![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
ಈ ಕಾರಣದಿಂದ ಜೂ.ಎನ್ ಟಿಆರ್ ಬಹು ನಿರೀಕ್ಷಿತ ʼದೇವರʼ ರಿಲೀಸ್ ಡೇಟ್ ಮುಂದೂಡಿಕೆ?
Team Udayavani, Jan 23, 2024, 7:59 PM IST
![ಈ ಕಾರಣದಿಂದ ಜೂ.ಎನ್ ಟಿಆರ್ ಬಹು ನಿರೀಕ್ಷಿತ ʼದೇವರʼ ರಿಲೀಸ್ ಡೇಟ್ ಮುಂದೂಡಿಕೆ?](https://www.udayavani.com/wp-content/uploads/2024/01/rrr-620x349.jpg)
ಹೈದರಾಬಾದ್: ʼಆರ್ ಆರ್ ಆರ್ʼ ಸಿನಿಮಾದ ಬಳಿಕ ಜೂ.ಎನ್ ಟಿಆರ್ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಜನಪ್ರಿಯತೆಗೆ ತಕ್ಕಂತೆ, ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ.
ಜೂ. ಎನ್ ಟಿಆರ್ ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಸಿನಿಮಾ ಅನೌನ್ಸ್ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ.
ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಹ್ನವಿ ಕಪೂರ್, ನಟ ಸೈಫ್ ಅಲಿಖಾನ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬಿಟೌನ್ ಸಿನಿಮಂದಿಗೂ ʼದೇವರʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಎರಡು ಭಾಗದಲ್ಲಿ ʼದೇವರʼ ತೆರೆ ಕಾಣಲಿದೆ. ಮೊದಲ ಭಾಗ ಇದೇ ಏಪ್ರಿಲ್ 5 ರಂದು ರಿಲೀಸ್ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಸಿನಿಮಾ ಅಂದುಕೊಂಡ ದಿನಕ್ಕೆ ತೆರೆಗೆ ಬರುವುದಿಲ್ಲ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
“ದೇವರ ಸಿನಿಮಾಗೆ ವಿಎಫ್ ಎಕ್ಸ್ ಕೆಲಸ ಹೆಚ್ಚಿದೆ. ಔಟ್ ಪುಟ್ ಬರಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ಕಾರಣದಿಂದ ಚಿತ್ರತಂಡ ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ. ಅಂದುಕೊಂಡ ದಿನಕ್ಕೆ (ಏ.5 ರಂದು) ರಿಲೀಸ್ ಮಾಡದಿರಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.
“ಇನ್ನು ಕೂಡ 20 ದಿನದ ಚಿತ್ರೀಕರಣ ಬಾಕಿಯಿದೆ. ಇದಲ್ಲದೆ ಸೈಫ್ ಅಲಿಖಾನ್ ಅವರಿಗೆ ಭುಜದ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆಯಿದೆ. ಈ ಕಾರಣದಿಂದ ರಿಸ್ಕ್ ತೆಗದುಕೊಳ್ಳದೆ ಸಿನಿಮಾ ರಿಲೀಸ್ ದಿನವನ್ನು ಮುಂದೂಡಲಾಗಿದೆ. ಸಿನಿಮಾ 2024 ರ ದ್ವಿತೀಯಾರ್ಧದಲ್ಲಿ ತೆರೆ ಕಾಣಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.
ಇದಾದ ಬಳಿಕ ಜೂ.ಎನ್ ಟಿಆರ್ ಹೃತಿಕ್ ರೋಷನ್ ಅವರ ʼವಾರ್ -2ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಏಪ್ರಿಲ್ ನಲ್ಲಿ ಈ ಸಿನಿಮಾದ ಚಿತ್ರೀಕರಣ ಆರಂಭಗೊಳ್ಳಲಿದೆ.
ಟಾಪ್ ನ್ಯೂಸ್
![Mohua Moitra](https://www.udayavani.com/wp-content/uploads/2024/07/Mohua-Moitra-415x247.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
![1](https://www.udayavani.com/wp-content/uploads/2024/07/1-8-150x90.jpg)
ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ
![SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ](https://www.udayavani.com/wp-content/uploads/2024/07/2-4-150x90.jpg)
SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ
![Rashmika Mandanna is in kubera movie](https://www.udayavani.com/wp-content/uploads/2024/07/rashmika-150x83.jpg)
Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
MUST WATCH
ಹೊಸ ಸೇರ್ಪಡೆ
![Mohua Moitra](https://www.udayavani.com/wp-content/uploads/2024/07/Mohua-Moitra-150x89.jpg)
NCW ಮುಖ್ಯಸ್ಥೆ ವಿರುದ್ಧ ಅವಹೇಳನಕಾರಿ ಪದ: ಮಹುವಾ ಮೊಯಿತ್ರಾ ವಿರುದ್ಧ ಎಫ್ಐಆರ್
![National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ](https://www.udayavani.com/wp-content/uploads/2024/07/NH-150x90.jpg)
National Highway ವಾಹನಗಳ ವೇಗ ನಿಯಂತ್ರಣಕ್ಕೆ ಲೇಸರ್ ಟ್ರ್ಯಾಕ್ ಅಳವಡಿಕೆ
![Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು](https://www.udayavani.com/wp-content/uploads/2024/07/le-150x90.jpg)
Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು
![1-crick](https://www.udayavani.com/wp-content/uploads/2024/07/1-crick-150x84.jpg)
Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ
![6](https://www.udayavani.com/wp-content/uploads/2024/07/6-7-150x90.jpg)
Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್ಗೆ ಕೃಷ್ಣನೂರು ಉಡುಪಿಯ ನಂಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.