Kundapura; ಆತಿಥ್ಯಕ್ಕೆ ಉಡುಪಿ ಹೆಸರು: ಸಚಿವ ಸತೀಶ್‌ ಜಾರಕಿಹೊಳಿ

ಕುಂದಾಪುರ ಶಾಸ್ತ್ರಿ ಸರ್ಕಲ್‌ ಸಮೀಪ "ಯುವ ಮನೀಶ್‌' ಹೊಟೇಲ್‌ ಆರಂಭ

Team Udayavani, Jan 28, 2024, 10:58 PM IST

Kundapura; ಆತಿಥ್ಯಕ್ಕೆ ಉಡುಪಿ ಹೆಸರು: ಸಚಿವ ಸತೀಶ್‌ ಜಾರಕಿಹೊಳಿ

ಕುಂದಾಪುರ: ಪ್ರವಾ ಸೋದ್ಯಮಕ್ಕೆ ವಿಪುಲ ಅವಕಾಶಗಳನ್ನು ಹೊಂದಿರುವ ಉಡುಪಿ, ಕುಂದಾಪುರವು ವಿಶ್ವದೆಲ್ಲೆಡೆ ಹೊಟೇಲ್‌ ಆತಿಥ್ಯಕ್ಕೆ ಹೆಸರುವಾಸಿಯಾಗಿದೆ. ಇಲ್ಲಿರುವ ಪ್ರವಾಸಿ ತಾಣಗಳ ಅಭಿವೃದ್ಧಿಗೆ, ಅದಕ್ಕೆ ಪೂರಕವಾಗಿರುವ ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸರಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು.

ಅವರು ರವಿವಾರ ಜೆ.ಎನ್‌.ಎಸ್‌. ಕಂಪೆನಿ ಹಾಗೂ ಯುವ ಮೆರಿಡಿಯನ್‌ ಸಮೂಹ ಸಂಸ್ಥೆಗಳ ಪಾಲುದಾರಿಕೆಯಲ್ಲಿ ಕುಂದಾಪುರದ ಶಾಸ್ತ್ರಿ ಸರ್ಕಲ್‌ ಬಳಿ ಗಾಂಧಿ ಮೈದಾನದ ಎದುರು ನಿರ್ಮಾಣಗೊಂಡ “ಯುವ ಮನೀಶ್‌’ ಹೊಟೇಲನ್ನು ಉದ್ಘಾಟಿಸಿ ಮಾತನಾಡಿ ಶುಭ ಹಾರೈಸಿದರು.

ಘಟಪ್ರಭಾದ ಗುಬ್ಬಲಗುಡ್ಡ ಕೆಂಪಯ್ಯಸ್ವಾಮಿ ಮಠದ ಡಾ| ಮಲ್ಲಿಕಾರ್ಜುನ ಸ್ವಾಮೀಜಿ ಆಶೀರ್ವ ಚನ ನೀಡಿ, ಭಗವಂತನ ಅನುಗ್ರಹ, ಆಶೀರ್ವಾದ ಹಾಗೂ ಒಳ್ಳೆಯ ದುಡಿಮೆ, ಪರಿಶ್ರಮ ವಿದ್ದರೆ ಯಶಸ್ಸು ಸಾಧ್ಯ ಅನ್ನುವುದಕ್ಕೆ ಜಯಶೀಲ ಶೆಟ್ಟರು ನಿದರ್ಶನ ಎಂದರು.

ಉದ್ಯೋಗ ಸೃಷ್ಟಿ
“ಕೋಸ್ಟಲ್‌ – ಟೆಂಪಲ್‌ ಟೂರಿಸಂ’ಗೆ ಅಗಾಧ ಅವಕಾಶವಿರುವ ಕರಾವಳಿ ಜಿಲ್ಲೆಗಳಲ್ಲಿ ಇಂತಹ ಸುಸಜ್ಜಿತ ಹೊಟೇಲ್‌ಗ‌ಳ ಆವಶ್ಯಕತೆ ಬಹಳಷ್ಟಿದೆ. ಇದರಿಂದ ಉದ್ಯೋಗ ಸೃಷ್ಟಿ, ಊರಿನ ಅಭಿವೃದ್ಧಿ ಆಗಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ ಹೆಗ್ಡೆ ಹೇಳಿದರು.

ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಮಾತನಾಡಿ, ಕರಾವಳಿ-ಪಶ್ಚಿಮ ಘಟ್ಟಗಳ ನಡುವಿನ ಕುಂದಾಪುರಕ್ಕೆ ಇದೊಂದು ಅತ್ಯುತ್ತಮ ಹೊಟೇಲ್‌ ಆಗಲಿ ಎಂದು ಹಾರೈಸಿದರು.
ಶಾಸಕರಾದ ಬಾಲಚಂದ್ರ ಜಾರಕಿ ಹೊಳಿ, ಕಿರಣ್‌ ಕುಮಾರ್‌ ಕೊಡ್ಗಿ, ಗುರುರಾಜ ಗಂಟಿಹೊಳೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ. ಶ್ರೀನಿವಾಸ ಶುಭ ಹಾರೈಸಿದರು.

ದುಬಾೖಯ ಫಾರ್ಚೂನ್‌ ಗ್ರೂಪ್‌ ಆಫ್‌ ಹೊಟೇಲ್ಸ್‌ ಎಂಡಿ ವಕ್ವಾಡಿ ಪ್ರವೀಣ್‌ ಕುಮಾರ್‌ ಶೆಟ್ಟಿ, ಬೆಂಗಳೂರಿನ ರೆಡಿಸ್ಸನ್‌ ಬ್ಲೂ ಆರ್ಟಿಯಾ ನಿರ್ದೇಶಕ ಕೆ. ನಾಗರಾಜ್‌, ರಾಜಕೀಯ ಮುಖಂಡ ದಿನೇಶ್‌ ಹೆಗ್ಡೆ ಮೊಳಹಳ್ಳಿ, ಜೆ.ಎನ್‌.ಎಸ್‌. ಕಂಪೆನಿಯ ಮನೀಶ್‌ ಜೆ. ಶೆಟ್ಟಿ, ಯುವ ಮೆರಿಡಿಯನ್‌ ಸಮೂಹ ಸಂಸ್ಥೆಗಳ ಬೈಲೂರು ವಿನಯ್‌ ಕುಮಾರ್‌ ಶೆಟ್ಟಿ ಉಪಸ್ಥಿತರಿದ್ದರು.

ಯುವ ಮೆರಿಡಿಯನ್‌ ಸಮೂಹದ ಆಡಳಿತ ಮುಖ್ಯಸ್ಥ ಬೈಲೂರು ಉದಯಕುಮಾರ್‌ ಶೆಟ್ಟಿ ಪ್ರಸ್ತಾವನೆಗೈದು, ಜೆ.
ಎನ್‌.ಎಸ್‌. ಕಂಪೆನಿ ಆಡಳಿತ ಮುಖ್ಯಸ್ಥ ಜಯಶೀಲ ಎನ್‌. ಶೆಟ್ಟಿ ಸ್ವಾಗತಿಸಿದರು.ಕೆ.ಸಿ. ರಾಜೇಶ್‌ ನಿರ್ವಹಿಸಿದರು.

“ಕರಾವಳಿ – ಬೆಂಗಳೂರು ಕಾರಿಡಾರ್‌ ರಸ್ತೆ’
ಉಡುಪಿ ಪ್ರವಾಸೋದ್ಯಮಕ್ಕೆ ಯೋಗ್ಯವಾಗಿದೆ. ತೊಡಕುಗಳನ್ನೆಲ್ಲ ನಿವಾರಿಸಿ ಕೊಂಡು ಅಭಿವೃದ್ಧಿಪಡಿಸಲಾಗುವುದು. ಇಲ್ಲಿನ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾಗಿ ಉಡುಪಿ-ಮಂಗಳೂರು- ಬೆಂಗಳೂರು ನಡುವೆ “ಎಕ್ಸ್‌ಪ್ರೆಸ್‌ ಹೈವೇ’ ರೀತಿಯ ಕಾರಿಡಾರ್‌ ರಸ್ತೆ ನಿರ್ಮಾಣಕ್ಕೆ ರೂಪರೇಖೆ ಸಿದ್ಧಪಡಿಸಲಾಗುವುದು ಎಂದು ಅಧ್ಯಕ್ಷತೆ ವಹಿಸಿದ್ದ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್‌ ಹೇಳಿದರು.

 

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.