Lok Sabha Election; ಬಿಜೆಪಿ ಟಿಕೆಟ್‌ ಸಿದ್ದೇಶ್ವರ್‌ಗೋ, ಪುತ್ರ ಅನಿತ್‌ಕುಮಾರ್‌ಗೋ?


Team Udayavani, Jan 24, 2024, 7:15 AM IST

Lok Sabha Election; ಬಿಜೆಪಿ ಟಿಕೆಟ್‌ ಸಿದ್ದೇಶ್ವರ್‌ಗೋ, ಪುತ್ರ ಅನಿತ್‌ಕುಮಾರ್‌ಗೋ?

ದಾವಣಗೆರೆ: ದಾವಣಗೆರೆ ಲೋಕಸಭೆ ಕ್ಷೇತ್ರ ಕಳೆದ ಕೆಲವು ದಶಕಗಳಿಂದ ಬಿಜೆಪಿಯ ವಶದಲ್ಲಿದ್ದು, ಈ ಸಲ ಈ ಕ್ಷೇತ್ರದ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮೇಲುಗೈ ಸಾಧಿಸಿರುವುದು ಆ ಪಕ್ಷದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ.

ಪ್ರಸ್ತುತ 8 ವಿಧಾನಸಭೆ ಕ್ಷೇತ್ರಗಳಲ್ಲಿ 1 ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದು, ಉಳಿದ 7 ಕಡೆ ಕಾಂಗ್ರೆಸ್‌ ಶಾಸಕರಿದ್ದಾರೆ. ಹಿಂದೊಮ್ಮೆ ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ದಾವಣಗೆರೆ ಕ್ಷೇತ್ರವನ್ನು ಈ ಬಾರಿ ಶತಾಯಗತಾಯ ಮತ್ತೆ ವಶಪಡಿಸಿಕೊಳ್ಳಲು ಕಾಂಗ್ರೆಸ್‌ ಪಡೆ ಕಾರ್ಯತಂತ್ರ ರೂಪಿಸುತ್ತಿದೆ. ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿ ಕಾಂಗ್ರೆಸ್‌ಗೆ ಹೊಸ ಸವಾಲಾಗಿದ್ದು, ಎದುರಿಸಲು ರಣತಂತ್ರ ಹೆಣೆಯುತ್ತಿದೆ.

ಕ್ಷೇತ್ರದಲ್ಲಿ ಜೆಡಿಎಸ್‌ ಅಷ್ಟೊಂದು ಪ್ರಬಲವಾಗಿಲ್ಲ. ಹಾಲಿ ಬಿಜೆಪಿ ಸಂಸದರು ಇರುವುದರಿಂದ ಬಿಜೆಪಿ ಅಭ್ಯರ್ಥಿಗಳೇ ಕಣಕ್ಕಿಳಿಯುವುದು ಬಹುತೇಕ ಖಚಿತ. ಹಾಲಿ ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಅವರು ನಾಲ್ಕು ಬಾರಿ ನಿರಂತರವಾಗಿ (2004, 2009, 2014, 2019) ಜಯ ಗಳಿಸಿದ್ದು, ಈ ಬಾರಿಯೂ ಮತ್ತೂಮ್ಮೆ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ. ವಯಸ್ಸಿನ ಆಧಾರ, ನಿರಂತರವಾಗಿ ಒಂದೇ ವ್ಯಕ್ತಿಗೆ ಟಿಕೆಟ್‌ ಸೇರಿದಂತೆ ಇನ್ನಿತರ ಕಾರಣಗಳಿಂದ ಒಂದು ವೇಳೆ ಪಕ್ಷ ಟಿಕೆಟ್‌ ನಿರಾಕರಿಸಿದರೆ ಮಗ ಅನಿತ್‌ಕುಮಾರ್‌ಗೆ ಅವಕಾಶ ನೀಡಬೇಕೆಂಬ ಬೇಡಿಕೆಯನ್ನು ಅವರು ಹೈಕಮಾಂಡ್‌ ಎದುರು ಇಟ್ಟಿದ್ದಾರೆ ಎನ್ನಲಾಗಿದೆ.

ರೇಸ್‌ನಲ್ಲಿ ರೇಣು
ಬಿಜೆಪಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಈ ಬಾರಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಒಟ್ಟಾರೆ ಬಿಜೆಪಿಯಲ್ಲಿ ಸಂಸದ ಸಿದ್ದೇಶ್ವರ ಜತೆ ಪುತ್ರ ಅನಿತ್‌ಕುಮಾರ್‌, ರೇಣುಕಾಚಾರ್ಯ, ನಿವೃತ್ತ ಪರಿಸರ ಅಧಿಕಾರಿ ಕೆ.ಬಿ. ಕೊಟ್ರೇಶ್‌ ಹಾಗೂ ಮಾಜಿ ಶಾಸಕ ಟಿ. ಗುರುಸಿದ್ದನಗೌಡರ ಪುತ್ರ ವೈದ್ಯ ಡಾ| ರವಿಕುಮಾರ್‌ ಸೇರಿದಂತೆ ನಾಲ್ಕೈದು ಮಂದಿ ಹೊಸಬರು ಟಿಕೆಟ್‌ಗಾಗಿ ತೆರೆಮರೆಯ ಕಸರತ್ತು ನಡೆಸಿದ್ದಾರೆ.

“ಕೈ’ ವಶಕ್ಕೆ ಕಸರತ್ತು
ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪತ್ನಿ ಡಾ| ಪ್ರಭಾ ಮಲ್ಲಿಕಾರ್ಜುನ್‌ ಅವರು ಸಕ್ರಿಯರಾಗಿದ್ದು, ಲೋಕಸಭೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಬಹುದು ಎಂಬ ವದಂತಿ ಹಬ್ಬಿದೆ. ಮಲ್ಲಿಕಾರ್ಜುನ್‌ ಅವರೇ ಅಖಾಡಕ್ಕಿಳಿದರೂ ಅಚ್ಚರಿಯಿಲ್ಲ. ಇನ್ನು ಕಳೆದ ಚುನಾವಣೆಯಲ್ಲಿ ಉತ್ತಮ ಪೈಪೋಟಿ ಕೊಟ್ಟಿದ್ದ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಬಿ. ಮಂಜಪ್ಪ ಇನ್ನೊಮ್ಮೆ ಸ್ಪರ್ಧಿಸುವ ಇಚ್ಛೆ ಹೊಂದಿದ್ದಾರೆ. ಇನ್‌ಸೈಟ್ಸ್‌ ಐಎಎಸ್‌ ಕೋಚಿಂಗ್‌ ಸೆಂಟರ್‌ ಸಂಸ್ಥಾಪಕ ವಿನಯ್‌ಕುಮಾರ್‌ ನಿಖಿಲ್ ಕೊಂಡಜ್ಜಿ, ಶಿವಕುಮಾರ್‌ ಒಡೆಯರ್‌ ಸಹ ಟಿಕೆಟ್‌ ಆಕಾಂಕ್ಷಿಗಳಾಗಿದ್ದಾರೆ.

ಹಾಲಿ ಸಂಸದರು: ಡಾ| ಜಿ.ಎಂ. ಸಿದ್ದೇಶ್ವರ

ಬಿಜೆಪಿ ಸಂಭಾವ್ಯರು
-ಡಾ| ಜಿ.ಎಂ. ಸಿದ್ದೇಶ್ವರ
-ಜಿ.ಎಸ್‌.ಅನಿತ್‌ಕುಮಾರ್‌
-ಎಂ.ಪಿ.ರೇಣುಕಾಚಾರ್ಯ
-ಕೆ.ಬಿ.ಕೊಟ್ರೇಶ್‌
-ಡಾ| ಟಿ.ಜಿ. ರವಿಕುಮಾರ್‌

ಕಾಂಗ್ರೆಸ್‌ ಸಂಭಾವ್ಯರು
-ಎಚ್‌.ಬಿ. ಮಂಜಪ್ಪ
-ಡಾ| ಪ್ರಭಾ ಮಲ್ಲಿಕಾರ್ಜುನ್‌
-ಜಿ.ಬಿ. ವಿನಯಕುಮಾರ್‌
-ಶಿವಕುಮಾರ್‌ ಒಡೆಯರ್‌
-ನಿಖಿಲ್ ಕೊಂಡಜ್ಜಿ

– ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Dinesh-gundurao

Private Hospital: ಡೆಂಗ್ಯೂ ಪರೀಕ್ಷೆಗೆ ಏಕರೂಪ ದರ

CM-Siddaramaiah

Valmiki Nigama ಅಕ್ರಮದ ತನಿಖೆ ನಡೆಯುತ್ತಿದೆ: ಸಿಎಂ ಸಿದ್ದರಾಮಯ್ಯ

CM-Meeting

Bumper Gift: ಬಡವರ 1.30 ಲಕ್ಷ ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂಪಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಐವರಿಗೆ ಗಂಭೀರ ಗಾಯ

Davanagere; Protest by BJP Zilla Raitamorcha condemning the price hike

Davanagere; ಬೆಲೆ ಏರಿಕೆ ಖಂಡಿಸಿ ಬಿಜೆಪಿ ಜಿಲ್ಲಾ ರೈತಮೋರ್ಚಾದಿಂದ ಪ್ರತಿಭಟನೆ

1-sadsadasd

Congress; ಈ ಬಾರಿಯೇ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಶಾಸಕ ಬಸವರಾಜ ವಿ.ಶಿವಗಂಗಾ

7

Honnali: ಡೆಂಘೀಗೆ ವಿದ್ಯಾರ್ಥಿನಿ ಬಲಿ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆ ಆಗುತ್ತದೆಯೇ…? : ಶಾಮನೂರು ಪ್ರಶ್ನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

Vijayapura: ಕೃಷ್ಣಾ ನದಿ ತೆಪ್ಪ ದುರಂತ… ರಫೀಕ್ ಶವ ಪತ್ತೆ, ರಕ್ಷಣಾ ಕಾರ್ಯಾಚರಣೆ ಮುಕ್ತಾಯ

4-yadagiri

Narayanapur: ವಿದ್ಯುತ್‌ ತಂತಿ ತಗುಲಿ ಮಹಿಳೆ ಸಾವು

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

T20 World Cup ಗೆದ್ದು ತಾಯ್ನಾಡಿಗೆ ಮರಳಿದ ಟೀಮ್ ಇಂಡಿಯಾ… ಅದ್ಧೂರಿ ಸ್ವಾಗತ

3-holiday

Heavy Rain: ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

2-Vijayapura

Vijayapura: ಕೃಷ್ಣಾ ನದಿ ತೆಪ್ಪ ದುರಂತ: ಮತ್ತೊಬ್ಬನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.