Under-19 Cricket ವಿಶ್ವಕಪ್‌: ಇಂದಿನಿಂದ ಭಾರತದ ಅಭಿಯಾನ

ಹಾಲಿ ಚಾಂಪಿಯನ್‌ ಭಾರತಕ್ಕೆ ಬಾಂಗ್ಲಾ ಎದುರಾಳಿ

Team Udayavani, Jan 20, 2024, 5:50 AM IST

1-asasas

ಬ್ಲೋಮ್‌ಫಾಂಟೀನ್‌: ಅಂಡರ್‌-19 ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಅತ್ಯಂತ ಯಶಸ್ವಿ ತಂಡವಾಗಿರುವ ಭಾರತ ತಂಡ ಶನಿವಾರ ತನ್ನ ಅಭಿಯಾನ ಆರಂಭಿಸಲಿದೆ. ಹಾಲಿ ಚಾಂಪಿಯನ್‌ ಕೂಡ ಆಗಿರುವ ಭಾರತದ ಕಿರಿಯರ ತಂಡದ ಮೊದಲ ಎದುರಾಳಿ ಬಾಂಗ್ಲಾದೇಶ.

ಸರ್ವಾಧಿಕ 5 ಸಲ ಚಾಂಪಿಯನ್‌ ಆಗಿರುವ ಭಾರತ ಕಳೆದ ಸಲ ಯಶ್‌ ಧುಲ್‌ ಸಾರಥ್ಯದಲ್ಲಿ ಪ್ರಶಸ್ತಿ ಜಯಿಸಿತ್ತು. ಈ ಬಾರಿ ಉದಯ್‌ ಸಹಾರಣ್‌ ನಾಯಕರಾಗಿದ್ದಾರೆ. “ಎ’ ವಿಭಾಗದಲ್ಲಿ ಸ್ಥಾನ ಸಂಪಾದಿಸಿದೆ. ಮೂಲ ವೇಳಾಪಟ್ಟಿಯಂತೆ ಈ ಪಂದ್ಯಾವಳಿ ಶ್ರೀಲಂಕಾದಲ್ಲಿ ನಡೆ ಯಬೇಕಿತ್ತು. ಆದರೆ ಶ್ರೀಲಂಕಾ ಕ್ರಿಕೆಟ್‌ ಮಂಡಳಿಯನ್ನು ಐಸಿಸಿ ಅಮಾನತಿನಲ್ಲಿರಿಸಿದ ಬೆನ್ನಲ್ಲೇ ದಕ್ಷಿಣ ಆಫ್ರಿಕಾಕ್ಕೆ ವರ್ಗಾಯಿಸಿತು.

ಭಾರತ ಮೊದಲ ಸಲ ಚಾಂಪಿ ಯನ್‌ ಪಟ್ಟ ಅಲಂಕರಿಸಿದ್ದು 2002 ರಲ್ಲಿ. ಅಂದಿನ ನಾಯಕ ಮೊಹ್ಮಮದ್‌ ಕೈಫ್. ಬಳಿಕ 2008, 2012, 2018 ಮತ್ತು 2022ರಲ್ಲಿ ಪ್ರಶಸ್ತಿ ಎತ್ತಿತು.

ಆಲ್‌ರೌಂಡರ್ ಪಡೆ
ಭಾರತ ಉತ್ತಮ ಆಲ್‌ರೌಂಡರ್‌ಗಳನ್ನೊಳಗೊಂಡ ಸಶಕ್ತ ಪಡೆಯನ್ನು ಹೊಂದಿದೆ. ಮಹಾರಾಷ್ಟ್ರದ ಸವ್ಯ ಸಾಚಿ ಅರ್ಶಿನ್‌ ಕುಲಕರ್ಣಿ, ವಿಕೆಟ್‌ ಕೀಪರ್‌-ಬ್ಯಾಟರ್‌ ಎ. ಅವನೀಶ್‌ ರಾವ್‌, ಎಡಗೈ ಸ್ಪಿನ್ನರ್‌-ಉಪನಾಯಕ ಸೌಮ್ಯ ಕುಮಾರ್‌ ಪಾಂಡೆ, ನಾಯಕ ಉದಯ್‌ ಸಹಾರಣ್‌, ಮುಂಬ ಯಿಯ ಮುಶೀರ್‌ ಖಾನ್‌ ಅವರೆಲ್ಲ ತಂಡದ ಸ್ಟಾರ್‌ ಬ್ಯಾಟರ್ ಹಾಗೂ ಆಲ್‌ರೌಂಡರ್. ಇವರಲ್ಲಿ ಅರ್ಶಿನ್‌ ಕುಲಕರ್ಣಿ ಮತ್ತು ಅವನೀಶ್‌ ರಾವ್‌ ಈಗಾಗಲೇ ಐಪಿಎಲ್‌ ತಂಡ ಗಳಿಂದಲೂ ಕರೆ ಪಡೆದಿದ್ದಾರೆ. ಕ್ರಮ ವಾಗಿ ಲಕ್ನೋ ಮತ್ತು ಚೆನ್ನೈ ತಂಡವನ್ನು ಸೇರಿಕೊಂಡಿದ್ದಾರೆ.

ನಾಯಕ ಸಹಾರಣ್‌ ಮೂಲತಃ ರಾಜಸ್ಥಾನದವರಾದರೂ ಕಳೆದ ನವಂಬರ್‌ನಿಂದ ಪಂಜಾಬ್‌ ತಂಡ ವನ್ನು ಪ್ರತಿನಿಧಿಸಲಾರಂಭಿಸಿದ್ದಾರೆ. ಅಂಡರ್‌-19 ಚಾಲೆಂಜರ್‌ ಟ್ರೋಫಿ ಪಂದ್ಯಾವಳಿಯ 4 ಪಂದ್ಯಗಳಿಂದ 297 ರನ್‌ ಬಾರಿಸಿದ್ದು ಇವರ ಸಾಧನೆ. ಅಂಡರ್‌-19 ತ್ರಿಕೋನ ಸರಣಿಯ 3 ಇನ್ನಿಂಗ್ಸ್‌ಗಳಲ್ಲಿ 50 ಪ್ಲಸ್‌ ರನ್‌ ಬಾರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಹೊಡೆದ ಒಂದು ಶತಕವೂ ಸೇರಿದೆ. ಮುಶೀರ್‌ ಖಾನ್‌ ದೇಶಿ ಕ್ರಿಕೆಟ್‌ನಲ್ಲಿ 89.33 ಸರಾಸರಿಯಲ್ಲಿ 268 ರನ್‌ ಬಾರಿಸಿದ್ದಾರೆ.

ಬೌಲಿಂಗ್‌ ವಿಭಾಗದ ಪ್ರಮುಖ ರೆಂದರೆ ಆರಾಧ್ಯ ಶುಕ್ಲಾ, ಪಾಂಡೆ ಮತ್ತು ಕುಲಕರ್ಣಿ. ಅಂಡರ್‌-19 ಚಾಲೆಂಜರ್‌ ಸರಣಿಯಲ್ಲಿ ಇವರ ಬೌಲಿಂಗ್‌ ಪ್ರದರ್ಶನ ಅಮೋಘ ಮಟ್ಟದಲ್ಲಿತ್ತು. ಭಾರತ ಅಂಡರ್‌-19 ತ್ರಿಕೋನ ಸರಣಿಯ ಎಲ್ಲ ಪಂದ್ಯಗಳನ್ನು ಗೆದ್ದ ಸಾಧನೆಗೈದಿತ್ತು. ಆದರೆ ದಕ್ಷಿಣ ಆಫ್ರಿಕಾದ ಫೈನಲ್‌ ಮಳೆಯಿಂದ ವಾಶೌಟ್‌ ಆಗಿತ್ತು.

ಬಾಂಗ್ಲಾ ಅಪಾಯಕಾರಿ
ಬಾಂಗ್ಲಾದೇಶ ಫೇವರಿಟ್‌ ಅಲ್ಲದಿದ್ದರೂ ಅಪಾಯಕಾರಿ ತಂಡ ಎಂಬುದರಲ್ಲಿ ಅನುಮಾನವಿಲ್ಲ. ಕಳೆದ ಅಂಡರ್‌-19 ಏಷ್ಯಾ ಕಪ್‌ ಸೆಮಿಫೈನಲ್‌ನಲ್ಲಿ ಭಾರತವನ್ನು ಮಣಿಸಿ, ಬಳಿಕ ಚಾಂಪಿಯನ್‌ ಆಗಿ ಮೂಡಿಬಂದಿತ್ತು. ಇದಕ್ಕೆ ಸೇಡು ತೀರಿಸಿಕೊಳ್ಳುವ ಅವಕಾಶವೊಂದು ಭಾರತಕ್ಕೆ ಎದುರಾಗಿದೆ.

ಭಾರತ ತಂಡ: ಉದಯ್‌ ಸಹಾರಣ್‌ (ನಾಯಕ), ಅರ್ಶಿನ್‌ ಕುಲಕರ್ಣಿ, ಆದರ್ಶ್‌ ಸಿಂಗ್‌, ರುದ್ರ ಮಯೂರ್‌ ಪಟೇಲ್‌, ಸಚಿನ್‌ ದಾಸ್‌, ಪ್ರಿಯಾಂಶು ಮೋಲಿಯಾ, ಮುಶೀರ್‌ ಖಾನ್‌, ಎ. ಅವನೀಶ್‌ ರಾವ್‌, ಸೌಮ್ಯ ಕುಮಾರ್‌ ಪಾಂಡೆ, ಮುರುಗನ್‌ ಅಭಿಷೇಕ್‌, ಇನ್ನೇಶ್‌ ಮಹಾಜನ್‌, ಧನುಷ್‌ ಗೌಡ, ಆರಾಧ್ಯ ಶುಕ್ಲಾ, ರಾಜ್‌ ಲಿಂಬಾನಿ, ನಮನ್‌ ತಿವಾರಿ.

 ಆರಂಭ: ಅ. 1.30
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.