Davanagere;ಕಾಂಗ್ರೆಸ್‌ಗೆ ಹೋಗಿ ಬಂದಿರುವ ಬಗ್ಗೆ ಪಾಪಪ್ರಜ್ಞೆ-ಪಶ್ಚಾತ್ತಾಪ ಇಲ್ಲ: ಶೆಟ್ಟರ್‌

ಯಾವುದೇ ಷರತ್ತು ವಿಧಿಸಿಲ್ಲ, ಯಾವ ಕ್ಷೇತ್ರದ ಟಿಕೆಟ್‌ ಕೂಡ ಕೇಳಿಲ್ಲ

Team Udayavani, Jan 28, 2024, 8:17 PM IST

Davanagere; ಕಾಂಗ್ರೆಸ್‌ಗೆ ಹೋಗಿ ಬಂದಿರುವ ಬಗ್ಗೆ ಪಾಪಪ್ರಜ್ಞೆ-ಪಶ್ಚಾತ್ತಾಪ ಇಲ್ಲ: ಶೆಟ್ಟರ್‌

ದಾವಣಗೆರೆ:ಕಾಂಗ್ರೆಸ್‌ಗೆ ಹೋಗಿ ಬಂದಿರುವ ಬಗ್ಗೆ ಯಾವುದೇ ಪಾಪ ಪ್ರಜ್ಞೆಯಾಗಲಿ, ಪಶ್ಚಾತ್ತಾಪವಾಗಲಿ ಇಲ್ಲ. ಬಿಜೆಪಿ ನನ್ನ ಮನೆ. ನಾವೇ ಕಟ್ಟಿದ ಮನೆಗೆ ವಾಪಸ್‌ ಬಂದಿರುವುದಕ್ಕೆ ತುಂಬಾ ಸಂತೋಷವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಹೇಳಿದರು.

ಬೆಂಗಳೂರಿನಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯೆ ನಗರದ ಬಿಜೆಪಿ ಜಿಲ್ಲಾ ಕಚೇರಿಗೆ ಭೇಟಿ ನೀಡಿದ್ದ ವೇಳೆ ಪಕ್ಷದ ಜಿಲ್ಲಾ ಮುಖಂಡರು ಹಾಗೂ ಕಾರ್ಯಕರ್ತರಿಂದ ಭವ್ಯ ಸ್ವಾಗತ ಸ್ವೀಕರಿಸಿ ಮಾತನಾಡಿದ ಅವರು, ಕೆಲವೊಂದು ಕಹಿ ಘಟನೆಗಳ ಕಾರಣಕ್ಕೆ ನನ್ನ ಮನೆ ತೊರೆದು ಹೋಗಿದ್ದೆ. ಈಗ ಮರಳಿ ಮನೆಗೆ ಬಂದಿದ್ದು ಖುಷಿಯಾಗಿದೆ. ಪಕ್ಷಕ್ಕೆ ಮರಳಲು ಯಾವುದೇ ಷರತ್ತು ವಿಧಿಸಿಲ್ಲ. ಬೇಷರತ್ತಾಗಿ ಪಕ್ಷಕ್ಕೆ ವಾಪಸಾಗಿದ್ದೇನೆ. ಮುಂದೆ ಪಕ್ಷದ ವರಿಷ್ಠರು ಯಾವ ಜವಾಬ್ದಾರಿ ನಿಭಾಯಿಸಲು ಹೇಳುತ್ತಾರೋ ಅದನ್ನು ನಿಭಾಯಿಸಲು ನಾನು ಸಿದ್ಧನಿದ್ದೇನೆ. ಲೋಕಸಭೆ ಚುನಾವಣೆಯಲ್ಲಿ ಯಾವುದೇ ಕ್ಷೇತ್ರದಿಂದ ಟಿಕೆಟ್‌ ಬೇಕು ಎಂದು ನಾನು ಕೇಳಿಲ್ಲ ಎಂದರು.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪಕ್ಷದ ರಾಜ್ಯ ಹಾಗೂ ರಾಷ್ಟ್ರ ನಾಯಕರ ಆಹ್ವಾನದ ಮೇರೆಗೆ ಪಕ್ಷಕ್ಕೆ ಮರಳಿದ್ದೇನೆ. ಕಳೆದ ಹಲವಾರು ತಿಂಗಳಿಂದ ರಾಜ್ಯದ ಯಾವುದೇ ಭಾಗಕ್ಕೆ ಪ್ರವಾಸ ಮಾಡಿದರೂ ನೀವು ಪಕ್ಷಕ್ಕೆ ವಾಪಸ್‌ ಬನ್ನಿ ಎಂದು ಬಿಜೆಪಿ ಕಾರ್ಯಕರ್ತರು, ಮುಖಂಡರು ಒತ್ತಾಯಿಸುತ್ತಿದ್ದರು. ಬಿಜೆಪಿ ಕಾರ್ಯಕರ್ತರ ಪ್ರೀತಿಗೆ ಸೋತು, ಪಕ್ಷದ ಹಿರಿಯರ ಆಹ್ವಾನ ಗೌರವಿಸಿ ನನ್ನ ಮನೆಗೆ ಮರಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಲೋಕಸಭೆ ಚುನಾವಣೆ ಇದ್ದು, ನಾಯಕರ ಜತೆಗೂಡಿ ಪಕ್ಷವನ್ನು ಸಂಘಟಿಸಲಾಗುವುದು. ಆ ಮೂಲಕ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿ ದೇಶದ ಪ್ರಧಾನಿಯಾಗಿಸುವುದು ನಮ್ಮ ಗುರಿ. ಆ ನಿಟ್ಟಿನಲ್ಲಿ ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ರಾಷ್ಟ್ರಮಟ್ಟದಲ್ಲಿ ಪಕ್ಷಕ್ಕೆ ಬಲ ತುಂಬುವ ಕೆಲಸ ಮಾಡುತ್ತೇನೆ.

ನಾನು ಬಿಜೆಪಿಗೆ ಮರಳಿ ಲಿಂಗಾಯತ ಸಮುದಾಯಕ್ಕೆ ಅನ್ಯಾಯ ಮಾಡಿದ್ದೇನೆ ಎಂಬ ಮೋಹನ ಲಿಂಬಿಕಾಯಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯವೇ ಹೊರತು ಸಮುದಾಯದ ಅಭಿಪ್ರಾಯವಲ್ಲ ಎಂದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.