Holiday; ಸರಣಿ ರಜೆ: ಕರಾವಳಿಯ ದೇಗುಲಗಳಲ್ಲಿ ಭಕ್ತ ಸಂದಣಿ
Team Udayavani, Jan 28, 2024, 12:09 AM IST
ಸುಬ್ರಹ್ಮಣ್ಯ/ಧರ್ಮಸ್ಥಳ/ ಕೊಲ್ಲೂರು: ಸರಣಿ ರಜೆಯ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀ ಕ್ಷೇತ್ರ ಧರ್ಮಸ್ಥಳ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಕರಾವಳಿಯ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ದಂಡು ಹರಿದು ಬರುತ್ತಿದೆ.
ಶುಕ್ರವಾರ, ಶನಿವಾರ, ರವಿವಾರ ಮೂರು ದಿನಗಳ ಸರಣಿ ರಜೆಗಳ ಹಿನ್ನೆಲೆಯಲ್ಲಿ ಗುರುವಾರ ರಾತ್ರಿಯಿಂದಲೇ ಅಧಿಕ ಸಂಖ್ಯೆಯ ಭಕ್ತರ ಆಗಮನ ಆರಂಭಗೊಂಡಿತ್ತು. ಶುಕ್ರವಾರವೂ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಶನಿವಾರ ಮತ್ತೂ ಅಧಿಕ ಭಕ್ತರ ಆಗಮನವಾಗಿದೆ.
ಸುಬ್ರಹ್ಮಣ್ಯದ ಕುಮಾರಪರ್ವತ ಚಾರಣಕ್ಕೆ ಶನಿವಾರವೂ ಚಾರಣಿಗರ ದಂಡು ಹರಿದು ಬಂದಿದೆ.
ಕೊಲ್ಲೂರು ದೇಗುಲ
ಕೊಲ್ಲೂರಿನಲ್ಲಿ ಶನಿವಾರ ಶ್ರೀದೇವಿಯ ದರ್ಶನಕ್ಕೆ ನೂಕುನುಗ್ಗಲು ಕಂಡುಬಂತು. ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಆಗಮಿಸಿದ್ದ 30 ಸಾವಿರಕ್ಕೂ ಮಿಕ್ಕಿ ಭಕ್ತರು ವಾಸ್ತವ್ಯಕ್ಕಾಗಿ ಪರದಾಡಬೇಕಾಯಿತು. ಭಕ್ತರ ಅನಾಯಾಸ ದರ್ಶನಕ್ಕೆ ಸಿಬಂದಿ ಹರಸಾಹಪಡಬೇಕಾಯಿತು. ಎಲ್ಲ ವಸತಿಗೃಹಗಳು ಭರ್ತಿಯಾಗಿರುವುದರಿಂದ ಅನೇಕ ಭಕ್ತರು ವಾಸ್ತವ್ಯಕ್ಕಾಗಿ ಕುಂದಾಪುರವನ್ನು ಅವಲಂಬಿಸಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ
Eid Milad: ರ್ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ
Sullia: ಬೈಕ್ ಗಳ ನಡುವೆ ಅಪಘಾತ
ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್ ವಿಧಿವಶ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.