![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jan 28, 2024, 12:08 AM IST
ಬೆಂಗಳೂರು: ಕೇಂದ್ರ ಸರಕಾರವು ರಾಜ್ಯದ ಜಿಎಸ್ಟಿ ಮೊತ್ತವನ್ನು ಬಾಕಿ ಇರಿಸಿಕೊಂಡಿದೆ ಎಂದು ಪದೇಪದೆ ಆರೋಪಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಭೂಪೇಂದ್ರ ಯಾದವ್ ತಿರುಗೇಟು ನೀಡಿದ್ದು, ರಾಜ್ಯದ ಒಂದು ಪೈಸೆಯನ್ನೂ ಕೇಂದ್ರ ಸರಕಾರ ಇದುವರೆಗೆ ಬಾಕಿ ಉಳಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜರಗಿದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಸುಳ್ಳು (ಜ್ಯೂಟ್ )ಗ್ಯಾರಂಟಿ ನೀಡಿ ಅಧಿಕಾರಕ್ಕೆ ಬಂದಿದೆ. ಆದರೆ ಈ ಸುಳ್ಳು ಬಹು ದಿನಗಳ ಕಾಲ ನಡೆಯದು ಎಂಬುದಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸಗಡ್ದ ಫಲಿತಾಂಶವೇ ಸಾಕ್ಷಿ. ಮೋದಿ ಗ್ಯಾರಂಟಿಯೊಂದೇ ನಿಜವಾದ (ಸಚ್ಚಿ) ಗ್ಯಾರಂಟಿ ಎಂದು ವ್ಯಾಖ್ಯಾನಿಸಿದರು.
ಸುಳ್ಳು ಗ್ಯಾರಂಟಿಯ ಜತೆಗೆ ಕೇಂದ್ರ ಸರಕಾರದ ವಿರುದ್ಧ ಸುಳ್ಳು ಆಪಾದನೆಯನ್ನೂ ಕರ್ನಾಟಕ ಸರಕಾರ ಮಾಡುತ್ತಿದೆ. 2009ರಿಂದ 2014ರ ವರೆಗೆ ಅಂದಿನ ಕೇಂದ್ರ ಸರಕಾರ 11 ಸಾವಿರ ಕೋಟಿ ರೂ. ನೀಡಿದ್ದರೆ ಮೋದಿ ಸರಕಾರದ ಅವಧಿಯಲ್ಲಿ 30 ಸಾವಿರ ಕೋಟಿ ರೂ. ಅನುದಾನ ನೀಡಿದೆ. ಆದರೆ ರಾಜ್ಯ ಈ ವಿಚಾರವನ್ನು ಮುಚ್ಚಿಟ್ಟಿದೆ. ಹಣ ಇಲ್ಲ ಎಂಬ ಕಾರಣ ನೀಡಿ ಸಾಹಿತ್ಯ ಸಮ್ಮೇಳನ ಆಯೋಜನೆಯನ್ನೇ ಕರ್ನಾಟಕ ಸರಕಾರ ನಿಲ್ಲಿಸಿದೆ ಎಂದು ಟೀಕಿಸಿದರು.
ಬಡವರ ಕಲ್ಯಾಣ ಮತ್ತು ಆದರ್ಶ ರಾಮರಾಜ್ಯದ ನಿರ್ಮಾಣಕ್ಕಾಗಿ ನರೇಂದ್ರ ಮೋದಿಯವರು 2014ರಿಂದ ಕಾರ್ಯ ನಿರ್ವಹಿಸುತ್ತಿದ್ಧಾರೆ. ಜನ್ಧನ್ ಖಾತೆಗಳನ್ನು ತೆರೆಯಲು ಸೂಚಿಸಿದ ಪ್ರಧಾನಿಯವರು ಸೌಲಭ್ಯಗಳನ್ನು ನೇರವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಿದರು. ಜಿಎಸ್ಟಿ ಸಮರ್ಪಕ ಅನುಷ್ಠಾನಕ್ಕೆ ಕೇಂದ್ರದ ಬಿಜೆಪಿ ಸರಕಾರ ಮುಂದಾದರೆ, ಕಾಂಗ್ರೆಸ್ಸಿಗರು ಸಂಸತ್ ಅಧಿವೇಶನವನ್ನೇ ಬಹಿಷ್ಕರಿಸಿದರು ಎಂದು ಟೀಕಿಸಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.