![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 23, 2024, 11:07 AM IST
ಬೆಳ್ತಂಗಡಿ: ಅಯೋಧ್ಯೆಯಲ್ಲಿ ಶ್ರೀ ರಾಮ ವಿರಾಜಮಾನನಾದ ದಿನದಂದೆ ಅಂದರೆ ಜ.22 ರಂದೇ ಬೆಳ್ತಂಗಡಿ ತಾಲೂಕಿನ ಉಜಿರೆ ಬೆನಕ ಆಸ್ಪತ್ರೆಯಲ್ಲಿ ತಾಯಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಬಸನಬೆಟ್ಟು ನಿವಾಸಿ ಪವಿತ್ರ ಜ.22 ರಂದು ಉಜಿರೆ ಬೆನಕ ಆಸ್ಪತ್ರೆಯಲ್ಲಿ ಬೆಳಗ್ಗೆ 6:20 ಕ್ಕೆ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ-ಮಗು ಆರೋಗ್ಯವಾಗಿದ್ದಾರೆ.
ಮಗುವಿನ ತಂದೆ ಖುಷಿಯಿಂದ ಬೆಂಗಳೂರಿನಿಂದ ಆಸ್ಪತ್ರೆಗೆ ಬಂದಿದ್ದು, ಸಂತಸ ವ್ಯಕ್ತಪಡಿಸಿದ್ದಾರೆ. ಅದಲ್ಲದೆ ನಿನ್ನೆ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆಯ ದಿನದಂದೇ ಗಂಡು ಮಗುವಿಗೆ ಜನನವಾಗಿರುವುದರಿಂದ ಮಗುವಿಗೆ ಶ್ರೀರಾಮ ಎಂದು ಹೆಸರಿಡಲು ಯೋಚಿಸುತ್ತೇವೆ ಎಂದಿದ್ದಾರೆ.
ಸುಳ್ಯದ ಸುರೇಶ್ ಮತ್ತು ಪಡಂಗಡಿಯ ಪವಿತ್ರ ದಂಪತಿಗೆ 6 ವರ್ಷದ ಹೆಣ್ಣು ಮಗು ಇದೆ. ಇದೀಗ ಎರಡನೇ ಮಗುವಿನ ಜನನಕ್ಕೆ ಉಜಿರೆಯ ಬೆನಕ ಆಸ್ಪತ್ರೆಯ ಡಾ. ಅಂಕಿತಾ ಭಟ್ ಫೆ.3 ರಂದು ಸಂಭವನೀಯ ದಿನಾಂಕ ನೀಡಿದ್ದರು. ಅದರೆ ಪವಿತ್ರಾ ಅವರಿಗೆ ಜ.21 ರಂದು ರಾತ್ರಿಯೇ ಹೆರಿಗೆ ನೋವು ಕಾಣಿಸಿದ್ದರಿಂದ ತಕ್ಷಣ ಉಜಿರೆ ಬೆನಕ ಆಸ್ಪತ್ರೆಗೆ ಬಂದು ದಾಖಲಾಗಿದ್ದರು. ಜ.22 ರಂದು ಬೆಳಗ್ಗೆ 6:20 ಕ್ಕೆ ನಾರ್ಮಲ್ ಡೆಲಿವರಿ ಅಗಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.