Ranji Trophy ಕ್ರಿಕೆಟ್ : ಇಂದಿನಿಂದ ಕರ್ನಾಟಕ-ಗೋವಾ ಪಂದ್ಯ
Team Udayavani, Jan 19, 2024, 6:00 AM IST
ಮೈಸೂರು: ಕರ್ನಾಟಕ ತಂಡವು ಶುಕ್ರವಾರದಿಂದ ಆರಂಭವಾಗುವ ರಣಜಿ ಟ್ರೋಫಿ ಕ್ರಿಕೆಟ್ ಕೂಟದ “ಸಿ’ ಬಣದ ಮೂರನೇ ಸುತ್ತಿನ ಪಂದ್ಯದಲ್ಲಿ ಗೋವಾ ತಂಡವನ್ನು ಎದುರಿಸಲಿದೆ.
ಆರಂಭದ ಪಂದ್ಯದಲ್ಲಿ ಪಂಜಾಬ್ ವಿರುದ್ಧ ಅಮೋಘ ಗೆಲುವ ಸಾಧಿಸಿದ್ದ ಕರ್ನಾಟಕ ತಂಡವು ಅಹ್ಮದಾಬಾದ್ದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಗುಜರಾತ್ ವಿರುದ್ಧ ಹೀನಾಯವಾಗಿ ಆಡಿ ಸೋಲನ್ನು ಕಂಡಿತ್ತು. ಗೆಲ್ಲಲು ಕೇವಲ 110 ರನ್ ಗಳಿಸುವ ಗುರಿ ಪಡೆದಿದ್ದ ಕರ್ನಾಟಕ ತಂಡ ಒಂದು ಹಂತದಲ್ಲಿ ವಿಕೆಟ್ ನಷ್ಟವಿಲ್ಲದೇ 50 ರನ್ ಗಳಿಸಿದ್ದರೂ ಆಬಳಿಕ ನಾಟಕೀಯವಾಗಿ ಬ್ಯಾಟಿಂಗ್ ಕುಸಿತ ಕಂಡು 103 ರನ್ನಿಗೆ ಆಲೌಟಾಗಿ ಸೋಲನ್ನು ಕಂಡಿತ್ತು.
ಗೋವಾ ಸಾಧಾರಣ ತಂಡವಾಗಿರುವ ಕಾರಣ ಕರ್ನಾಟಕ ಈ ಪಂದ್ಯದಲ್ಲಿ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸಬೇಕಾಗಿದೆ. ಈ ಪಂದ್ಯ ಮೈಸೂರಿನಲ್ಲಿ ನಡೆಯುವ ಕಾರಣ ಕರ್ನಾಟಕಕ್ಕೆ ಗೆಲುವಿನ ಆವಕಾಶ ಹೆಚ್ಚಿದೆ.
ಮುಂಬಯಿಗೆ ಕೇರಳ ಸವಾಲು
“ಬಿ’ ಬಣದಲ್ಲಿರುವ ಮುಂಬಯಿ ತಂಡವು ತಿರುವನಂತಪುರದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೇರಳ ತಂಡದ ಸವಾಲನ್ನು ಎದುರಿಸಲಿದೆ. ಮುಂಬಯಿ ಈ ಹಿಂದಿನ ಎರಡು ಪಂದ್ಯಗಳಲ್ಲಿ ಬಿಹಾರ ಮತ್ತು ಆಂಧ್ರ ತಂಡವನ್ನು ಸೋಲಿಸಿದ ಸಾಧನೆ ಮಾಡಿದೆ. ಬಿಹಾರ ವಿರುದ್ದ ಇನ್ನಿಂಗ್ಸ್ ಗೆಲುವು ಸಾಧಿಸಿದ್ದ ಮುಂಬಯಿ ತಂಡವು ಆಂಧ್ರ ವಿರುದ್ಧ 10 ವಿಕೆಟ್ಗಳ ಜಯ ಸಾಧಿಸಿತ್ತು. ಇದೇ ವೇಳೆ ಕೇರಳ ತಂಡವು ಉತ್ತರ ಪ್ರದೇಶ ಮತ್ತು ಅಸ್ಸಾಂ ವಿರುದ್ಧ ಆಡಿದ್ದು ಈ ಎರಡೂ ತಂಡಗಳು ಡ್ರಾ ಆಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Minchu Hulu Review: ಮಿಂಚುಹುಳು ತಂದ ಹೊಸಕಿರಣ
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್ ಮರೆತಿದ್ದಾರೆ: ಬಬಿತಾ ಫೋಗಾಟ್
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.