ಚಿಕ್ಕಬಳ್ಳಾಪುರ: ಮಿನಿ ಕಿಟ್‌ ಸಿಗದೆ ಮೇವಿಗಾಗಿ ರೈತರ ಪರದಾಟ!


Team Udayavani, Jan 30, 2024, 2:03 PM IST

ಚಿಕ್ಕಬಳ್ಳಾಪುರ: ಮಿನಿ ಕಿಟ್‌ ಸಿಗದೆ ಮೇವಿಗಾಗಿ ರೈತರ ಪರದಾಟ!

ಉದಯವಾಣಿ ಸಮಾಚಾರ
ಚಿಕ್ಕಬಳ್ಳಾಪುರ: ಸರ್ಕಾರದಿಂದ ಪಶು ಸಂಗೋಪನಾ ಇಲಾಖೆ ಮೂಲಕ ಪೂರೈಕೆ ಆಗಿದ್ದ ಮೇವು ಬೀಜಗಳ ಮಿನಿಕಿಟ್‌ಗಳು ಜಿಲ್ಲೆಯ ಅರ್ಧಕ್ಕರ್ಧ ರೈತರಿಗೆ ಸಿಗದೇ ಹಸಿರು ಮೇವುಗಾಗಿ ಜಿಲ್ಲೆಯ ಅನ್ನದಾತರು ಅದರಲ್ಲೂ ಹೈನುಗಾರಿಕೆಯಲ್ಲಿ ತೊಡಗಿರುವ ಕೃಷಿಕರು ಪರದಾಡುವಂತಾಗಿದೆ.

ಈ ವರ್ಷ ಜಿಲ್ಲಾದ್ಯಂತ ಮುಂಗಾರು ಹಾಗೂ ಹಿಂಗಾರು ಮಳೆ ಕೈ ಕೊಟ್ಟಿರುವ ಪರಿಣಾಮ ಸಹಜವಾಗಿಯೆ ಮೇವು ಉತ್ಪಾದನೆಯಲ್ಲಿ ಭಾರೀ ಕುಸಿತ ಕಂಡಿದ್ದು, ಅದರಲ್ಲೂ ಹಸಿರು ಮೇವು ಇಲ್ಲದೇ ಹಾಲಿನ ಉತ್ಪಾದನೆಯಲ್ಲಿ ಇಳಿಮುಖ
ಕಾಣುತ್ತಿದೆ. ಸದ್ಯ ಜಿಲ್ಲೆಯಲ್ಲಿ ಮೇವು ಮಿನಿಕಿಟ್‌ಗಳಿಗಾಗಿ ಜಿಲ್ಲೆಯ ಅನ್ನದಾತದರು ಸರ್ಕಾರದ ಕಡೆಗೆ ಎದುರು ನೋಡುವಂತಾಗಿದೆ.

21,583 ಕಿಟ್‌ಗಳ ವಿತರಣೆ:
ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆಯಿಂದ ರೈತರಿಗೆ ಉಚಿತವಾಗಿ ಮೇವು ಮಿನಿ ಕಿಟ್‌ಗಳು ವಿತರಿಸಿದರೂ ಅವು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಾಗಿದೆ. ಜಿಲ್ಲೆಗೆ ಒಟ್ಟು ಪೂರೈಕೆ ಆಗಿದ್ದ 21,583 ಮಿನಿ ಕಿಟ್‌ಗಳು ರೈತರಿಗೆ ವಿತರಿಸಿದರೂ ಇನ್ನೂ 20 ಸಾವಿರಷ್ಟು ಮಿನಿ ಕಿಟ್‌ಗಳಿಗೆ ರೈತರಿಂದ ಬೇಡಿಕೆ ಬರುತ್ತಲೇ ಇದೆ. ಹೇಳಿ ಕೇಳಿ ಜಿಲ್ಲೆಯು ಹೈನುಗಾರಿಕೆಯಲ್ಲಿ ದೊಡ್ಡ ಪ್ರಮಾಣದಲ್ಲಿ ತೊಡಗಿಸಿಕೊಂಡಿದೆ. 10 ಲಕ್ಷಕ್ಕೂ ಅಧಿಕ ಜಾನುವಾರುಗಳು ಇವೆ. ಆದರೆ ಸರ್ಕಾರ ಮೇವಿನ ಮಿನಿಕಿಟ್‌ಗಳ ವಿತರಣೆ ವೇಳೆ ಜಿಲ್ಲೆಗೆ ರೈತರ ಬೇಡಿಕೆಗೆ ತಕ್ಕಂತೆ ಸಮರ್ಪಕವಾಗಿ ಪೂರೈಸದ ಪರಿಣಾಮ ಜಿಲ್ಲೆಯಲ್ಲಿ ಮೇವು ಕಿಟ್‌ಗಳು ಸಿಗದೇ ರೈತರು ಮೇವುಗಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ಜಿಲ್ಲೆಗೆ 21,583 ಮಿನಿ ಕಿಟ್‌ಗಳು ಪೂರೈಸಿದ್ದು ಆ ಪೈಕಿ ಬಾಗೇಪಲ್ಲಿ 3,138, ಚಿಕ್ಕಬಳ್ಳಾಪುರ 1,118, ಚಿಂತಾಮಣಿ 4,130, ಗೌರಿಬಿದನೂರು 5,490, ಗುಡಿಬಂಡೆ 4,439 ಹಾಗೂ ಶಿಡ್ಲಘಟ್ಟ ತಾಲೂಕಿಗೆ 3,268 ಕಿಟ್‌ಗಳು ವಿತರಿಸಲಾಗಿದೆ. ಆದರೂ ರೈತರಿಗೆ ಅಗತ್ಯಕ್ಕೆ ತಕ್ಕಂತೆ ಬೇಡಿಕೆಗೆ ಅನುಗುಣವಾಗಿ ಕಿಟ್‌ಗಳು ಸಿಗದೇ ಜಾನುವಾರುಗಳಿಗೆ ಮೇವು ಒದಸುವುದು ರೈತರ ಪಾಲಿಗೆ ಸವಾಲಿನ ಕೆಲಸವಾಗಿದೆ. ಇನ್ನೂ ಜಿಲ್ಲೆಯಲ್ಲಿ ಬೇಸಿಗೆ ಶುರುವಾಗುತ್ತಿದ್ದಂತೆ ಹಸಿರು ಮೇವುಗೆ ಅನ್ನದಾತರು ಪರದಾಡುವಂತಾಗಿದೆ. ಅದರಲ್ಲೂ ಹೈನುಗಾರಿಕೆಯಲ್ಲಿ ತೊಡಗಿರುವ ಸಹಸ್ರಾರು ರೈತರು ಹಸಿರು ಮೇವಿಗೆ ಇನ್ನಿಲ್ಲದ ಪಡಿಪಾಟಲು  ಅನುಭವಿಸುವಂತಾಗಿದ್ದು ಮಾರುಕಟ್ಟೆಯಲ್ಲಿ ಹಸಿರು ಮೇವಿಗೆ ಚಿನ್ನದ ಬೆಲೆ ಬಂದಿದೆ.

ಬರದಿಂದ ಮೇವು ಉತ್ಪಾದನೆ ಕುಸಿತ: ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈ ಕೊಟ್ಟಿದ್ದು ಬರೋಬ್ಬರಿ 75,208 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಗಳು ಹಾನಿಯಾಗಿವೆ. ರಾಗಿ ಸೇರಿದಂತೆ ಜೋಳ, ನೆಲಗಡಲೆ, ಅವರೆ, ತೊಗರಿ, ಹುರುಳಿ ಬೆಳೆಗಳು ಮಳೆ ಕೊರತೆಯಿಂದ ಹಾನಿಯಾಗಿದ್ದು ಕನಿಷ್ಠ ಜಾನುವಾರುಗಳಿಗೆ ಮೇವು ಸಿಗದ ರೀತಿಯಲ್ಲಿ ಬರ ಆವರಿಸಿ ಜಿಲ್ಲೆಯಲ್ಲಿ ಮೇವು ಉತ್ಪಾದನೆ ಕುಸಿತ ಕಂಡಿರುವುದರಿಂದ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವು ಹೊಂದಿಸಲು ಅನ್ನದಾತರು ಇನ್ನಿಲ್ಲದ ರೀತಿಯಲ್ಲಿ ಪರದಾಡುವಂತಾಗಿದೆ.

ಜಿಲ್ಲೆಯಲ್ಲಿ ಮೇವು ಆಧಾರಿತ 10.41 ಲಕ್ಷ ಜಾನುವಾರು
ಕೃಷಿ ಪ್ರಧಾನವಾದ ಜಿಲ್ಲೆಯಲ್ಲಿ 2019ನೇ ಜಾನುವಾರು ಗಣತಿ ಪ್ರಕಾರ ಜಿಲ್ಲೆಯಲ್ಲಿ 2,40,212 ಹಸು ಮತ್ತು ಎಮ್ಮೆ ಹಾಗೂ 8,01,589 ಕುರಿ ಮತ್ತು ಮೇಕೆಗಳಿದ್ದು, ಒಟ್ಟು 10,41,804 ಮೇವು ಆಧಾರಿತ ಜಾನುವಾರುಗಳು ರೈತರ ಬಳಿ ಇವೆ. ಜಿಲ್ಲೆಯಲ್ಲಿ ಈ ವರ್ಷ ಬರದ ಪರಿಣಾಮ ಮೇವು ಉತ್ಪಾದನೆ ಪ್ರಮಾಣ ಕುಸಿದಿದ್ದು ಜಿಲ್ಲಾದ್ಯಂತ ಹಸಿರು ಮೇವುಗೆ ಬರ ಎದುರಾಗಿದೆ. ಪಶು ಸಂಗೋಪನಾ ಇಲಾಖೆ ಮಾಹಿತಿ ಪ್ರಕಾರ ಪ್ರಸ್ತುತ ಜಿಲ್ಲೆಯಲ್ಲಿ 3,08,226 ಮೆಟ್ರಿಕ್‌ ಟನ್‌ ಮೇವು ಲಭ್ಯವಿದೆ.

13,349 ರೈತರಿಗೆ ಮಾತ್ರ ಮೇವು ಕಿಟ್‌
ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಇದ್ದರೂ ಸರ್ಕಾರ ಪೂರೈಸಿರುವ ಮೇವು ಕಿಟ್‌ಗಳು ಇಲ್ಲಿವರೆಗೂ ಜಿಲ್ಲೆಯಲ್ಲಿ ಕೇವಲ 13,349 ರೈತರಿಗೆ ಮಾತ್ರ ಸಿಕ್ಕಿವೆ. ಆ ಪೈಕಿ ಬಾಗೇಪಲ್ಲಿ 2,458, ಚಿಕ್ಕಬಳ್ಳಾಪುರದಲ್ಲಿ 835, ಚಿಂತಾಮಣಿ ಯಲ್ಲಿ 1,958, ಗೌರಿಬಿದನೂರಲ್ಲಿ 2,525, ಗುಡಿಬಂಡೆ 4,439 ಹಾಗೂ ಶಿಡ್ಲಘಟ್ಟದಲ್ಲಿ 1,920 ರೈತರಿಗೆ ಮಾತ್ರ ಮೇವು ಕಿಟ್‌ಗಳು ಸಿಕ್ಕಿದ್ದು, ಇನ್ನೂ ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆ ರೈತರಿಗೆ ಮೇವು ಕಿಟ್‌ಗಳ ಅಗತ್ಯ ಇದ್ದರೂ ಪೂರೈಕೆ ಕೊರತೆಯ ಪರಿಣಾಮ ಪಶು ಸಂಗೋಪನಾ ಇಲಾಖೆಗೆ ಅಲೆದಾಡುವಂತಾಗಿದೆ. ಇನ್ನೂ 13,349 ರೈತರು ಮೇವು ಕಿಟ್‌ ಪಡೆದಿದ್ದರೂ ಇಲ್ಲಿವರೆಗೂ ಕೇವಲ 9,171 ರೈತರು ಮಾತ್ರ
ಬಿತ್ತನೆ ಮಾಡಿದ್ದಾರೆಂದು ಪಶು ಸಂಗೋಪನಾ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲೆಗೆ ಈ ವರ್ಷ ಒಟ್ಟು 21,583 ಮಿನಿ ಮೇವು ಕಿಟ್‌ಗಳು ಸರಬರಾಜು ಆಗಿದ್ದು, ಎಲ್ಲಾ ಕಿಟ್‌ಗಳನ್ನು ರೈತರಿಗೆ ವಿತರಿಸಲಾಗಿದೆ. ರೈತರಿಗೆ ಇನ್ನೂ ಮಿನಿ ಕಿಟ್‌ಗಳಿಗೆ ಬೇಡಿಕೆ ಬರುತ್ತಿದ್ದು, ಜಿಲ್ಲೆಗೆ 19,200 ಮೇವು ಕಿಟ್‌ಗಳು ಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರದಿಂದ ಬಂದ ಕೂಡಲೇ ರೈತರಿಗೆ ಕಿಟ್‌ಗಳನ್ನು ವಿತರಿಸಲಾಗುವುದು.
●ಡಾ.ರವಿ, ಉಪ ನಿರ್ದೇಶಕರು,
ಪಶು ಸಂಗೋಪನಾ ಇಲಾಖೆ

■ ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ

Hubli; CM-DCM issue not to be debated on sidewalks: RB Thimmapura

Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-maya

K Armstrong; ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ: ಮಾಯಾವತಿ ಆಕ್ರೋಶ

1hatharas

Hathras ಕಾಲ್ತುಳಿತ: ವಿಷಕಾರಿ ದ್ರವವನ್ನು ಹೊಂದಿದ್ದ ಕ್ಯಾನ್‌ಗಳನ್ನು ತಂದಿದ್ದರೆ?

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.