ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ರಾಯಭಾರಿ: ಸಂಪುಟ ಸಭೆ ತೀರ್ಮಾನ
ಮಠಾಧೀಶರು, ಗಣ್ಯರು, ಸಾಹಿತಿಗಳ ಮನವಿಗೆ ಸರಕಾರದ ಸ್ಪಂದನೆ
Team Udayavani, Jan 19, 2024, 12:20 AM IST
ಬೆಂಗಳೂರು: ಜಗಜ್ಯೋತಿ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕರನ್ನಾಗಿ ಘೋಷಿಸುವ ಮಹತ್ವದ ನಿರ್ಧಾರವನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡುವಂತೆ ರಾಜ್ಯದ ವಿವಿಧ ಮಠಾಧೀಶರು, ಗಣ್ಯರು, ಚಿಂತಕರು, ರೈತ, ದಲಿತ ಮತ್ತು ಕಾರ್ಮಿಕ ಹೋರಾಟಗಾರರು, ಸಾಹಿತಿಗಳು ಮುಖ್ಯಮಂತ್ರಿಗಳಿಗೆ ಇತ್ತೀಚೆಗೆ ಮನವಿ ಸಲ್ಲಿಸಿದ್ದರು. ಬಸವಣ್ಣನವರು ವೈಶ್ವಿಕ ಶ್ರೇಷ್ಠ ಮೌಲ್ಯಗಳನ್ನು ಪ್ರತಿಪಾದಿಸಿದ ಮಹನೀಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ನಿರ್ಧರಿಸಲಾಗಿದೆ. ಸರಕಾರದ ಈ ಕ್ರಮದ ಬಗ್ಗೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಧನ್ಯವಾದ ಸಮರ್ಪಿಸಿದ್ದು, 2025ರಲ್ಲಿ ಅನುಭವ ಮಂಟಪ ಉದ್ಘಾಟನೆಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕಿತ್ತೂರು ಇನ್ನು ಚನ್ನಮ್ಮನ ಕಿತ್ತೂರು
ಬ್ರಿಟೀಷರ ವಿರುದ್ಧ ಹೋರಾಟ ನಡೆಸಿ ಅಮರರಾದ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿನಲ್ಲಿರುವ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿಗೆ “ಚನ್ನಮ್ಮನ ಕಿತ್ತೂರು’ ಎಂದು ಮರು ನಾಮಕರಣ ಮಾಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಕಂದಾಯ ಇಲಾಖೆಯಿಂದ ಮಂಡನೆಯಾದ ಪ್ರಸ್ತಾಪಕ್ಕೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು
Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.