Fraud: 25 ಕೋಟಿ ಕೊಡುವೆ ಎಂದು 1.1 ಕೋಟಿ ರೂ. ದೋಚಿದ!


Team Udayavani, Jan 24, 2024, 3:34 PM IST

Fraud: 25 ಕೋಟಿ ಕೊಡುವೆ ಎಂದು 1.1 ಕೋಟಿ ರೂ. ದೋಚಿದ!

ಮಂಡ್ಯ: ಒಂದು ಕೋಟಿ ರೂ. ಕೊಟ್ಟರೆ ಅದಕ್ಕೆ ಪ್ರತಿಯಾಗಿ ನಿಮ್ಮ ಟ್ರಸ್ಟ್‌ಗೆ 25 ಕೋಟಿ ರೂ. ದೇಣಿಗೆ ನೀಡುತ್ತೇನೆ ಎಂದು ನಂಬಿಸಿದ ವಂಚಕನೊಬ್ಬ 1.1 ಕೋಟಿ ರೂ. ದೋಚಿಕೊಂಡು ಪರಾರಿಯಾಗಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಹೋಬಳಿಯ ಶಿಂಷಾಪುರದ ಕ್ರೆçಸ್ತ ಶಿಕ್ಷಣ ಸಂಸ್ಥೆಯಲ್ಲಿ ನಡೆದಿ ರು ವುದು ತಡವಾಗಿ ಬೆಳಕಿಗೆ ಬಂದಿದೆ.ಮಂಗ ಳೂರಿನ ಸೂರ್ಯ ಎಂಬಾತ ವಂಚನೆ ಮಾಡಿರುವ ಆರೋಪಿಯಾಗಿದ್ದು, ಈತನ ವಿರುದ್ಧ ಬೆಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರಿನಿಂದ ಬಂದಿದ್ದ ಮೇರಿನ್‌ ಪಿಂಟೋ ಅವರು ಮಳವಳ್ಳಿ ತಾಲೂಕಿನ ಶಿಂಷಾಪುರದಲ್ಲಿ ಕಳೆದ 10 ವರ್ಷಗಳಿಂದ ಶ್ಯಾಲೋಮ್‌ ಎಜುಕೇಷನಲ್‌ ಮತ್ತು ಚಾರಿಟಬಲ್‌ ಟ್ರಸ್ಟ್‌ ಸ್ಥಾಪಿಸಿ ಶಿಕ್ಷಣ ಸಂಸ್ಥೆ ಆರಂಭಿಸಿದ್ದರು. ಸಂಸ್ಥೆಗೆ ಹತ್ತಿರವಾಗಿದ್ದ ಸ್ವಾಮೀಜಿ ಯೊಬ್ಬರು ತಮಗೆ ಪರಿಚಿತವಿರುವ ಸೂರ್ಯ ಎಂಬ ವ್ಯಕ್ತಿಯನ್ನು ಪರಿಚಯಿಸಿ ನಿಮ್ಮ ಟ್ರಸ್ಟ್‌ಗೆ ಏನಾದರೂ ಸಹಾಯ ಅಗತ್ಯವಿದ್ದಲ್ಲಿ ಇವರು ನಿಮಗೆ ನೆರವಾಗುತ್ತಾರೆ ಎಂದು ತಿಳಿಸಿದ್ದರು. ಸ್ವಾಮೀಜಿ ಹೇಳಿದ ಮಾತನ್ನು ನಂಬಿ ಪರಿಚಿತನಾದ ವ್ಯಕ್ತಿಯಿಂದ ಸ್ಥಳೀಯವಾಗಿ ಸಣ್ಣಪುಟ್ಟ ಸಹಾಯವನ್ನು ಪಡೆದುಕೊಂಡಿದ್ದಾರೆ. ನಂತರ, ಶಿಕ್ಷಣ ಸಂಸ್ಥೆ ದೊಡ್ಡದಾಗಿ ನಿರ್ಮಾಣ ಮಾಡುವ ಉದ್ದೇಶದಿಂದ ಸೂರ್ಯನ ಬಳಿ ಹೇಳಿಕೊಂಡಿದ್ದಾರೆ.

ಇದನ್ನೇ ಬಂಡವಾಳ ಮಾಡಿಕೊಂಡಿರುವ ಸೂರ್ಯ, “ನಿಮಗೆ ನಾನು ದಾನಿಗಳಿಂದ 25 ಕೋಟಿ ರೂ. ದೇಣಿಗೆ ಕೊಡಿಸುತ್ತೇನೆ. ಆದರೆ, ನೀವು ನನಗೆ 1 ಕೋಟಿ ರೂ. ಹಣ ನೀಡಬೇಕು’ ಎಂದು ಪುಸಲಾಯಿಸಿದ್ದಾನೆ. ಈತನ ಮಾತು ನಂಬಿದ ಟ್ರಸ್ಟ್‌ನ ಖಜಾಂಚಿ ಮೇರಿ, ಅಧ್ಯಕ್ಷೆ ಮೇರಿನೋ ಪಿಂಟೋ, ಕಾರ್ಯದರ್ಶಿ ಎಂಎಲ್ಡಾ ಪಿಂಟೋ ಸೇರಿದಂತೆ ಸದಸ್ಯರು ಸಭೆ ನಡೆಸಿ ದಾನಿಗಳಿಂದ ಒಂದು ಕೋಟಿ ರೂ. ಹಣವನ್ನು ಸಾಲದ ರೂಪದಲ್ಲಿ ಪಡೆದು 25 ಕೋಟಿ ರೂ. ಬಂದ ನಂತರ ಸಾಲ ವಾಪಸ್‌ ನೀಡುವ ಬಗ್ಗೆ ಚರ್ಚೆ ನಡೆಸಿದ್ದರು.

ಅದರಂತೆ ದಾನಿಗಳಿಂದ 1.10 ಕೋಟಿ ರೂ. ಹಣ ಹೊಂದಿಸಿ, ಹಣ ಇರುವ ಬ್ಯಾಗ್‌ನ ಫೋಟೋ ತೆಗೆದು ಸೂರ್ಯನಿಗೆ ಕಳುಹಿಸಿದ್ದಾರೆ. ಬಳಿಕ ಜ.20ರಂದು ಸೂರ್ಯನಿಗೆ ಬರುವಂತೆ ತಿಳಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ವಂಚಕ ಸೂರ್ಯ “ಸಣ್ಣ ಕಾರ್ಯಕ್ರಮ ಇಟ್ಟುಕೊಳ್ಳಿ, ನಾನು ಮತ್ತು ನನ್ನ ಜೊತೆ 25 ಮಂದಿ ಬರುತ್ತೇವೆ’ ಎಂದು ತಿಳಿಸಿದ್ದಾನೆ. ಆತನ ಮಾತು ನಂಬಿದ ಟ್ರಸ್ಟ್‌ನವರು ಶಿಂಷಾಪುರದಲ್ಲಿ ಎಲಿಜಬೆತ್‌ ಎಂಬುವರ ಮನೆಯಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ.

ಜ.20ರಂದು ಟ್ರಸ್ಟಿ ಮನೆಗೆ ಹೋದ ಸೂರ್ಯ ಟ್ರಸ್ಟ್‌ ಖಜಾಂಚಿ ಮೇರಿ ಅವರು ಸಿದ್ಧಪಡಿಸಿದ್ದ 1 ಕೋಟಿ ರೂ. ಹಣ ಎಲ್ಲಿದೆ ಎಂದು ಕೇಳಿದ್ದಾನೆ. ಆಗ ಅವರು ಹಣವನ್ನು ತೋರಿಸಿದ್ದಾರೆ.

ಇನ್ನು ಸೂರ್ಯ ಕೂಡ ಕಾರಿನಲ್ಲಿ ತಂದಿದ್ದ ಒಂದು ಪ್ಲಾಸ್ಟಿಕ್‌ ಚೀಲವನ್ನು ತಂದು ಇದರಲ್ಲಿ 25 ಕೋಟಿ ರೂ. ಹಣವಿದೆ ಎಂದು ಇಟ್ಟಿದ್ದಾರೆ. ನಂತರ ಸೂರ್ಯ ತಾನು ತಂದಿದ್ದ ಜ್ಯೂಸ್‌ ಅನ್ನು ನನಗೆ ಹಾಗೂ ಅಧ್ಯಕ್ಷರಿಗೆ ಕುಡಿಯಲು ಕೊಟ್ಟರು. ಜ್ಯೂಸ್‌ ಕುಡಿದ ನಂತರ ನಾವು ಪ್ರಜ್ಞೆ ತಪ್ಪಿದೆವು. ನಂತರ ಸಂಜೆ 4 ಗಂಟೆಗೆ ಎಚ್ಚರಗೊಂಡಾಗ ಪಕ್ಕದಲ್ಲಿದ್ದ ಸೂರ್ಯ ಅಲ್ಲಿರಲಿಲ್ಲ. ಅಲ್ಲದೆ, ರೂಮಿನಲ್ಲಿದ್ದ 1.10 ಕೋಟಿ ರೂ. ಹಣವೂ ಇರಲಿಲ್ಲ. ಆಗ ಸೂರ್ಯ ತಂದಿದ್ದ ಚೀಲವನ್ನು ಬಿಚ್ಚಿ ನೋಡಿದಾಗ ಬಿಳಿ ಪೇಪರ್‌ ಬಂಡಲ್‌ಗ‌ಳಿದ್ದವು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಬಳಿಕ ತಾವು ಮೋಸ ಹೋಗಿರುವುದಾಗಿ ಎಚ್ಚೆತ್ತುಕೊಂಡ ಖಜಾಂಚಿ ಮೇರಿ ಅವರು ಸ್ಥಳೀಯ ಬೆಳಕವಾಡಿ ಠಾಣೆ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಂಚಕನ ಪತ್ತೆಗೆ ಬಲೆ ಬೀಸಿದ್ದಾರೆ.

ಜ್ಯೂಸ್‌ ಕುಡಿಸಿ ಪ್ರಜ್ಞೆ ತಪ್ಪಿಸಿ ಹಣ ಪಡೆದು ಪರಾರಿ!:

ಮಳವಳ್ಳಿಯಲ್ಲಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದ ಕ್ರೈಸ್ತ ಸಂಸ್ಥೆಯಾದ ಶ್ಯಾಲೋಮ್‌ ಎಜುಕೇಷನಲ್‌ ಮತ್ತು ಚಾರಿಟಬಲ್‌ ಟ್ರಸ್ಟ್‌ಗೆ ವಂಚಕ ಸೂರ್ಯ ಎಂಬಾತ ಪರಿಚಯವಾಗಿದ್ದ. ಈತನ ಟ್ರಸ್ಟ್‌ಗೆ ಸಣ್ಣಪಟ್ಟ ಸಹಾಯ ಮಾಡಿಕೊಟ್ಟು ನಂಬಿಕೆ ಉಳಿಸಿಕೊಂಡಿದ್ದ. ಈ ನಡುವೆ, ಶಿಕ್ಷಣ ಸಂಸ್ಥೆಯನ್ನು ದೊಡ್ಡಮಟ್ಟದಲ್ಲಿ ಬೆಳೆಸುವುದಾಗಿ ಟ್ರಸ್ಟ್‌ನವರು ಈತನ ಬಳಿ ಚರ್ಚಿಸಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ವಂಚಕ ಸೂರ್ಯ, “ನೀವು ನನಗೆ 1 ಕೋಟಿ ರೂ. ಕೊಟ್ಟರೆ ಅದಕ್ಕೆ ಪ್ರತಿಯಾಗಿ ನಾನು ದಾನಿಗಳಿಂದ 25 ಕೋಟಿ ರೂ.ಕೊಡುತ್ತೇನೆ’ ಎಂದು ನಂಬಿಸಿದ್ದ. ಅದರಂತೆ ಟ್ರಸ್ಟ್‌ನವರು 1.10 ಕೋಟಿ ರೂ. ಸಿದ್ಧಪಡಿಸಿಕೊಂಡು  ಜ.20ರಂದು ಸಣ್ಣ ಕಾರ್ಯಕ್ರಮ ಆಯೋಜಿಸಿ ಸೂರ್ಯನನ್ನು ಕರೆಸಿಕೊಂಡಿದ್ದರು. ಕಾರ್ಯಕ್ರಮಕ್ಕೆ ಬಂದಿದ್ದ ಸೂರ್ಯ, ತಾನು ಮೊದಲೇ ಯೋಚಿಸಿದಂತೆ ತಂದಿದ್ದ ಮತ್ತು ಬರುವ ಜ್ಯೂಸ್‌ ಅನ್ನು ಟ್ರಸ್ಟ್‌ನ ಅಧ್ಯಕ್ಷರು ಹಾಗೂ ಖಜಾಂಚಿಗೆ ಕುಡಿಸಿದ್ದಾನೆ. ಇವರು ಪ್ರಜ್ಞೆ ತಪ್ಪಿದಾಗ, 1.10 ಕೋಟಿ ರೂ. ಇದ್ದ ಬ್ಯಾಗನ್ನು ದೋಚಿಕೊಂಡು ಪರಾರಿಯಾಗಿದ್ದಾನೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರುNagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala ಗಲಭೆಗೆ ಕೇರಳ ಲಿಂಕ್‌: ಮಾಹಿತಿ ಸಂಗ್ರಹಕ್ಕೆ ಮುಂದಾದ ಪೊಲೀಸರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case ಬಂಧನದ ಭೀತಿ: ಊರು ಬಿಟ್ಟ ಯುವಕರು

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

Nagamangala Case: “ಟಾರ್ಗೆಟ್‌ ಮಾಡಿ ಅಂಗಡಿಗಳಿಗೆ ಬೆಂಕಿ’: ಛಲವಾದಿ ನಾರಾಯಣಸ್ವಾಮಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.