Election: ನಾವು ಒಂದು ದೇಶ, ಒಂದು ಚುನಾವಣೆ ಒಪ್ಪೆವು: ಖರ್ಗೆ

ಉನ್ನತ ಮಟ್ಟದ ಸಮಿತಿ ವಿಸರ್ಜಿಸಿ ಎಂದು ಮಾಜಿ ರಾಷ್ಟ್ರಪತಿಗಳಿಗೆ ಪತ್ರ

Team Udayavani, Jan 20, 2024, 12:31 AM IST

KHARGE

ಹೊಸದಿಲ್ಲಿ: ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆಗೆ ಚುನಾವಣೆ ನಡೆಸುವ “ಒಂದು ದೇಶ; ಒಂದು ಚುನಾವಣೆ’ ಪ್ರಸ್ತಾವವನ್ನು ಕಾಂಗ್ರೆಸ್‌ ಒಪ್ಪುವುದಿಲ್ಲ ಎಂದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಇದರ ಪರಿಶೀಲನೆಗೆಂದು ರಚಿಸಲಾದ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ನೇತೃತ್ವದ ಸಮಿತಿಯನ್ನು ವಿಸರ್ಜಿಸಬೇಕು ಎಂದು  ಆಗ್ರಹಿಸಿದ್ದಾರೆ.

ಕೇಂದ್ರ ಸರಕಾರ ರಚಿಸಿರುವ ಉನ್ನತ ಮಟ್ಟದ ಸಮಿತಿಯ ಅಧ್ಯಕ್ಷ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಬರೆದ ಪತ್ರದಲ್ಲಿ ಖರ್ಗೆ ಅವರು ತಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಒಂದು ದೇಶ; ಒಂದು ಚುನಾವಣೆ ಎನ್ನುವ ಪರಿಕಲ್ಪನೆ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾದದ್ದು. ಅದು ಒಕ್ಕೂಟ ವ್ಯವಸ್ಥೆಗೆ ಮಾರಕವಾದದ್ದು ಎಂದೂ ಹೇಳಿದ್ದಾರೆ.

ಮಾಜಿ ರಾಷ್ಟ್ರಪತಿಯವರನ್ನು ಇಂಥ ಸಮಿತಿಗೆ ಮುಖ್ಯಸ್ಥರನ್ನಾಗಿ ನೇಮಕ ಮಾಡುವ ಮೂಲಕ ಕೇಂದ್ರ ಸರಕಾರವು ರಾಷ್ಟ್ರಪತಿಗಳ ಹುದ್ದೆಯನ್ನು ದುರ್ಬಳಕೆ ಮಾಡಿಕೊಂಡಿದೆ. ಅದಕ್ಕೆ ಕೋವಿಂದ್‌ ಅವಕಾಶ ನೀಡಬಾರದು ಎಂದು ಖರ್ಗೆ ಮನವಿ ಮಾಡಿದ್ದಾರೆ. ಸಮಿತಿಯ ಮೂಲಕ ಕೇಂದ್ರ ಸರಕಾರ ಸಾಂವಿಧಾನಿಕ ಮತ್ತು ಪ್ರಜಾತ್ತಾತ್ಮತ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹೊರಟಿದೆ ಎಂದು ಆರೋಪಿಸಿದ್ದಾರೆ.

ಕಣ್ಣೊರೆಸುವ ತಂತ್ರ ಎಂದು ಟೀಕೆ: “ಪ್ರಜಾಪ್ರಭುತ್ವ ವ್ಯವಸ್ಥೆಯ ವೈವಿಧ್ಯತೆ ಉಳಿಯಬೇಕೆಂದರೆ, ಏಕ ಚುನಾವಣೆ ನಡೆಸಕೂಡದು. ಒಂದೇ ಹಂತದಲ್ಲಿ ಚುನಾವಣೆ ನಡೆಸುವ ಬಗ್ಗೆ ಸಮಿತಿ ಈಗಾಗಲೇ ತೀರ್ಮಾನ ಕೈಗೊಂಡಂತೆ ಕಾಣುತ್ತಿದೆ. ರಾಜಕೀಯ ಪಕ್ಷಗಳು, ಮುಖಂಡರಿಂದ ಸಲಹೆಯನ್ನು ಆಹ್ವಾನಿಸಿರುವುದು ಕೇವಲ ಕಣ್ಣೊರೆಸುವ ತಂತ್ರ ಎಂದು ಖರ್ಗೆ ಪತ್ರದಲ್ಲಿ ಆರೋಪಿಸಿದ್ದಾರೆ. ಜತೆಗೆ ಸಮಿತಿಯಲ್ಲಿ ವಿಪಕ್ಷಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಲಾಗಿಲ್ಲ ಎಂದೂ ದೂರಿದ್ದಾರೆ.

ಖರ್ಗೆ ಬರೆದ ಪತ್ರದಲ್ಲಿ ಏನಿದೆ?

ಒಂದು ದೇಶ, ಒಂದು ಚುನಾವಣೆಯನ್ನು ಕಾಂಗ್ರೆಸ್‌ ಪ್ರಬಲವಾಗಿ ವಿರೋಧಿಸುತ್ತದೆ

ದೇಶದ ಸಾಂವಿಧಾನಿಕ ಮತ್ತು ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಈ ಪದ್ಧತಿ ಮಾರಕ

ಪರಿಶೀಲನೆಗೆ ಸಮಿತಿ ರಚಿಸುವ ಮೂಲಕ ಕೇಂದ್ರ ಸರಕಾರದಿಂದ ಮಾಜಿ ರಾಷ್ಟ್ರಪತಿಗಳ ಹುದ್ದೆ ದುರುಪಯೋಗ

ಅವಧಿಗೆ ಮುನ್ನವೇ ವಿಧಾನಸಭೆಗಳ ವಿಸರ್ಜನೆ ಜನಾದೇಶಕ್ಕೆ ಮಾಡುವ ಅವಮಾನ

ಸಲಹೆಗಳಿಗೆ ಆಹ್ವಾನ ಎನ್ನುವುದು ಕೇವಲ ಕಣ್ಣೊರೆಸುವ ತಂತ್ರವಾಗಿದೆ

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.