![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 24, 2024, 12:07 PM IST
ಹುಣಸೂರು (ಮೈಸೂರು): ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದ ಸಹೋದರಿ ತಿಳಿಹೇಳಿದರೂ ಕೇಳದೆ ಇದ್ದುದನ್ನು ಕಂಡು ಸಹೋದರನು ಆಕೆಯನ್ನು ಕೆರೆಗೆ ನೂಕಿ ಹತ್ಯೆಗೈದ ಘಟನೆ ಹುಣಸೂರು ತಾಲೂಕಿನ ಮರೂರಿನಲ್ಲಿ ನಡೆದಿದೆ.
ಇದೇ ವೇಳೆ ಮಗಳನ್ನು ಬಚಾವ್ ಮಾಡಲು ಹೋದ ತಾಯಿಯೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಹುಣಸೂರು ತಾಲೂಕಿನ ಹಿರಿಕ್ಯಾತನಹಳ್ಳಿ ಗ್ರಾಮದ ಧನುಶ್ರೀ (19) ಮತ್ತು ತಾಯಿ ಅನಿತಾ (43) ಮೃತಪಟ್ಟ ದುರ್ದೈವಿಗಳು. ಆರೋಪಿ ನಿತೀಶ್ ನನ್ನು ಗ್ರಾಮಾಂತರ ಠಾಣಾ ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಏನು?
ಹುಣಸೂರಿನ ಕಾಲೇಜಿನಲ್ಲಿ ಅಂತಿಮ ಪದವಿ ವ್ಯಾಸಂಗ ಮಾಡುತ್ತಿದ್ದ ಧನುಶ್ರೀ ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದಳು. ವಿಷಯ ತಿಳಿದ ನಿತೀಶ್ ತಂಗಿಗೆ ಬುದ್ದಿ ಹೇಳಿದ್ದ. ಮನೆಯವರಿಗೂ ಮಾಹಿತಿ ನೀಡಿದ್ದ. ಈ ಬಗ್ಗೆ ಜಗಳವೂ ನಡೆದಿತ್ತು.
ಇತ್ತೀಚೆಗೆ ಇನ್ಸ್ಟಾ ಗ್ರಾಂನಲ್ಲಿ ಬುರ್ಖಾ ಧರಿಸಿಕೊಂಡು ಹೆಸರು ಬದಲಾಯಿಸಿಕೊಂಡಿದ್ದ ಬಗ್ಗೆ ಪೋಸ್ಟ್ ಮಾಡಿದ್ದಳು. ಇದನ್ನು ಗಮನಿಸಿದ ನಿತೀಶ್ ತಾಯಿಗೆ ತಿಳಿಸಿದ್ದಲ್ಲದೆ ತಂಗಿಯೊಂದಿಗೆ ಜಗಳ ಮಾಡಿದ್ದ. ಮಂಗಳವಾರ ತಂಗಿಯನ್ನು ಹಮ್ಮಿಗೆಯ ಅಜ್ಜಿ ಮನೆಗೆ ಬಿಡುವುದಾಗಿ ತಾಯಿಗೆ ಹೇಳಿ ಮೂವರು ಸಂಜೆ ಹಿರಿಕ್ಯಾತನಹಳ್ಳಿಯಿಂದ ಬೈಕ್ ನಲ್ಲಿ ಹೊರಟಿದ್ದರು.
ಈ ವೇಳೆ ಮರೂರು ಬಳಿಯ ಕೆರೆಬಳಿ ಮೂತ್ರ ವಿಸರ್ಜನೆ ನೆಪದಲ್ಲಿ ಬೈಕ್ ನಿಲ್ಲಿಸಿದ ನಿತೀಶ್ ಕೆಳಗಿಳಿದು ತಂಗಿಯನ್ನು ಕೆರೆಗೆ ತಳ್ಳಿದ್ದಾನೆ. ನೀರಿನಲ್ಲಿ ಮುಳುಗುವುದನ್ನು ಕಂಡ ತಾಯಿ ಮಗಳ ರಕ್ಷಣೆಗೆ ಇಳಿದ ವೇಳೆ ಅವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬುಧವಾರ ಬೆಳಗ್ಗೆ ಅಗ್ನಿಶಾಮದ ದಳದ ಸಿಬ್ಬಂದಿಗಳು ಶವವನ್ನು ಮೇಲೆತ್ತಿದರು. ವಿಷಯ ತಿಳಿದ ನೂರಾರು ಗ್ರಾಮಸ್ಥರು ಕೆರೆ ಬಳಿ ಜಮಾಯಿಸಿದ್ದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.