NBK109: ಮತ್ತೊಂದು ಸೌತ್‌ ಸಿನಿಮಾದಲ್ಲಿ ಬಾಬಿ ಡಿಯೋಲ್; ಬಾಲಯ್ಯ ಜೊತೆ ಆ್ಯಕ್ಷನ್


Team Udayavani, Jan 28, 2024, 2:40 PM IST

NBK109: ಮತ್ತೊಂದು ಸೌತ್‌ ಸಿನಿಮಾದಲ್ಲಿ ಬಾಬಿ ಡಿಯೋಲ್; ಬಾಲಯ್ಯ ಜೊತೆ ಆ್ಯಕ್ಷನ್

ಹೈದರಾಬಾದ್: ʼಅನಿಮಲ್‌ʼ ಸಿನಿಮಾದ ಬಾಲಿವುಡ್‌ ನಟ ಬಾಬಿ ಡಿಯೋಲ್‌ ಅವರ ಜನಪ್ರಿಯತೆ ಹೆಚ್ಚಾಗಿದೆ. ಅವರನ್ನು ಹುಡುಕಿಕೊಂಡು ನಾನಾ ಸಿನಿಮಾ ತಂಡದವರು ಬರುತ್ತಿದ್ದಾರೆ. ಬಾಲಿವುಡ್‌ ಮಾತ್ರವಲ್ಲದೆ, ದಕ್ಷಿಣ ಸಿನಿಮಾರಂಗಕ್ಕೂ ಬಾಬಿ ಡಿಯೋಲ್‌ ಬೇಡಿಕೆಯ ನಟನಾಗುತ್ತಿದ್ದಾರೆ.

ರಣ್ಬೀರ್‌ ಕಪೂರ್‌ ಅವರ ʼಅನಿಮಲ್‌ʼ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ದೊಡ್ಡ ಹಿಟ್‌ ಆಗಿದೆ. ಆ ಮೂಲಕ ಅವರ ವೃತ್ತಿ ಬದುಕಿಗೆ ಬೂಸ್ಟ್‌ ನೀಡಿದೆ. ಆ ಸಿನಿಮಾದಲ್ಲಿ ನೆಗೆಟಿವ್‌ ರೋಲ್‌ ನಲ್ಲಿ ಕಾಣಿಸಿಕೊಂಡ ನಟ ಬಾಬಿ ಡಿಯೋಲ್‌ ಅವರಿಗೂ ದೊಡ್ಡ ಪ್ಲಸ್‌ ಪಾಯಿಂಟ್‌ ಆಗಿದೆ.

ನಿನ್ನೆಯಷ್ಟೇ(ಜ.27 ರಂದು) ಬಾಬಿ ಡಿಯೋಲ್‌ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ.ಈ ಸಂಭ್ರಮದಲ್ಲಿ ಸೂರ್ಯ ಅವರ ಪ್ಯಾನ್‌ ಇಂಡಿಯಾ ʼಕಂಗುವʼ ಸಿನಿಮಾದಲ್ಲಿನ ಅವರ ʼ ಉಧಿರನ್ʼ ಪಾತ್ರದ ಫಸ್ಟ್‌ ಲುಕ್‌ ಪೋಸ್ಟರ್‌ ನ್ನು ಬಿಡುಗಡೆ ಮಾಡಲಾಗಿದೆ.

ಇದರೊಂದಿಗೆ ಮತ್ತೊಂದು ಸೌತ್‌ ಸಿನಿಮಾದಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಟಾಲಿವುಡ್‌ ನಟ ಬಾಲಕೃಷ್ಣ ಅವರ ʼಎನ್‌ ಬಿಕೆ 109ʼ ಸಿನಿಮಾದಲ್ಲಿ ಬಾಬಿ ಕಾಣಿಸಿಕೊಳ್ಳಲಿದ್ದಾರೆ. ಬಾಬಿ ಡಿಯೋಲ್ ಹುಟ್ಟುಹಬ್ಬದಂದು‌ ಈ ವಿಚಾರವನ್ನು ಚಿತ್ರತಂಡ ರಿವೀಲ್‌ ಮಾಡಿದೆ.

ʼವಾಲ್ಟೇರ್ ವೀರಯ್ಯʼ ಸಿನಿಮಾವನ್ನು ನೀಡಿ ಗಮನ ಸೆಳೆದ ನಿರ್ದೇಶಕ ಕೆ ಎಸ್ ಬಾಬಿ ಬಾಲಕೃಷ್ಣ ಅವರೊಂದಿಗೆ ಈ ಸಿನಿಮಾವನ್ನು ಮಾಡುತ್ತಿದ್ದಾರೆ. ಸಿತಾರಾ ಎಂಟರ್ಟೈನ್ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ʼಗುಂಟೂರು ಖಾರಂʼ ಸಿನಿಮಾವನ್ನು ನಿರ್ಮಾಣ ಮಾಡಿರುವ ನಿರ್ಮಾಪಕ ನಾಗ ವಂಶಿ ಈ ಸಿನಿಮಾಕ್ಕೆ ಬಂಡವಾಳ ಹಾಕಲಿದ್ದಾರೆ.

ʼNBK109ʼ ಸಿನಿಮಾದ ಇತರೆ ಪಾತ್ರವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ಹೊರಬೀಳಬೇಕಿದೆ. ಮೂಲಗಳ ಪ್ರಕಾರ ಈ ಸಿನಿಮಾದಲ್ಲಿ ಗೌತಮ್ ವಾಸುದೇವ್ ಮೆನನ್ ನಟಿಸಲಿದ್ದಾರೆ ಎನ್ನಲಾಗಿದೆ.

ʼಕಂಗುವʼ ಸಿನಿಮಾದ ಬಳಿಕ ಬಾಬಿ ಪವನ್‌ ಕಲ್ಯಾಣ್‌ ಅವರ ʼಹರಿ ಹರ ವೀರ ಮಲ್ಲುʼ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

 

ಟಾಪ್ ನ್ಯೂಸ್

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1

ಕೆಲಸವಿಲ್ಲದೆ ಮಾನಸಿಕ ಒತ್ತಡ: 33ರ ಹರೆಯದಲ್ಲೇ ನೇಣಿಗೆ ಶರಣಾದ ಖ್ಯಾತ ಕಾರ್ಯಾಕಾರಿ ನಿರ್ಮಾಪಕಿ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

SS Rajamouli: ಡಾಕ್ಯುಮೆಂಟರಿಯಾಗಿ ಓಟಿಟಿಗೆ ಬರಲಿದೆ ರಾಜಮೌಳಿ ಸಿನಿಮಾ ಸಾಹಸಗಾಥೆ

Rashmika Mandanna is in kubera movie

Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

Leopard Attack; ದಾಳಿ ಮಾಡಿದ್ದ ಚಿರತೆಯನ್ನೇ ಕೊಂದ ಗ್ರಾಮಸ್ಥರು

1-crick

Zimbabwe ವಿರುದ್ಧ ಹಳಿಗೆ ಮರಳಿದ ಯುವ ಭಾರತ: ಅಭಿಷೇಕ್ ಅಮೋಘ ಶತಕ

6

Nag Ashwin: ‘ಕಲ್ಕಿ’ ಡೈರೆಕ್ಟರ್ ನಾಗ್ ಅಶ್ವಿನ್‌ಗೆ ಕೃಷ್ಣನೂರು ಉಡುಪಿಯ ನಂಟು

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.