![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 24, 2024, 6:00 AM IST
ಹೈದರಾಬಾದ್: ಕಳೆದ 4 ವರ್ಷಗಳಿಂದ ಬಾಕಿ ಉಳಿದಿದ್ದ ಬಿಸಿಸಿಐ ವಾರ್ಷಿಕ ಕ್ರಿಕೆಟ್ ಪ್ರಶಸ್ತಿ ಪ್ರದಾನ ಸಮಾರಂಭ ಮಂಗಳವಾರ ಏಕಕಾಲದಲ್ಲಿ ಹೈದರಾಬಾದ್ನಲ್ಲಿ ನಡೆಯಿತು. ಭಾರತ ಮತ್ತು ಇಂಗ್ಲೆಂಡ್ ತಂಡಗಳ ಆಟಗಾರರು ಇದಕ್ಕೆ ಸಾಕ್ಷಿಯಾದರು.
ಫಾರುಖ್ ಇಂಜಿನಿಯರ್ ಮತ್ತು ರವಿಶಾಸ್ತ್ರಿ ಜೀವಮಾನದ ಸಾಧನೆಗಾಗಿ ಕರ್ನಲ್ ಸಿ.ಕೆ. ನಾಯ್ಡು ಪ್ರಶಸ್ತಿಯಿಂದ ಗೌರವಿತರಾದರು. ಆರ್. ಅಶ್ವಿನ್ 2ನೇ ಬಾರಿಗೆ ವರ್ಷದ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ ಪ್ರಶಸ್ತಿಗೆ ಭಾಜನರಾದರು. ಉಳಿದ ಮೂವರೆಂದರೆ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಶುಭಮನ್ ಗಿಲ್. ವನಿತಾ ವಿಭಾಗದಲ್ಲಿ ಈ ಪ್ರಶಸ್ತಿ ದೀಪ್ತಿ ಶರ್ಮ ಮತ್ತು ಸ್ಮತಿ ಮಂಧನಾ ಪಾಲಾಯಿತು.
ಮಿಥಾಲಿ ರಾಜ್, ಜೂಲನ್ ಗೋಸ್ವಾಮಿ, ಹರ್ಮನ್ಪ್ರೀತ್ ಕೌರ್ ಕೂಡ ಪ್ರಶಸ್ತಿಗಳಿಂದ ಸಂಭ್ರಮಿಸಿದರು. ಶ್ರೇಷ್ಠ ದೇಶಿ ಕ್ರಿಕೆಟ್ ಆಟಗಾರ್ತಿಗೆ ನೀಡಲಾಗುವ ಜಗಮೋಹನ್ ದಾಲ್ಮಿಯಾ ಪ್ರಶಸ್ತಿ ಕಾಶ್ವಿ ಗೌತಮ್ ಅವರಿಗೆ ಒಲಿಯಿತು.
2019-20ರಿಂದ 2022-23ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
·ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಯಶಸ್ವಿ ಪದಾರ್ಪಣೆ
ಮಾಯಾಂಕ್ ಅಗರ್ವಾಲ್, ಅಕ್ಷರ್ ಪಟೇಲ್, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್.
ಪ್ರಿಯಾ ಪುನಿಯಾ, ಶಫಾಲಿ ವರ್ಮ, ಎಸ್. ಮೇಘನಾ, ದೇವಿಕಾ ವೈದ್ಯ.
·ಪಾಲಿ ಉಮ್ರಿಗರ್ ಪ್ರಶಸ್ತಿ
ವರ್ಷದ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರರು
ಮೊಹಮ್ಮದ್ ಶಮಿ, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ, ಶುಭಮನ್ ಗಿಲ್.
·ವರ್ಷದ ಶ್ರೇಷ್ಠ ಅಂತಾರಾಷ್ಟ್ರೀಯ ಆಟಗಾರ್ತಿಯರು
ದೀಪ್ತಿ ಶರ್ಮ (2019-20, 2020-21), ಸ್ಮತಿ ಮಂಧನಾ (2021-22, 2022-23).
·ದಿಲೀಪ್ ಸರ್ದೇಸಾಯಿ ಪ್ರಶಸ್ತಿ (2022-23)
ಅತ್ಯಧಿಕ ಟೆಸ್ಟ್ ವಿಕೆಟ್ ಸಾಧಕ: ಆರ್. ಅಶ್ವಿನ್ (ಭಾರತ-ವೆಸ್ಟ್ ಇಂಡೀಸ್).
ಅತ್ಯಧಿಕ ಟೆಸ್ಟ್ ರನ್ ಸಾಧಕ: ಯಶಸ್ವಿ ಜೈಸ್ವಾಲ್ (ಭಾರತ-ವೆಸ್ಟ್ ಇಂಡೀಸ್).
·ಕರ್ನಲ್ ಸಿ.ಕೆ. ನಾಯ್ಡು ಪ್ರಶಸ್ತಿ
ಫಾರುಖ್ ಇಂಜಿನಿಯರ್, ರವಿಶಾಶಾಸ್ತ್ರಿ .
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.