Ram Mandir; ಧಾರವಾಡದಲ್ಲಿ ರಾಮ ದರ್ಬಾರ್ ವರಹ ಪೂಜೆ
Team Udayavani, Jan 20, 2024, 3:33 PM IST
ಧಾರವಾಡ: ಅಯೋಧ್ಯೆಯಲ್ಲಿ ರಾಮದೇವರ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಶ್ರೀರಾಮದೇವರ ದರ್ಬಾರಿನ ಟಂಕೆಯುಳ್ಳ ವರಹಗಳನ್ನು ಹೊಂದಿದವರು ಅದಕ್ಕೆ ವಿಶೇಷ ಪೂಜೆ ಸಲ್ಲಿಸುತ್ತಿದ್ದು, ಇಂತಹ ಅಪರೂಪದ ನಾಣ್ಯ ನಗರದಲ್ಲಿ ಗಮನ ಸೆಳೆದಿದೆ.
ಡಾ.ಗುರುರಾಜ ಕಳ್ಳೀಹಾಳ ಅವರ ಮನೆಯಲ್ಲಿ ಇಂತಹ ಒಂದು ಅಪರೂಪದ ರಾಮಟಂಕಾ ವರಹವನ್ನು ಕಾಣಬಹುದು. ಈ ಪುರಾತನ ನಾಣ್ಯವು ವಿಕ್ರಮ ಸಂವತ್ಸರದ 1740 ರಲ್ಲಿ ಟಂಕಿಸಿದ್ದ ಬೆಳ್ಳಿಯ ವರಹವಾಗಿದೆ. ಇದರ ಮೇಲ್ಮೆಯಲ್ಲಿ ಶ್ರೀ ರಾಮದೇವರ ದರ್ಬಾರಿನ ರಾಮಾಯಣ ಆಧಾರಿತ ಚಿತ್ರ ಟಂಕಿಸಲಾಗಿದೆ.
ಈ ಚಿತ್ರದಲ್ಲಿ ಚಾಮರದ ಕೆಳಗೆ ಕುಳಿತಿರುವ ಶ್ರೀ ರಾಮದೇವರು ಹಾಗೂ ಸೀತಾಮಾತೆ, ಪಕ್ಕದಲ್ಲಿ ಲಕ್ಷಣ, ಭರತ, ಶತೃಘ್ನರ ಪರಿವಾರವಿದೆ. ಕೆಳಗೆ ಕುಳಿತ ಭಂಗಿಯಲ್ಲಿರುವ ರಾಮಭಕ್ತ ಹನುಂತ ದೇವರನ್ನು ಕಾಣಬಹುದು. ನಾಣ್ಯದ ಹಿಂಭಾಗದಲ್ಲಿ ಬಿಲ್ಲು ಬಾಣಧಾರಿಗಳಾದ ರಾಮ, ಲಕ್ಷ್ಮಣರು ವನವಾಸಕ್ಕೆ ಹೊರಟ ಚಿತ್ರವಿದೆ. ದೇವನಾಗರಿ ಲಿಪಿಯಲ್ಲಿರುವ “ರಾಮ ಲಕ್ಷಣ ಜಾನಕಿ ಜೈ ಭೋಲೋ ಹನುಮಾನ ಕಿ” ಎಂಬ ಅರ್ಥವಿರುವ ಸಾಲುಗಳು ಪ್ರಾಕೃತ ಭಾಷೆಯಲ್ಲಿ ಮುದ್ರಿತವಾಗಿದೆ ಎಂದು ಧಾರವಾಡದ ಸಂಸ್ಕೃತ ವಿದ್ವಾಂಸ ಡಾ. ವೆಂಕಟ ನರಸಿಂಹಾಚಾರ್ ಜೋಶಿ ಅಭಿಪ್ರಾಯಪಟ್ಟಿದ್ದಾರೆ.
ಡಾ. ಗುರುರಾಜ ಕಳ್ಳೀಹಾಳ್ ಅವರ ಪತ್ನಿ ಡಾ.ಪರಿಮಳಾ ಕಳ್ಳೀಹಾಳ್ ಅವರ ತೀರ್ಥರೂಪರಾದ ದಿವಂಗತ ನಾಮಗೊಂಡ್ಲು ರಾಮಚಂದ್ರರಾಯರ ಮನೆತನದ ಸಂಗ್ರಹವಿದು. ತಲೆತಲಾಂತರದಿಂದ ಪೂಜೆಗೊಳ್ಳುತ್ತಾ ಬಂದಿರುವ ಈ ಅಪರೂಪದ ನಾಣ್ಯವನ್ನು ರಾಮದರ್ಬಾರ್ ಟೋಕನ್ ಅಂತಲೂ ಕರೆಯುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸ್ಥಾನಮಾನ ಸಿಗದಿದ್ದವರಿಂದ ಪಕ್ಷ ವಿರೋಧಿ ಹೇಳಿಕೆ: ಜಿಟಿಡಿ ವಿರುದ್ದ ಜೋಶಿ ಕಿಡಿ
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Alnavar: ಸ್ನಾನಕ್ಕೆಂದು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು
Successful Operation: ಅಪಘಾತದಲ್ಲಿ ಎದೆಗೆ ಹೊಕ್ಕ ಪೈಪ್-ಯುವಕನಿಗೆ ಮರುಜನ್ಮ
Minister V. Somanna: ಭಾರತೀಯ ರೈಲ್ವೇ ಜತೆ ಕೊಂಕಣ ರೈಲ್ವೇ ಶೀಘ್ರ ವಿಲೀನ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.