![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 28, 2024, 1:00 AM IST
ಕಾಪು: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಕಾರ್ಮಿಕನಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಕಾಪುವಿನಲ್ಲಿ ನಡೆದಿದೆ.
ಕೆಂಪು ಕಲ್ಲು ಲೋಡಿಂಗ್ ಕೆಲಸಕ್ಕೆ ಹೋಗಿದ್ದ ಮಲ್ಲಿಕಾರ್ಜುನ (33) ಕೆಲಸದಿಂದ ಮರಳಿ ಮನೆಗೆ ಹೋಗುತ್ತಿದ್ದಾಗ ಮಂಗಳೂರು ಕಡೆಯಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಎಡಗಾಲು ತೀವ್ರ ಜಖಂಗೊಂಡ ಅವರನ್ನು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.