Rajinikanth: ರಜಿನಿಕಾಂತ್ಗೆ ತೃತೀಯ ಲಿಂಗಿಯ ಪಾತ್ರ ಮಾಡುವ ಇಚ್ಛೆ ಇತ್ತಂತೆ
Team Udayavani, Jan 25, 2024, 6:20 PM IST
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಸಿನಿಮಾ ಬದುಕನ್ನು ಪ್ರತ್ಯೇಕವಾಗಿ ಪರಿಚಯಿಸುವ ಅಗತ್ಯವಿಲ್ಲ. ರಜಿನಿಕಾಂತ್ ತನ್ನ 48 ವರ್ಷಗಳ ವೃತ್ತಿ ಬದುಕಿನಲ್ಲಿ ನೂರಾರು ರೀತಿಯ ಪಾತ್ರಗಳನ್ನು ಮಾಡಿ ಸೈ ಎನ್ನಿಸಿಕೊಂಡಿದ್ದಾರೆ.
ವಯಸ್ಸು 73 ದಾಟಿದರೂ ರಜಿನಿಕಾಂತ್ ಇಂದಿಗೂ 20 ಹರೆಯದ ಯುವಕನಂತೆ ಬಿಗ್ ಸ್ಕ್ರೀನ್ ನಲ್ಲಿ ಅಬ್ಬರಿಸಿ, ಅಭಿಮಾನಿಗಳಿಗೆ ಮನರಂಜನೆ ನೀಡುತ್ತಲೇ ಇದ್ದಾರೆ. ಒಬ್ಬ ಕಲಾವಿದನಿಗೆ ಯಾವ ಪಾತ್ರ ಮಾಡಿದರೂ, ತಾನು ಹೊಸ ಹೊಸ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕೆನ್ನುವ ಆಸೆ ಇರುತ್ತದೆ. ಅದರಂತೆ ರಜಿನಿಕಾಂತ್ ಅವರಿಗೂ ಒಂದು ಪಾತ್ರದಲ್ಲಿ ನಟಿಸುವ ಆಸೆಯಿತ್ತು. ಆದರೆ ಅದು ಇದುವರೆಗೆ ಈಡೇರಿಲ್ಲ.
ರಜಿನಿಕಾಂತ್ ಇದುವರೆಗೆ ವೈದ್ಯ, ಪೋಲೀಸ್ ಅಧಿಕಾರಿ, ಜೈಲರ್, ಕಾಲೇಜು ಪ್ರೊಫೆಸರ್ ಮುಂತಾದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಅವರು ಅಂದುಕೊಂಡಿರುವ ಒಂದು ಪಾತ್ರ ಇದುವರೆಗೆ ಅವರಿಂದ ಮಾಡಲು ಆಗಿಲ್ಲ.
“ನೀವು ನಟಿಸಲು ಇಷ್ಟಪಡುವ ಯಾವುದಾದರೂ ಪಾತ್ರ ಬಾಕಿ ಇದೆಯೇ?” ಎಂದು ಪತ್ರಕರ್ತರೊಬ್ಬರು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ರಜಿನಿಕಾಂತ್ ಅವರ ಹಳೆಯ ವಿಡಿಯೋ ಈಗ ವೈರಲ್ ಆಗಿದೆ.
ಇದಕೆ ರಜಿನಿಕಾಂತ್ “ತೃತೀಯ ಲಿಂಗಿಯ ಪಾತ್ರ” ಎಂದು ಉತ್ತರಿಸಿದ್ದಾರೆ. ಇದನ್ನು ಕೇಳಿದ ಎಲ್ಲರೂ ಒಮ್ಮೆ ಶಾಕ್ ಆಗಿದ್ದಾರೆ. ತೃತೀಯಲಿಂಗಿ ಪಾತ್ರದಲ್ಲಿ ನಟಿಸುವ ಇಚ್ಛೆಯಿದೆ. ಆದರೆ ಇದುವರೆಗೆ ಅಂಥ ಸ್ಕ್ರಿಪ್ಟ್ ಬಂದಿಲ್ಲ ಎಂದು ರಜಿನಿ ಹೇಳಿದ್ದಾರೆ.
ಇತ್ತೀಚೆಗೆ ಮಾಲಿವುಡ್ ಸೂಪರ್ ಸ್ಟಾರ್ ಮಮ್ಮುಟ್ಟಿ ಅವರು ʼಕಾತಲ್: ದಿ ಕೋರ್ʼ ಸಿನಿಮಾದಲ್ಲಿ ಸಲಿಂಗ ಕಾಮಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮಮ್ಮುಟ್ಟಿ ಈ ಪಾತ್ರಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್ ಪತ್ನಿ ರಾದ್ಧಾಂತ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಬಂಧನ
Kanguva Movie: ಸೂರ್ಯ ಪ್ಯಾನ್ ಇಂಡಿಯಾ ʼಕಂಗುವʼ ಹೊಸ ರಿಲೀಸ್ ಡೇಟ್ ಔಟ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ
Karki Movie: ಹಳ್ಳಿ ಹುಡುಗನ ಹೋರಾಟದ ಹಾದಿ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.