Sharavati ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿ; ಪ್ರಸನ್ನ ಕೆರೆಕೈ ಆಗ್ರಹ

ಲಾಂಚ್ ಸಂಚಾರಕ್ಕೆ ಸಮಸ್ಯೆಯ ಆತಂಕ

Team Udayavani, Jan 17, 2024, 4:31 PM IST

Sharavati ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆ ನಿಲ್ಲಿಸಿ; ಪ್ರಸನ್ನ ಕೆರೆಕೈ ಆಗ್ರಹ

ಸಾಗರ: ಪ್ರಸ್ತುತ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ 1774 ಅಡಿ ಇದೆ. ಇದೇ ರೀತಿ ನಿರಂತರ ವಿದ್ಯುತ್ ಉತ್ಪಾದನೆ ಮಾಡಿ ಇನ್ನು 13ಅಡಿ ನೀರು ಕಡಿಮೆಯಾಗಿ ಜಲಾಶಯದ ಮಟ್ಟ1761 ಅಡಿಗೆ ತಲುಪಿದರೆ ಲಾಂಚ್ ಸಂಚಾರ ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗುತ್ತದೆ. ಆಗ ಶರಾವತಿ ಹಿನ್ನೀರಿನ ಸಂತ್ರಸ್ತ ಜನ ತೀವ್ರ ಸಂಕಷ್ಟಕ್ಕೀಡಾಗುತ್ತಾರೆ ಎಂದು ಕರೂರು ಭಾರಂಗಿ ಹೋಬಳಿ ಜನಧ್ವನಿ ಹೋರಾಟ ವೇದಿಕೆ ಅಧ್ಯಕ್ಷ ಪ್ರಸನ್ನ ಕೆರೆಕೈ ಆತಂಕ ವ್ಯಕ್ತಪಡಿಸಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ತ್ಯಾಗ ಮಾಡಿರುವ ಹಿನ್ನೀರಿನ ಜನರ ಸಾರಿಗೆ ಸಂಪರ್ಕವನ್ನು ಉಳಿಸಿಕೊಡುವತ್ತ ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಗಮನ ಹರಿಸಬೇಕು. ಈ ಹಿನ್ನೆಲೆಯಲ್ಲಿ ಮೇ ತಿಂಗಳವರೆಗೆ ಶರಾವತಿ ನದಿಪಾತ್ರದ ವಿದ್ಯುದಾಗಾರಗಳಲ್ಲಿ ವಿದ್ಯುತ್ ಉತ್ಪಾದನೆಯನ್ನು ನಿಲ್ಲಿಸಲು ಜಿಲ್ಲಾ ಉಸ್ತುವಾರಿ ಸಚಿವರು, ಸ್ಥಳೀಯ ಶಾಸಕರು ಇಂಧನ ಸಚಿವರಿಗೆ ಮತ್ತು ಸರ್ಕಾರಕ್ಕೆ ಮನವಿ ಮಾಡಬೇಕು ಎಂದು ಒತ್ತಾಯಿಸಿದರು.

ಕಳೆದ ವರ್ಷ ಮಳೆ ವಿಪರೀತ ಕಡಿಮೆಯಾಗಿದ್ದರಿಂದ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ತೀರ ಕಡಿಮೆ ಇದೆ. ಲಿಂಗನಮಕ್ಕಿ ನೀರನ್ನು ಬಳಸಿಕೊಂಡು ಬೇರೆಬೇರೆ ವಿದ್ಯುದಾಗಾರಗಳಲ್ಲಿ ಹೆಚ್ಚಿನ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಇದೇ ರೀತಿ ವಿದ್ಯುತ್ ಉತ್ಪಾದನೆಗೆ ನೀರು ಬಳಕೆ ಮಾಡಿದರೆ ಡ್ಯಾಂ ನೀರು ಖಾಲಿಯಾಗುವ ಜೊತೆಗೆ ಶರಾವತಿ ನದಿಪಾತ್ರದಲ್ಲಿ ಹಿನ್ನೀರು ಕಡಿಮೆಯಾಗುತ್ತದೆ. ಆಗ ಲಾಂಚ್ ಓಡಾಡಲು ಸಾಧ್ಯವಾಗುವುದಿಲ್ಲ ಎಂಬುದರತ್ತ ಗಮನ ಸೆಳೆದರು.

ಈಗಾಗಲೇ ಹಿನ್ನೀರು ಕಡಿಮೆಯಾಗಿರುವುದರಿಂದ ಲಾಂಚ್ ನಿಲ್ಲಿಸಲು ರ‍್ಯಾಂಪ್‌ಗಳ ಸಮಸ್ಯೆಯಾಗುತ್ತಿದೆ. ಕೆಲವು ಕಡೆಗಳಲ್ಲಿ ರ‍್ಯಾಂಪ್‌ಗಳಿದ್ದರೂ ಅದು ನೀರಿನ ಮಟ್ಟ ಕಡಿಮೆ ಇದ್ದಾಗ ಉಪಯೋಗಕ್ಕೆ ಬರುವುದಿಲ್ಲ. ಈ ಹಿನ್ನೆಲೆಯಲ್ಲಿ ಕಳಸವಳ್ಳಿ ದಡ ಮತ್ತು ಅಂಬಾರಗೋಡ್ಲು ದಡದಲ್ಲಿ ಅಗತ್ಯ ಇರುವ ಕಡೆಗಳಲ್ಲಿ ಲಾಂಚ್ ನಿಲ್ಲಿಸಲು ಹೆಚ್ಚುವರಿ ರ‍್ಯಾಂಪ್ ನಿರ್ಮಿಸಲು ಶಾಸಕರು ಗಮನ ಹರಿಸಬೇಕು. ಮಳೆಗಾಲ ಪ್ರಾರಂಭವಾಗುವ ತನಕ ಹಿನ್ನೀರಿನ ಜನರಿಗೆ ಲಾಂಚ್ ಸೌಲಭ್ಯ ಸುಗಮವಾಗಿ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ವಿದ್ಯುತ್ ಉತ್ಪಾದನೆ ಇನ್ನಿತರೆ ಕಾರಣಕ್ಕೆ ಹಿನ್ನೀರನ್ನು ಬಳಕೆ ಮಾಡಿಕೊಂಡು ಸಂತ್ರಸ್ತ ಜನರಿಗೆ ಲಾಂಚ್ ಸೌಲಭ್ಯಕ್ಕೆ ಅಡ್ಡಿಪಡಿಸಿದರೆ ವೇದಿಕೆ ವತಿಯಿಂದ ಹಿನ್ನೀರಿನ ಜನರ ಸಹಭಾಗಿತ್ವದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಅನಿಲಕುಮಾರ್, ಜಿ.ಪಿ.ಶ್ರೀನಿವಾಸ್ ಗದ್ದೆಮನೆ, ಶ್ರೀಧರ ಚುಟ್ಟಿಕೆರೆ, ಮಂಜಯ್ಯ ಜೈನ್ ಸಂಸೆ, ಸಚಿನ್, ರಾಘವೇಂದ್ರ, ಗಣಪತಿ ಹಿನ್ಸೋಡಿ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.