Udupi ಡಾಕ್ಟರ್ ಆ್ಯಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆ. ಸೊಸೈಟಿ ಆರಂಭ
Team Udayavani, Jan 28, 2024, 10:54 PM IST
ಉಡುಪಿ: ವೈದ್ಯಕೀಯ ಉಪಕರಣಗಳು ದುಬಾರಿಯಾಗಿರುವ ಇಂದಿನ ಕಾಲಘಟ್ಟದಲ್ಲಿ ಹಣಕಾಸು ಮಾಹಿತಿಯ ಅಗತ್ಯವೂ ವೈದ್ಯರಿಗೆ ಬೇಕಿರುತ್ತದೆ. ಗ್ರಾಮೀಣ ಭಾಗಗಳಲ್ಲಿ ರುವ ಶೇ. 70ರಷ್ಟು ಮಂದಿಗೆ ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಸೇವೆ ಸಿಗುವಂತಾಗಬೇಕು ಎಂದು ಮಾಹೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಹೇಳಿದರು.
ಉಡುಪಿ ಸರ್ವಿಸ್ ಬಸ್ ನಿಲ್ದಾಣ ಸಮೀಪದ ಗ್ರಾಸ್ಲ್ಯಾಂಡ್ ಕಮರ್ಶಿಯಲ್ ಕಾಂಪ್ಲೆಕ್ಸ್ ನಲ್ಲಿ ರವಿವಾರ ಡಾಕ್ಟರ್ ಆ್ಯಂಡ್ ಅಲೈಡ್ ಪ್ರೊಫೆಶನಲ್ಸ್ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ, ದೇಶದ ಆರ್ಥಿಕತೆಗೆ ಬ್ಯಾಂಕ್ಗಳಂತೆ ಸಹಕಾರ ಕ್ಷೇತ್ರವೂ ಬಹುದೊಡ್ಡ ಕೊಡುಗೆ ನೀಡಿದೆ.
ವೈದ್ಯರಂತೆ ಇತರ ಕ್ಷೇತ್ರಗಳಲ್ಲಿರುವ ವರೂ ಇದರ ಪ್ರಯೋಜನ ಪಡೆದು ಕೊಳ್ಳಬೇಕು ಎಂದರು.ವೈದ್ಯರಲ್ಲಿ ಬಹಳಷ್ಟು ಹಣವಿದೆ ಎಂಬ ಭಾವನೆ ತಪ್ಪು. ದೇಶದಲ್ಲಿ ಶೇ. 70ರಷ್ಟು ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡುತ್ತಿದ್ದು, ಹಲವರ ಸ್ಥಿತಿ ಹೀನಾಯವಾಗಿದೆ. ಆದರೂ ಸೇವೆಯ ಮೂಲಕ ಘನತೆ ಮೆರೆಯುತ್ತಿ
ದ್ದಾರೆ ಎಂದು ಆದರ್ಶ ಆಸ್ಪತ್ರೆಯ ಮ್ಯಾನೇಜಿಂಗ್ ಡೈರೆಕ್ಟರ್ ಡಾ| ಜಿ.ಎಸ್. ಚಂದ್ರಶೇಖರ್ ಹೇಳಿದರು.
ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ವೈದ್ಯರು ಆರ್ಥಿಕ ಸಂಸ್ಥೆ ತೆರೆಯುತ್ತಿರುವುದು ಇದೇ ಮೊದಲು. ವೈದ್ಯರು ಜನರ ಆರೋಗ್ಯ ಕಾಪಾಡುವಂತೆ ಆರ್ಥಿಕ ಕ್ಷೇತ್ರದಲ್ಲಿಯೂ ಎಚ್ಚರಿಕೆ ಹೆಜ್ಜೆ ಇರಿಸುವಂತಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯ ಪ್ರವರ್ತಕ ಡಾ| ಬುಡ್ನಾರು ವಿನಯಚಂದ್ರ ಶೆಟ್ಟಿ ಮಾತನಾಡಿ, ವೈದ್ಯರು ಸರಕಾರದ ವಿವಿಧ ಯೋಜನೆಗಳನ್ನು ತಿಳಿದುಕೊಳ್ಳಬೇಕು. ಈ ಸೊಸೈಟಿಯು ಠೇವಣಿ ಹಾಗೂ ಸಾಲಕ್ಕೆ ಸೀಮಿತವಲ್ಲ. ಇದನ್ನು ಮತ್ತಷ್ಟು ವಿಸ್ತರಿಸಲಾಗುವುದು ಎಂದರು.
ಡಾ| ಪ್ರಸನ್ನ ಕಾಕುಂಜೆ ಪ್ರಸ್ತಾವನೆ ಗೈದರು. ಡಾ| ಗುರುರಾಜ್ ಆಚಾರ್ಯ ಸ್ವಾಗತಿಸಿ, ಪ್ರೊ| ಯತಿಕುಮಾರ್ ಸ್ವಾಮಿಗೌಡ ವಂದಿಸಿದರು. ಮಂಜುಳಾ ಜಿ. ತೆಕ್ಕಟ್ಟೆ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Langoti Man Movie Review: ಸಂಪ್ರದಾಯದ ಕೊಂಡಿಯಲ್ಲಿ ಲಂಗೋಟಿ!
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.