Farmers: 2,250 ರೈತರು ಅಸಲು ಕಟ್ಟಿದರೆ 8 ಕೋಟಿ ಬಡ್ಡಿ ಮನ್ನಾ!


Team Udayavani, Jan 29, 2024, 2:55 PM IST

Farmers: 2,250 ರೈತರು ಅಸಲು ಕಟ್ಟಿದರೆ 8 ಕೋಟಿ ಬಡ್ಡಿ ಮನ್ನಾ!

ಚನ್ನರಾಯಪಟ್ಟಣ: ಸಹಕಾರ ಬ್ಯಾಂಕ್‌ನಲ್ಲಿ ರೈತರು ಪಡೆದಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಯೋಜನೆಯನ್ನು ಸರ್ಕಾರ ಜಾರಿ ಮಾಡಿದ್ದು, ತಾಲೂಕಿನ ಪಿಕಾರ್ಡ್‌ ಬ್ಯಾಂಕ್‌ನಲ್ಲಿ 2,250 ಮಂದಿ ಸುಸ್ತಿದಾರರಾಗಿದ್ದು, ಅವರು 7.25 ಕೋಟಿ ರೂ. ಅಸಲು ಹಣ ಕಟ್ಟಿದರೆ 8 ಕೋಟಿ ರೂ. ಬಡ್ಡಿ ಮನ್ನವಾಗಲಿದೆ.

2,250 ರೈತರು ಮರು ಪಾವತಿಸಿಲ್ಲ: ರಾಜ್ಯದಲ್ಲಿ ಬರಗಾಲದ ಹಿನ್ನೆಲೆಯಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ, ಸಹಕಾರ ಬ್ಯಾಂಕ್‌ನಲ್ಲಿ ಪಡೆದಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಆದೇಶವನ್ನು ಸರ್ಕಾರ ಹೊರಡಿಸಿದ್ದು, ಇದರ ಲಾಭವನ್ನು ರೈತರು ಪಡೆಯಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿನ ಪಿಕಾರ್ಡ್‌ ಬ್ಯಾಂಕ್‌ನಲ್ಲಿ 1992 ರಿಂದ 2023ರ ವರೆಗೆ 2,250 ಮಂದಿ ರೈತರು ಪಡೆದ ಸಾಲವನ್ನು ಮರು ಪಾವತಿ ಮಾಡಿಲ್ಲ. ಬಡ್ಡಿ ಮನ್ನ ಆಗುವುದರಿಂದ ರೈತರು ಇದರ ಲಾಭ ಪಡೆಯಬಹುದಾಗಿದೆ.

ಯಾರಿಗೆ ಅನ್ವಯ?: ಹಲವು ವರ್ಷದಿಂದ ಸಾಲವನ್ನು ಮರು ಪಾವತಿ ಮಾಡದೇ ಇರುವವರಿಗೆ ಇದು ಅನುಕೂಲ ಆಗಲಿದೆ. 1992 ರಿಂದ ಡಿ.31ರ 2023ರ ವರೆಗೆ ರೈತರು ಪಡೆದ ಸಾಲ ಮರು ಪಾವತಿ ಮಾಡದೆ ಇರುವವರಿಗೆ ಇದ್ದು ಅನ್ವಯವಾಗಲಿದೆ. ಈಗಾಗಲೇ ರೈತರಿಗೆ ನೀಡಿದ ಸಾಲಕ್ಕೆ ಸಹಕಾರ ನಿಯಮಾನುಸಾರ ಬ್ಯಾಂಕ್‌ಗಳು ಬಡ್ಡಿ ಹಾಕಿದ್ದು, ಅಸಲಿಗಿಂತ ಬಡ್ಡಿ ಹೆಚ್ಚಿದೆ.

ಸರ್ಕಾರದ ಬಡ್ಡಿ ಮನ್ನಾ ಯೋಜನೆ ಜಾರಿಗೆ ತಂದಿದ್ದು, ಫೆ.29ರಲ್ಲಿ ಅಸಲು ಕಟ್ಟಿದ ಸಂಪೂರ್ಣ ಬಡ್ಡಿ ಮನ್ನಾವಾಗಲಿದೆ. ರೈತರು ಸಹಕಾರ ಬ್ಯಾಂಕ್‌ಗಳಿಂದ ಸಾಲ ಪಡೆದ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ. ಕೃಷಿಯೇತರ ಸಾಲಗಳಿಗೆ ಈ ಯೋಜನೆ ಅನ್ವಯವಾಗುವುದಿಲ್ಲ. ನಬಾರ್ಡ್‌ ಗುರುತಿಸಿದ ಕೃಷಿ ಹಾಗೂ ಕೃಷಿ ಸಂಬಂಧಿತ ಮಧ್ಯಮಾವಧಿ, ಅಂದರೆ ಲಘು ನೀರಾವರಿ, ಭೂ ಅಭಿವೃದ್ಧಿ, ಸಾವಯವ ಕೃಷಿ, ಪಶುಸಂಗೋಪನೆ ಹಾಗೂ ಹೈನುಗಾರಿಕೆ, ಮೀನು ಕೃಷಿ, ರೇಷ್ಮೆ ಕೃಷಿ, ಕೃಷಿ ಯಾಂತ್ರೀಕರಣ, ಪ್ಲಾಂಟೇಷನ್‌ ಹಾಗೂ ತೋಟಗಾರಿಕೆ ಅಭಿವೃದ್ಧಿ ಉದ್ದೇಶಗಳಿಗೆ ಮಾತ್ರ ಯೋಜನೆ ಅನ್ವಯವಾಗುತ್ತದೆ.

ಟ್ರ್ಯಾಕ್ಟರ್‌ ಸಾಲದ ಬಡ್ಡಿ ಮನ್ನಾ: ಪಿಕಾರ್ಡ್‌ ಬ್ಯಾಂಕ್‌ ನಲ್ಲಿ 36 ಮಂದಿ ಕೃಷಿ ಮಾಡಲು ಯಂತ್ರೋಪಕರಣದ ಅಡಿಯಲ್ಲಿ ಟ್ರ್ಯಾಕ್ಟರ್‌ ಸಾಲ ಪಡೆದಿದ್ದು, 16 ಮಂದಿ ನಿಗದಿತರ ಅವಧಿಯಲ್ಲಿ ಸಾಲ ಹಾಗೂ ಬಡ್ಡಿ ಮರು ಪಾವತಿ ಮಾಡುತ್ತಿದ್ದಾರೆ. ಇನ್ನು 20 ಮಂದಿ ಸಾಲ ಹಾಗೂ ಬಡ್ಡಿ ನೀಡಿಲ್ಲ. ಇದರಿಂದ 50 ಲಕ್ಷ ಟ್ರ್ಯಾಕ್ಟರ್‌ ಸಾಲ ಬ್ಯಾಂಕ್‌ಗೆ ಬರಬೇಕಾಗಿದೆ. 20 ಮಂದಿ ಅಸಲು ಕಟ್ಟಿದರೆ ಬಡ್ಡಿಯನ್ನು ಸರ್ಕಾರ ತಾಲೂಕಿನ ಪಿಕಾರ್ಡ್‌ ಬ್ಯಾಂಕ್‌ಗೆ ಕಟ್ಟಲಿದೆ.

ಬಡ್ಡಿ ಮನ್ನಾದ ಷರತ್ತುಗಳು : ಸರ್ಕಾರದ ಬಡ್ಡಿ ರಿಯಾಯತಿ ಬದ್ಧತೆಯಡಿ ವಿತರಿಸಿರುವ ಕೃಷಿ ಮತ್ತು ಕೃಷಿ ಸಂಬಂಧಿತ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ. ಕೃಷಿ ಪತ್ತಿನ ಸಹಕಾರ ಸಂಘ ಅಥವಾ ಬ್ಯಾಂಕ್‌ ಗಳಿಂದ ಪಡೆದು 31.12.2023 ಕ್ಕೆ ಸುಸ್ತಿಯಾಗಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲನ್ನು 29.02.2024 ರೊಳಗೆ ಪಿಕಾರ್ಡ್‌ ಬ್ಯಾಂಕ್‌ಗೆ ಸಾಲ ಪಡೆದ ರೈತರು ಮರುಪಾವತಿ ಮಾಡಿದಲ್ಲಿ ಸದರಿ ಸಾಲಗಳ ಮೇಲಿನ ಮರುಪಾವತಿ ದಿನಾಂಕದವರೆಗಿನ ಬಡ್ಡಿಯನ್ನು ಮನ್ನಾ ಮಾಡಿ ಪಿಕಾರ್ಡ್‌ ಬ್ಯಾಂಕಿಗೆ ಸರ್ಕಾರ ಭರ್ತಿ ಮಾಡಲಿದೆ. ಈ ಯೋಜನೆಯು ಮಾರಿಟೋರಿಯಂ ಅವಧಿಯಲ್ಲಿ ಸುಸ್ತಿಯಾಗಿರುವ ಬಡ್ಡಿಗೂ ಸಹ ಅನ್ವಯವಾಗುತ್ತದೆ.

ಸಾಕಷ್ಟು ಮಂದಿ ರೈತರು ತಾವು ಪಡೆದ ಸಾಲಕ್ಕಿಂತ ಬಡ್ಡಿ ಹೆಚ್ಚಿದೆ. ಅಂತಹ ರೈತರು ಹಾಗೂ ಬ್ಯಾಂಕ್‌ನಲ್ಲಿ ಸುಸ್ತಿಯಾಗಿರುವ ಎಲ್ಲಾ ರೈತರು ಒಂದು ತಿಂಗಳೊಳಗೆ ಸಾಲ ಮರುಪಾವತಿ ಮಾಡುವ ಮೂಲಕ ಬಡ್ಡಿಯಿಂದ ಮುಕ್ತಿ ಹೊಂದಲು ಸರ್ಕಾರ ಆದೇಶಿಸಿದ್ದು, ರೈತರ ದರ ಲಾಭ ಪಡೆದುಕೊಳ್ಳುವುದು ಒಳಿತು. -ಜಗದೀಶಚಂದ್ರ, ಪಿಕಾರ್ಡ್‌ ಬ್ಯಾಂಕ್‌ ವ್ಯವಸ್ಥಾಪಕ

ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

11

Hasan: 100 ರೂ.ಗೆ ಸ್ನೇಹಿನನ್ನೇ ಹತ್ಯೆಗೈದ ಕಿರಾತಕರು

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

Hassan; ಟವಲ್‌ ಹೇಗೆ ಹಾಕುತ್ತಾರೆ: ಸಚಿವ ಕೆ.ಎನ್‌. ರಾಜಣ್ಣ ಪ್ರಶ್ನೆ

ಸರಕಾರದ ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

State Govt ಹಿಡಿತದಲ್ಲಿ ಸಿಲುಕಿದ ಎಸ್‌ಐಟಿ: ಎಚ್‌.ಡಿ. ರೇವಣ್ಣ

A vehicle caught fire at Shiradi Ghat

Shiradi ಘಾಟ್‌ನಲ್ಲಿ ವಾಹನ ಬೆಂಕಿಗೆ ಆಹುತಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.