![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 25, 2024, 9:47 PM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಫೆ.9ರಿಂದ ಮೂರು ದಿನ ರಾಜ್ಯಾದ್ಯಂತ ಮೊದಲ ಹಂತದ ಗ್ರಾಮ ಚಲೋ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, 40 ಸಾವಿರ ಕಾರ್ಯಕರ್ತರನ್ನು ಇದಕ್ಕಾಗಿ ನಿಯೋಜಿಸಲಾಗುತ್ತಿದೆ ಎಂದು ಅಭಿಯಾನದ ಸಂಚಾಲಕರೂ ಆಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ತಿಳಿಸಿದರು.
ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, 2019ರ ಲೋಕಸಭೆ ಚುನಾವಣೆಯಲ್ಲಿ ಬೂತ್ಗಳಲ್ಲಿ ಗಳಿಸಿದ್ದ ಮತಗಳಿಗಿಂತ ಈ ಬಾರಿ ಶೇ.10ರಷ್ಟು ಮತವನ್ನು ಹೆಚ್ಚಿಸಿಕೊಳ್ಳುವ ಗುರಿ ಹೊಂದಿದ್ದು, ಅಭಿಯಾನದಲ್ಲಿ ತೊಡಗಿಕೊಳ್ಳುವ ಪ್ರತಿ ಕಾರ್ಯಕರ್ತರಿಗೂ ಸೂಕ್ತ ತರಬೇತಿ ನೀಡಲಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೂ ಕೇಂದ್ರದ ಜನಪರ ಕಾರ್ಯಕ್ರಮ ತಿಳಿಸುತ್ತೇವೆ. ರಾಜ್ಯ ಸರಕಾರದ ವೈಫಲ್ಯಗಳ ಬಗ್ಗೆಯೂ ಅರಿವು ಮೂಡಿಸುತ್ತೇವೆ. ಶುಕ್ರವಾರದಿಂದಲೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ತಯಾರಿ ಮಾಡಲಾಗುತ್ತದೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಇದೊಂದು ಬೃಹತ್ ಸಂಘಟನಾತ್ಮಕ ಕಾರ್ಯತಂತ್ರವಾಗಿದ್ದು, ತಳಮಟ್ಟದಲ್ಲಿ ಪ್ರತಿಯೊಬ್ಬರನ್ನೂ ಈ ಅಭಿಯಾನದ ಮೂಲಕ ತಲುಪಲಾಗುತ್ತದೆ ಎಂದು ವಿವರಿಸಿದರು.
ಬೂತ್ ಸಶಕ್ತೀಕರಣ, ಕಾರ್ಯಕರ್ತರಿಗೆ ಬಲ
ರಾಜ್ಯದ 28 ಸಾವಿರ ಕಂದಾಯ ಗ್ರಾಮಗಳು ಹಾಗೂ 19 ಸಾವಿರ ನಗರ ಬೂತ್ಗಳನ್ನು ಅಭಿಯಾನದ ಮೂಲಕ ತಲುಪುತ್ತೇವೆ. ನಿಯೋಜಿತ 40 ಸಾವಿರ ಕಾರ್ಯಕರ್ತರು ಆಯಾ ಗ್ರಾಮಗಳಿಗೆ ಎಪ್ರಿಲ್ವರೆಗೆ 6 ಬಾರಿ ಭೇಟಿ ನೀಡಿ ಲೋಕಸಭಾ ಚುನಾವಣೆಯ ಸಿದ್ಧತಾ ಸಭೆಗಳನ್ನು ಮಾಡಬೇಕಾಗುತ್ತದೆ. ತಾಲೂಕು ಮಟ್ಟದಲ್ಲಿ 350 ಕಾರ್ಯಾಗಾರ ನಡೆಯಲಿದ್ದು, ನಿಯುಕ್ತಿಗೊಂಡಿರುವ ಕಾರ್ಯಕರ್ತರು ತಮ್ಮ ಗ್ರಾಮಗಳನ್ನು ಬಿಟ್ಟು ಇತರ ಗ್ರಾಮಗಳಿಗೆ ತೆರಳಿ ಕೇಂದ್ರ ಸರಕಾರದ ಪ್ರಮುಖ ಯೋಜನೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಆಶಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಮನೆ-ಮನೆಗೆ ಮೋದಿ ಸರಕಾರದ ಸಾಧನೆಯ ಪ್ರಚಾರ, ಮೋದಿ ಗ್ಯಾರಂಟಿಯ ಫಲಾನುಭವಿಗಳನ್ನು ತಲುಪುವ ಅಭಿಯಾನ, ಬೂತ್ ಸಶಕ್ತೀಕರಣದ ಜತೆಗೆ ಕಾರ್ಯಕರ್ತರಿಗೆ ಬಲ ತುಂಬುವ ಕಾರ್ಯ ಆಗಲಿದೆ. ಅಲ್ಲದೆ, ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧವೂ ಅರಿವು ಮೂಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.