪ ಮೂಲಕ ಶ್ರೀರಾಮಲಲ್ಲಾನಿಗೆ ಸಮರ್ಪಿಸಿದ್ದಾರೆ.
2015ರಲ್ಲಿ ಪ್ರಧಾನಿ ಮೋದಿ ಚಿತ್ರದುರ್ಗಕ್ಕೆ ಆಗಮಿಸಿದಾಗ ಅವರಿಗೆ ಇದೇ ರೀತಿಯ ಕಂಬಳಿಯನ್ನು ನೀಡಿದ್ದೆವು. ನಮಗೆ ಯಾವುದೇ ರಾಜಕೀಯವಿಲ್ಲ. ಆದರೆ ಈ ಪವಿತ್ರ ಕಂಬಳಿ ಯಿಂದ ದೇಶಕ್ಕೆ ಒಳಿತಾಗುತ್ತದೆ ಎಂಬ ನಂಬಿಕೆ ಇದೆ. ಹಾಗಾಗಿ ನಮ್ಮ ಸಮಾಜದ ಎಲ್ಲರ ಅಪೇಕ್ಷೆಯಂತೆ ಈ ಕಂಬಳಿಯನ್ನು ನೀಡುತ್ತಿದ್ದೇವೆ ಎಂದು ಎಂ.ವಿ.ಶಾಂತಕುಮಾರ್ ಹೇಳಿದರು. ಮಾಜಿ ಸಚಿವ ಈಶ್ವರಪ್ಪ ಅವರು ಈ ಕಂಬಳಿಯನ್ನು ಸ್ವೀಕರಿಸಿ ಪೋಸ್ಟ್ ಮೂಲಕ ಆಯೋಧ್ಯೆಗೆ ಕಳುಹಿಸುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.