Udupi Paryaya ; ಸುಗುಣೇಂದ್ರತೀರ್ಥರ ಚತುರ್ಥ ಪರ್ಯಾಯಕ್ಕೆ ಉಡುಪಿ ಸನ್ನದ್ಧ

ದೇಗುಲಗಳ ನಗರಿಯಲ್ಲಿ 252ನೇ ಪರ್ಯಾಯ ಅವಧಿಯ ಸಡಗರ

Team Udayavani, Jan 17, 2024, 7:20 AM IST

uUdupi Paryaya ; ಸುಗುಣೇಂದ್ರತೀರ್ಥರ ಚತುರ್ಥ ಪರ್ಯಾಯಕ್ಕೆ ಉಡುಪಿ ಸನ್ನದ್ಧ

ಉಡುಪಿ: ಶ್ರೀಕೃಷ್ಣನೂರು ಉಡುಪಿಯು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ನಾಲ್ಕನೇ ಪರ್ಯಾಯ ಉತ್ಸವಕ್ಕೆ ಸಜ್ಜಾಗಿದೆ.

ಶ್ರೀಕೃಷ್ಣ ಮಠದ ರಥಿಬೀದಿ ಸುತ್ತ ಮುತ್ತಲಿನ ಪರಿಸರವಲ್ಲದೆ ನಗರದ ಬಹುತೇಕ ಪ್ರಮುಖ ಸ್ಥಳಗಳು ಹಾಗೂ ಉಡುಪಿ ನಗರಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳೆಲ್ಲ ವಿದ್ಯುತ್‌ ದೀಪಗಳಿಂದ ಅಲಂಕೃತವಾಗಿವೆ. ಬುಧವಾರ ಮಧ್ಯರಾತ್ರಿಯ ಬಳಿಕ ಕಾಪುವಿನ ದಂಡತೀರ್ಥದಲ್ಲಿ ಮಿಂದು ಬರುವ ಶ್ರೀಗಳ ಸ್ವಾಗತಕ್ಕೆ ದಂಡತೀರ್ಥ ಮಠದಿಂದ ಉಡುಪಿ ವರೆಗೆ ರಾಷ್ಟ್ರೀಯ ಹೆದ್ದಾರಿಯುದ್ದಕ್ಕೂ ವಿದ್ಯುದ್ದೀಪಗಳ ಅಲಂಕಾರವನ್ನು ಅಳವಡಿಸಲಾಗಿದೆ. ಇದು ಈ ಬಾರಿಯ ವಿಶೇಷ.

ನಗರದ ವಿವಿಧೆಡೆ ಕೇಸರಿ ಬಾವುಟಗಳು ರಾರಾಜಿಸತೊಡಗಿವೆ. ಪರ್ಯಾಯ ಮೆರವಣಿಗೆ ನಡೆಯುವ ಜೋಡುಕಟ್ಟೆ ಯಿಂದ ರಥಬೀದಿವರೆಗೆ ವಿಶೇಷ ಅಲಂಕಾರಗಳು, ವಿವಿಧ ಸ್ವಾಗತ ಕಮಾನುಗಳನ್ನು ರಚಿಸಲಾಗಿದೆ. ಒಟ್ಟಿ ನಲ್ಲಿ ಇಡೀ ನಗರವೇ ಸಂಭ್ರಮವನ್ನು ಮೈದುಂಬಿಕೊಂಡಿದೆ.

252ನೆಯ ಪರ್ಯಾಯ ಅವಧಿ ಯ ಶ್ರೀಕೃಷ್ಣನ ಪೂಜೆಗೆ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಅಣಿಯಾಗುತ್ತಿದ್ದಾರೆ. ಜ. 18 ರ ಬೆಳಗ್ಗೆ ಪರ್ಯಾಯ ಮೆರವಣಿಗೆ ಹಾಗೂ ದರ್ಬಾರ್‌ ನಡೆಯಲಿದ್ದು, ಜ. 17ರ ಬುಧವಾರ ಬೆಳಗ್ಗೆಯಿಂದಲೇ ಭಕ್ತರು ತಂಡೋ ಪತಂಡವಾಗಿ ನಗರಕ್ಕೆ ಆಗಮಿಸುವರು. ಹಾಗಾಗಿ ಜ. 17ರಿಂದ ತೊಡಗಿ 18ರ ಬೆಳಗಿನ ಜಾವದವರೆಗೂ ಉಡುಪಿ ಎಚ್ಚೆತ್ತಿರಲಿದೆ.

ತಮ್ಮ ಪರ್ಯಾಯ ಪೂರ್ವ ಸಂಚಾರವನ್ನು ಮುಗಿಸಿ ಪರ್ಯಾಯ ಪೀಠ ವನ್ನೇ ರುವ ಶ್ರೀ ಸುಗುಣೇಂದ್ರ ತೀರ್ಥರು ಜ. 8 ರಂದು ಪುರ ಪ್ರವೇಶ ಮಾಡಿದರು. ಪೌರ ಸಮ್ಮಾನದ ಮೂಲಕ ಅವರನ್ನು ನಾಗರಿಕರು, ಶ್ರೀಕೃಷ್ಣ ಭಕ್ತರು ಬರ ಮಾಡಿ ಕೊಂಡಿ ದ್ದಾರೆ. ಈಗಾಗಲೇ ರಥಬೀದಿ, ಶ್ರೀಕೃಷ್ಣ ಮಠ, ಪರ್ಯಾಯ ಮಠಗಳು ಸುಣ್ಣ ಬಣ್ಣಗಳಿಂದ ಕಂಗೊಳಿಸುತ್ತಿವೆ.

ವೈಭವದ ಮೆರವಣಿಗೆ
ಪ್ರತೀ ಬಾರಿ ಪರ್ಯಾಯ ಉತ್ಸವ ದಲ್ಲಿ ಸ್ವಾಮೀಜಿಗಳ ಮೆರವಣಿಗೆ ಪ್ರಮುಖ ಆಕರ್ಷಣೆಗಳಲ್ಲಿ ಒಂದು. ಆ ಮೆರವಣಿಗೆಯ ವೈಭವವನ್ನು ಸವಿಯಲು ಸಾವಿರಾರು ಮಂದಿ ಅದು ಹಾದು ಹೋಗುವ ದಾರಿಯ ಇಕ್ಕೆಲಗಳಲ್ಲಿ ಸೇರುತ್ತಾರೆ. ಈ ಬಾರಿಯೂ ವೈಭವದ ಮೆರವಣಿಗೆಗೆ ನಗರ ಸಿದ್ಧವಾಗಿದೆ.

ಹುಲಿವೇಷದಿಂದ ಹಿಡಿದು ರಾಜ್ಯದ ವಿವಿಧ ಜನಪದ ಕಲಾ ತಂಡಗಳು, ಭಜನಾ ತಂಡಗಳು, ಕಂಬಳದ ಕೋಣ, ಪರಶುರಾಮ, ಅಯೋಧ್ಯಾ ರಾಮಮಂದಿರದಂತಹ ಸ್ತಬ್ಧಚಿತ್ರಗಳು ಮೆರವಣಿಗೆಯ ರಂಗನ್ನು ಹೆಚ್ಚಿಸಲಿವೆ.
ಉತ್ಸವದಲ್ಲಿ ಪಾಲ್ಗೊಳ್ಳುವ ಒಂದು ಲಕ್ಷ ಮಂದಿ ಭಕ್ತಗಳಿಗೆ ಗುರುವಾರ ಮಧ್ಯಾಹ್ನ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಅನ್ನ, ಸಾರು, ಮಟ್ಟು ಗುಳ್ಳದ ಸಾಂಬಾರು, ಸುವರ್ಣಗಡ್ಡೆ ಪಲ್ಯ, ಪಾಯಸ, ಹಯಗ್ರೀವ ಮಡ್ಡಿ, ಮೈಸೂರು ಪಾಕ್‌, ಕಡಿ, ಜಿಲೇಬಿ, ಸಾಟು, ಮೋಹನಲಾಡು ಇರಲಿದೆ. ವಿದೇಶಗಳಿಂದ ಈಗಾಗಲೇ ಕೆಲವು ಅತಿಥಿಗಳು ಆಗಮಿಸಿದ್ದು, ಸುಮಾರು 300 ಮಂದಿ ವಿದೇಶಿಗರು ಪಾಲ್ಗೊಳ್ಳುವ ಸಂಭವವಿದೆ. ಗುರು ವಾರ ಬೆಳಗ್ಗೆ ಮತ್ತು ಸಂಜೆಯ ದರ್ಬಾರ್‌ನಲ್ಲಿ ದರ್ಬಾರ್‌ ಸಮ್ಮಾನವಲ್ಲದೆ ಕೃಷ್ಣಾನುಗ್ರಹ ಪ್ರಶಸ್ತಿ ಸಹಿತ ಸುಮಾರು 20 ಮಂದಿ ಗಣ್ಯರನ್ನು ಗೌರವಿಸಲಾಗುತ್ತದೆ.

ಪರ್ಯಾಯದಲ್ಲಿ ಏನೇನು?
ಜ. 17ರ ಮಧ್ಯರಾತ್ರಿ ಬಳಿಕ 1.30ಕ್ಕೆ ದಂಡತೀರ್ಥ ಮಠದಲ್ಲಿ ತೀರ್ಥಸ್ನಾನ ಮಾಡಿ ಪರ್ಯಾಯ ಶ್ರೀಗಳು ಜ. 18 ರ ಪ್ರಾತಃಕಾಲ 2 ಗಂಟೆಗೆ ಉಡುಪಿ ಜೋಡುಕಟ್ಟೆಗೆ ಆಗಮಿಸುವರು. ಮಠದ ಪಟ್ಟದ ದೇವರನ್ನು ಚಿನ್ನದ ಪಲ್ಲಕ್ಕಿಯಲ್ಲಿ ಇರಿಸಿಕೊಂಡು ಅದರ ಹಿಂದೆ ಪುಷ್ಪಾಲಂಕೃತ ಮೆರವಣಿಗೆಯಲ್ಲಿ ಪೇಟವನ್ನು ಧರಿಸಿ ಪರ್ಯಾಯ ಪೀಠಾರೂಢರಾಗುವ ಸ್ವಾಮೀಜಿಯವರು ರಥಬೀದಿಯತ್ತ ತೆರಳುವರು. ಮುಂಜಾವ 4.30ಕ್ಕೆ ರಥಬೀದಿಯ ಪ್ರವೇಶದಲ್ಲಿಯೇ ವಾಹನದಿಂದ ಇಳಿದು ಕನಕನ ಕಿಂಡಿಯ ಮೂಲಕ ದೇವರ ದರ್ಶನ ಪಡೆದು ನವಗ್ರಹದಾನ ಪ್ರದಾನ ಮಾಡುವರು. ಅಲ್ಲಿಂದ ಶ್ರೀಚಂದ್ರಮೌಳೀಶ್ವರ, ಶ್ರೀಅನಂತೇಶ್ವರ ದೇವಸ್ಥಾನಗಳಿಗೆ ತೆರಳಿ ದೇವರ ದರ್ಶನ ಮಾಡಿ ಶ್ರೀಕೃಷ್ಣಮಠವನ್ನು ಪ್ರವೇಶಿಸುವರು. ಮಧ್ವಸರೋವರದಲ್ಲಿ ಪಾದ ಪ್ರಕ್ಷಾಳನ ಮಾಡಿ ಶ್ರೀಕೃಷ್ಣ, ಮುಖ್ಯಪ್ರಾಣ, ಮಧ್ವಾಚಾರ್ಯರ ದರ್ಶನ ಮಾಡುವರು. 5.50ಕ್ಕೆ ಮಧ್ವಾಚಾರ್ಯರ ಕಾಲದಿಂದ ಬಂದ ಅಕ್ಷಯಪಾತ್ರೆಯನ್ನು ಸ್ವೀಕರಿಸಿ ಸರ್ವಜ್ಞ ಪೀಠಾರೋಹಣ ಮಾಡುವರು. ಬಡಗುಮಾಳಿಗೆಯಲ್ಲಿ ಬೆಳಗ್ಗೆ 6 ಗಂಟೆಗೆ ಗಂಧದ್ಯುಪಚಾರ, 6.30ಕ್ಕೆ ರಾಜಾಂಗಣದಲ್ಲಿ ನಡೆಯುವ ಪರ್ಯಾಯ ದರ್ಬಾರ್‌ ಸಭೆಯಲ್ಲಿ ಪಾಲ್ಗೊಂಡು ಅನುಗ್ರಹ ಸಂದೇಶ ನೀಡುವರು.

10.30ಕ್ಕೆ ಚತುರ್ಥ ಪರ್ಯಾಯದ ಪ್ರಥಮ ಮಹಾಪೂಜೆಯನ್ನು ಸ್ವಾಮೀಜಿ ನೆರವೇರಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆಗೆ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಸಂಜೆಯ ದರ್ಬಾರ್‌ ಸಭೆ 4.30ಕ್ಕೆ ನಡೆಯಲಿದೆ. ರಾತ್ರಿ ಬ್ರಹ್ಮರಥೋತ್ಸವ, ಜ. 19ರಂದು ಸೌರ ಮಧ್ವನವಮಿ ಆಚರಣೆ ನಡೆಯಲಿದೆ. ಜ. 18ರಿಂದ 24ರ ವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಉತ್ಸವದ ಸಂಭ್ರಮವನ್ನು ಹೆಚ್ಚಿಸಲಿವೆ.

ಕಿನ್ನಿಮೂಲ್ಕಿಯಿಂದಲೇ ಪರ್ಯಾಯ ಮೆರವಣಿಗೆ
ಇದೇ ಮೊದಲ ಬಾರಿಗೆ ಪರ್ಯಾಯ ಮೆರ ವಣಿಗೆಯು ಜೋಡುಕಟ್ಟೆ ಬದಲಾಗಿ ಕಿನ್ನಿಮೂಲ್ಕಿ ಸ್ವಾಗತ ಗೋಪುರದಿಂದ ಹೊರಡಲಿದೆ.

ಬುಧವಾರ (ಜ. 17) ಮಧ್ಯರಾತ್ರಿ ಬಳಿಕ 2 ಗಂಟೆಗೆ ಪರ್ಯಾಯ ಮೆರವಣಿಗೆಗೆ ಪುತ್ತಿಗೆ ಶ್ರೀಪಾದರು ಕಿನ್ನಿಮೂಲ್ಕಿ ಸ್ವಾಗತ ಗೋಪುರದ ಬಳಿ ಚಾಲನೆ ನೀಡುವರು. ಅಲ್ಲಿಂದ ಶ್ರೀಪಾದರು ಜೋಡುಕಟ್ಟೆಗೆ ಆಗಮಿಸುವರು. ಪಟ್ಟದ ದೇವರು, ಶ್ರೀಪಾದರ ಮೆರವಣಿಗೆಯು ಸಂಪ್ರದಾಯ ದಂತೆ ಜೋಡುಕಟ್ಟೆಯಿಂದಲೇ ಆರಂಭ ವಾಗಲಿದೆ.

ಕಿನ್ನಿಮೂಲ್ಕಿಯಿಂದ ಪರ್ಯಾಯ ಮೆರವಣಿಗೆ ಆರಂಭ  ಇದೇ ಮೊದಲು. ಪುತ್ತಿಗೆ ಶ್ರೀಪಾದರು ತಮ್ಮ 2ನೇ ಪರ್ಯಾಯದಲ್ಲಿ ಗುರುಗಳಾದ ಶ್ರೀ ಸುಧೀಂದ್ರತೀರ್ಥ ಶ್ರೀಪಾದರ ಸ್ಮರಣಾರ್ಥ ಕಿನ್ನಿ ಮೂಲ್ಕಿಯಲ್ಲಿ ಸ್ವಾಗತಗೋಪುರ ನಿರ್ಮಿ ಸಿದ್ದರು. ಈ ಬಾರಿ ಪರ್ಯಾಯದಲ್ಲಿ ಭಗವದ್ಗೀತೆ ಮತ್ತು ರಾಮಾಯಣಕ್ಕೆ ಸಂಬಂಧಿಸಿದ ಸ್ತಬ್ಧಚಿತ್ರಗಳು ಹೆಚ್ಚಿರು ವುದ ರಿಂದ ಮೆರವಣಿಗೆಯ ಸವಿ ಯನ್ನು ನೆರೆದ ಭಕ್ತರಿಗೆ ಕಣ್ತುಂಬಿ ಕೊಳ್ಳಲು ಅನುಕೂಲ ವಾಗುವಂತೆ ಈ ಮಾರ್ಪಾಡು ಮಾಡಲಾಗಿದೆ ಎಂದು ಸ್ವಾಗತ ಸಮಿತಿ ತಿಳಿಸಿದೆ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

1

Manipal: ಹೊಟೇಲ್‌ ಮ್ಯಾನೇಜರ್‌ಗೆ ವಂಚಿಸಿದ ವೈಟರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.