Shettar ಬಿಜೆಪಿಗೆ ಹೋಗಿದ್ದರಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ; ನಾಗೇಂದ್ರ


Team Udayavani, Jan 26, 2024, 8:08 PM IST

Shettar ಬಿಜೆಪಿಗೆ ಹೋಗಿದ್ದರಿಂದ ಕಾಂಗ್ರೆಸ್‌ಗೆ ನಷ್ಟವಿಲ್ಲ; ನಾಗೇಂದ್ರ

ಬಳ್ಳಾರಿ: ಮಾಜಿ ಸಿಎಂ ಜಗದೀಶ್‌ ಶೆಟ್ಟರ್‌ ಅವರು ಪುನಃ ಬಿಜೆಪಿ ಸೇರುವ ನಿರ್ಧಾರವನ್ನು ಏಕೆ ಕೈಗೊಂಡರೋ ಗೊತ್ತಿಲ್ಲ. ಅವರು ಬಿಜೆಪಿಗೆ ಹೋಗಿರುವುದು ವೈಯಕ್ತಿಕವಾಗಿ ಬೇಸರವಾಗಿದೆ ಎಂದು ಸಚಿವ ಬಿ.ನಾಗೇಂದ್ರ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೆಟ್ಟರ್‌ ಅವರ ನೇತೃತ್ವದಲ್ಲಿ ಮಾಜಿ ಸಚಿವ ಶಂಕರ ಮುನೇನಕೊಪ್ಪ ಸೇರಿ ಹಲವರು ಕಾಂಗ್ರೆಸ್‌ಗೆ ಬರುವವರಿದ್ದರು. ಈ ಕುರಿತು ಮುನೇನಕೊಪ್ಪ ಅವರೇ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿ, ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಕಳೆದ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಬಂದಿದ್ದ ಶೆಟ್ಟರ್‌ ಅವರನ್ನು ಪಕ್ಷ ಉತ್ತಮವಾಗಿಯೇ ನಡೆಸಿಕೊಂಡಿದೆ. ಕಳೆದ ಚುನಾವಣೆಯಲ್ಲಿ ಟಿಕೆಟ್‌ ನೀಡಿ ಕಣಕ್ಕಿಳಿಸಿತ್ತು. ಸೋತರೂ, ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿತು. ಆದರೂ, ಅವರು ಬಿಜೆಪಿಗೆ ಹೋಗುವ ನಿರ್ಧಾರವನ್ನು ಏಕೆ ಕೈಗೊಂಡಿದ್ದಾರೋ, ಏನೇನು ಒತ್ತಡಗಳಿವೆಯೋ ಗೊತ್ತಿಲ್ಲ ಎಂದ ನಾಗೇಂದ್ರ, ಕಾಂಗ್ರೆಸ್‌ ಪಕ್ಷ ಸಮುದ್ರ ಇದ್ದಂತೆ. ಇಲ್ಲಿ ಹಂತ-ಹಂತವಾಗಿ ಅ ಧಿಕಾರ ಸಿಗುತ್ತಿತ್ತು. ತಾಳ್ಮೆ ವಹಿಸಬೇಕಿತ್ತು ಎಂದರು.

ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಪ್ರಭಾವಿಯಾಗಿರುವ ಶೆಟ್ಟರ್‌ ಬಿಜೆಪಿ ಸೇರ್ಪಡೆಯಿಂದ ಬಳ್ಳಾರಿ ಭಾಗದಲ್ಲಿ ಯಾವುದೇ ಪರಿಣಾಮ ಬೀರಲ್ಲ. ನಮ್ಮಲ್ಲೂ ಲಿಂಗಾಯತ ಸಮುದಾಯದ ಸಚಿವರಾದ ಈಶ್ವರಖಂಡ್ರೆ, ಎಸ್‌.ಎಸ್‌.ಮಲ್ಲಿಕಾರ್ಜುನ, ಎಂ.ಬಿ.ಪಾಟೀಲ್‌, ಶ್ಯಾಮನೂರು ಶಿವಶಂಕರಪ್ಪ ಸೇರಿ ಹಲವಾರು ಪ್ರಭಾವಿ ಮುಖಂಡರು ಇದ್ದಾರೆ ಎಂದ ಅವರು, ಲಕ್ಷ್ಮಣ ಸವದಿ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಬಿಡಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದರು.

ಸಚಿವ ಕೆ.ಎನ್‌.ರಾಜಣ್ಣ ಅವರು ಹೈಕಮಾಂಡ್‌ಗೆ ವಿರೋ ಧಿಸಿಲ್ಲ. ಅವರು ಹಿರಿಯರಿದ್ದಾರೆ. ರಾಜ್ಯಕ್ಕೆ ಸಂಬಂಧಿಸಿದಂತೆ ತಮ್ಮದೇ ಆದ ವಿಚಾರಧಾರೆಗಳಿವೆ ಎಂದಿದ್ದಾರೆ. ಹಾಸನ ಜಿಲ್ಲೆಯ ಉಸ್ತುವಾರಿ ಅವರಿಗೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದಾಗಿ ಕಂಕಣ ತೊಟ್ಟಿದ್ದಾರೆ. ಅಲ್ಲದೇ, ನಿಗಮ-ಮಂಡಳಿಗಳಿಗೆ ಶಾಸಕರನ್ನು ನೇಮಿಸುತ್ತಿರುವುದು ಸಚಿವರಿಗೆ ಯಾವುದೇ ಅಸಮಾಧಾನವಿಲ್ಲ. ಪರಿಶಿಷ್ಟ ವರ್ಗಗಳ ನಿಗಮ-ಮಂಡಳಿಗೆ ಶಾಸಕ ಬಸವರಾಜ ದದ್ದಲ್‌ರನ್ನು ನೇಮಕ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ತಿಳಿಸಿದರು.

ನಗರ ಶಾಸಕ ನಾರಾ ಭರತ್‌ರೆಡ್ಡಿ, ಡಿಸಿ ಪ್ರಶಾಂತ್‌ ಕುಮಾರ್‌ ಮಿಶ್ರಾ, ಮೇಯರ್‌ ಬಿ.ಶ್ವೇತಾ, ಉಪಮೇಯರ್‌ ಬಿ.ಜಾನಕಮ್ಮ ಸೇರಿ ಹಲವರು ಇದ್ದರು.

ಟಾಪ್ ನ್ಯೂಸ್

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BellaryBellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ

Bellary; poor food supply; Protest in SC, ST hostel

Bellary; ಕಳಪೆ ಆಹಾರ ಪೂರೈಕೆ; ಎಸ್‌ಸಿ, ಎಸ್ಟಿ ವಸತಿ ನಿಲಯದಲ್ಲಿ ಪ್ರತಿಭಟನೆ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ: ಡಿಡಿ ಚಾನೆಲ್‌ ಮಾತ್ರ

Ballari: ಕೊನೆಗೂ ನಟ ದರ್ಶನ್‌ ಸೆಲ್‌ಗೆ ಟಿವಿ; ಡಿಡಿ ಚಾನೆಲ್‌ ಮಾತ್ರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Manipal-Police

Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ

ABVP

ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ

mogasale

Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ

subharamaya-Swamiji

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ

Puttige-Shree

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.