Ayodhya; ಶ್ರೀರಾಮನ ಪರವಾಗಿ ವಾದ ಮಂಡಿಸಿದ ಕಾಸರಗೋಡಿನ ಕೆ.ಎನ್‌. ಭಟ್‌


Team Udayavani, Jan 20, 2024, 11:21 PM IST

Ayodhya; ಶ್ರೀರಾಮನ ಪರವಾಗಿ ವಾದ ಮಂಡಿಸಿದ ಕಾಸರಗೋಡಿನ ಕೆ.ಎನ್‌. ಭಟ್‌

ಕುಂಬಳೆ: ರಾಮಜನ್ಮಭೂಮಿ ಅಯೋಧ್ಯೆ ಪ್ರಕರಣವನ್ನು ಅಲಹಾಬಾದ್‌ ಹೈಕೋರ್ಟ್‌ನಲ್ಲಿ 3 ವಷ೯ಗಳ ಕಾಲ ನಿರ್ವಹಣೆ ಮಾಡಿದವರು ಮತ್ತು ಭಗವಾನ್‌ ಶ್ರೀರಾಮನ ಪರವಾಗಿ ವಾದ ಮಂಡಿಸಿದವರು ಕರ್ನಾಟಕದ ಹಿರಿಯ ವಕೀಲ ಕೆ.ಎನ್‌. ಭಟ್‌ ಅವರು. 2010ರಲ್ಲಿ ಅಲಹಾಬಾದ್‌ ಹೈಕೊರ್ಟ್‌ ತೀರ್ಪು ನೀಡಿತ್ತು.

ಕೆ.ಎನ್‌. ಭಟ್‌ ಅವರು ಶ್ರೀರಾಮ ಅಯೋಧ್ಯೆಯಲ್ಲಿ ಜನ್ಮತಾಳಿದ್ದನ್ನು ಪೂರ್ಣ ಪ್ರಮಾಣದಲ್ಲಿ ಪ್ರತಿಪಾದಿಸಿದ್ದರು ಹಾಗೂ ಈ ಸಂಬಂಧ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯದ ಮುಂದಿಟ್ಟಿದ್ದರು. ಸುಪ್ರೀಂ ಕೋರ್ಟ್‌ ನೀಡಿದ ತೀರ್ಪಿನಲ್ಲಿ ಶ್ರೀರಾಮ ಅಯೋಧ್ಯೆಯಲ್ಲಿ ಜನಿಸಿದ್ದಕ್ಕೆ ಸಾಕ್ಷ್ಯಗಳು ಪುಷ್ಟೀಕರಿಸಿವೆ ಎಂದು ಉಲ್ಲೇಖಿಸಿದೆ.

ಅಯೋಧ್ಯೆ ಪ್ರಕರಣ ಸುಪ್ರೀಂ ಕೊರ್ಟ್‌ ಮೆಟ್ಟಿಲೇರಿದ ಸಂದರ್ಭದಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅಧ್ಯಾದೇಶ ಹೊರಡಿಸಬೇಕೆಂಬ ಕೂಗು ದೇಶಾದ್ಯಂತ ಬಲವಾಗಿ ಕೇಳಿ ಬಂದಿತ್ತು. ಆದರೆ ಅಧ್ಯಾದೇಶ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಪರಿಹಾರವಲ್ಲ ಎಂದು ಸ್ಪಷ್ಟವಾಗಿ ನುಡಿದವರು ಕೆ.ಎನ್‌. ಭಟ್‌.

1940ರಲ್ಲಿ ಕಾಸರಗೋಡು ಜಿಲ್ಲೆಯ ಪೆರ್ಲದಲ್ಲಿ ಜನಿಸಿದ ಕೆ.ಎನ್‌. ಭಟ್‌ ಅವರು ಸರಕಾರಿ ಕಾನೂನು ಕಾಲೇಜಿನಲ್ಲಿ 1962ರಲ್ಲಿ ಕಾನೂನು ಪದವಿ ಪಡೆದು ಬೆಂಗಳೂರಿನಲ್ಲಿ ವೃತ್ತಿ ಆರಂಭಿಸಿ ಬಳಿಕ 1986ರಲ್ಲಿ ಸುಪ್ರೀಂ ಕೊರ್ಟ್‌ ಹಿರಿಯ ವಕೀಲರಾಗಿ ಪದೋನ್ನತಿ ಹೊಂದಿದ್ದರು.

ಅವರನ್ನು 1996ರಲ್ಲಿ ಕೇಂದ್ರ ಸರಕಾರ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿ ನೇಮಿಸಿತ್ತು. 2003ರಿಂದ ಅಯೋಧ್ಯೆ ಪ್ರಕರಣದ ನಿರ್ವಹಣೆ ಹಿನ್ನೆಲೆಯಲ್ಲಿ ದಿಲ್ಲಿಯಲ್ಲಿ ನೆಲೆಸಿದ್ದ ಅವರು, ಅಲಹಾಬಾದ್‌ ಹೈಕೋರ್ಟ್‌ನಲ್ಲಿ ಭಗವಾನ್‌ ಶ್ರೀರಾಮನನ್ನು ಕಕ್ಷಿದಾರರನ್ನಾಗಿ ಮಾಡಿ ವಾದ ಮಂಡಿಸಿದ್ದರು.ಅಲ್ಲದೆ ದೇಶಾದ್ಯಂತ ಸುತ್ತಿ ಅಯೋಧ್ಯೆಯಲ್ಲಿ ಶ್ರೀರಾಮ ಜನಿಸಿದ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಕೋರ್ಟ್‌ ಮುಂದಿಟ್ಟಿದ್ದರು.

ಅವರು ಸಂಗ್ರಹಿಸಿದ ಸಾಕ್ಷ್ಯಾಧಾರಗಳು ಇದೀಗ ಅಯೋಧ್ಯೆಯಲ್ಲೇ ಶ್ರೀರಾಮ ಜನಿಸಿದ್ದ ಎಂಬ ವಾದವನ್ನು ಸುಪ್ರೀಂ ಕೋರ್ಟ್‌ ತೀರ್ಪಿನಲ್ಲಿ ಸಾಬೀತುಪಡಿಸಲು ಪೂರಕವಾಗಿವೆ.

ಟಾಪ್ ನ್ಯೂಸ್

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

04

Kasaragod: ವಿದ್ಯಾರ್ಥಿಗಳ ಮಧ್ಯೆ ಘರ್ಷಣೆ

0023

Kasargod: ಅಪಹರಿಸಿ ಹಲ್ಲೆ ಪ್ರಕರಣ: ಬಂಧನ

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

Election: ಬಿಜೆಪಿ, ಜೆಡಿಎಸ್‌ ಜತೆಯಾಗಿ ಸ್ಪರ್ಧೆ: ಸಾ.ರಾ. ಮಹೇಶ್‌

man-a

Kumble: ಕಾರು ಅಪಘಾತ; ಗಾಯಾಳು ಮಹಿಳೆ ಸಾವು

12

Madikeri: 2022ರಲ್ಲಿ ನಡೆದ ಮಹಿಳೆಯ ಹತ್ಯೆ: ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.