Hanagerekatte; ಸಂಗ್ರಹವಾಯ್ತು ಅರ್ಧ ಕೋಟಿ ರೂ.ಗೂ ಹೆಚ್ಚಿನ ಕಾಣಿಕೆ ಹಣ !
ಹಿಂದೂ- ಮುಸ್ಲಿಂ ಭಾವೈಕ್ಯ ಕೇಂದ್ರ
Team Udayavani, Jan 18, 2024, 7:27 PM IST
ತೀರ್ಥಹಳ್ಳಿ : ತಾಲೂಕಿನ ಹಿಂದೂ-ಮುಸ್ಲಿಂ ಭಾವೈಕ್ಯ ಕೇಂದ್ರವಾಗಿರುವ ಹಣಗೆರೆ ಕಟ್ಟೆಯಲ್ಲಿರುವ ಭೂತರಾಯ ಚೌಡೇಶ್ವರಿ ದೇವಾಲಯ ಮತ್ತು ಸೈಯದ್ ಹಜರತ್ ದರ್ಗಾದ ಕಾಣಿಕೆ ಹುಂಡಿಯನ್ನು ಬುಧವಾರ ತೆಗೆಯಲಾಗಿದ್ದು ಅರ್ಧ ಕೋಟಿಗೂ ಹೆಚ್ಚಿನ ಹಣ ಸಂಗ್ರಹವಾಗಿದೆ.
ಬುಧವಾರ ಹಣಗೆರೆಕಟ್ಟೆಯ ಈ ಧಾರ್ಮಿಕ ಕೇಂದ್ರದಲ್ಲಿ ಮುಜರಾಯಿ ಇಲಾಖೆಯ ಸಿಬಂದಿಗಳು ಕಾಣಿಕೆ ಹುಂಡಿ ಎಣಿಕೆಗೆ ಹೋದಾಗ ಅಲ್ಲಿನ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತಿತರರು ಕೆಲ ಬೇಡಿಕೆಯನ್ನಿಟ್ಟು ಪ್ರತಿಭಟಿಸಿದ್ದರು. ಈ ಪ್ರತಿಭಟನೆಯಿಂದ ಹುಂಡಿ ಎಣಿಕೆ ಕಾರ್ಯ ತಡವಾಗಿ ಆರಂಭವಾಗಿತ್ತು.
ತಡವಾಗಿ ಹುಂಡಿ ಎಣಿಕೆ ಕಾರ್ಯ ಆರಂಭಿಸಿದ್ದ ಕಾರಣ ರಾತ್ರಿ 9 ರವರೆಗೆ ಎಣಿಕೆ ನಡೆಯಿತು. ನಾಣ್ಯದ ಎಣಿಕೆ ಹೊರತುಪಡಿಸಿ ಒಟ್ಟು ನೋಟುಗಳ ಎಣಿಕೆಗಳನ್ನ ಮಾಡಲಾಗಿದ್ದು 54ಲಕ್ಷದ 50ಸಾವಿರದ760 ರೂ. ಸಂಗ್ರಹವಾಗಿದೆ. ಪ್ರತಿ ಮೂರು ತಿಂಗಳಿಗೆ ಈ ಧಾರ್ಮಿಕ ಕೇಂದ್ರದಲ್ಲಿ ಇಷ್ಟೇ ಹಣ ಸಂಗ್ರಹವಾಗುತ್ತಿದೆ.
ಈ ಕಾಣಿಕೆಯ ಸಂಗ್ರಹದ ಆಧಾರದ ಮೇಲೆಯೇ ಧಾರ್ಮಿಕ ಕೇಂದ್ರ ಯಾವ ಶ್ರೇಣಿಯಲ್ಲಿದೆ ಎಂಬುದನ್ನ ನಿಗದಿಪಡಿಸಲಾಗುತ್ತದೆ. ಹಣಗೆರೆಕಟ್ಟೆಯ ಈ ಧಾರ್ಮಿಕ ಕೇಂದ್ರ ‘ಎ’ ಶ್ರೇಣಿಯ ಧಾರ್ಮಿಕ ಕೇಂದ್ರ ಎನಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.