Kadaba;ಹೊರ ರಾಜ್ಯ ಕಾರ್ಮಿಕರ ಮಾಹಿತಿ ಸ್ವೀಕರಿಸಲು ಕಡಬ ಠಾಣೆಯಲ್ಲಿ ನಕಾರ

ಜಾಲತಾಣದಲ್ಲಿ ಸಂದೇಶ ವೈರಲ್‌; ಮಾಹಿತಿ ಸ್ವೀಕರಿಸಿದ ಉಪ ನಿರೀಕ್ಷಕ

Team Udayavani, Feb 1, 2024, 1:42 AM IST

ಹೊರ ರಾಜ್ಯ ಕಾರ್ಮಿಕರ ಮಾಹಿತಿ ಸ್ವೀಕರಿಸಲು ಕಡಬ ಠಾಣೆಯಲ್ಲಿ ನಕಾರ

ಕಡಬ: ಹೊರ ರಾಜ್ಯದಿಂದ ಕೂಲಿ ಕೆಲಸಕ್ಕೆ ಬಂದ ಕಾರ್ಮಿಕರ ಮಾಹಿತಿ ನೀಡಲು ಕಡಬ ಪೊಲೀಸ್‌ ಠಾಣೆಗೆ ಹೋದ ವೇಳೆ ಅಲ್ಲಿನ ಪೊಲೀಸ್‌ ಸಿಬಂದಿ ಅರ್ಜಿ ಮತ್ತು ಕಾರ್ಮಿಕರ ಗುರುತಿನ ದಾಖಲೆ ಪಡೆಯಲು ನಿರಾಕರಿಸಿರುವ ಕುರಿತು ಕಡಬದ ಐತ್ತೂರು ಗ್ರಾಮದ ನಿವಾಸಿಯೊಬ್ಬರ ಸಾಮಾಜಿಕ ಜಾಲತಾಣದ ಸಂದೇಶ ಎಲ್ಲೆಡೆ ವೈರಲ್‌ ಆಗಿದೆ.

ಮಾಹಿತಿ ಹಕ್ಕು ಕಾರ್ಯಕರ್ತರೂ ಆಗಿರುವ ಬಾಲಕೃಷ್ಣ ಭಟ್‌ ತನ್ನ ತೋಟದಲ್ಲಿ ಕೆಲಸ ಮಾಡಿಕೊಂಡು ತೋಟದ ಮನೆಯಲ್ಲಿ ವಾಸ್ತವ್ಯ ಇರಲು ಝಾರ್ಖಂಡ್‌ ಮೂಲದ ಮೂವರು ಕೆಲಸಗಾರರನ್ನು ತನ್ನ ಸಂಬಂಧಿಕರ ಮೂಲಕ ಕರೆಸಿಕೊಂಡಿದ್ದರು. ಕಾರ್ಮಿಕರು ಅಪರಿಚಿತರು ಮತ್ತು ಬೇರೆ ರಾಜ್ಯದವರಾದುದರಿಂದ ಮುಂಜಾಗರೂಕತೆಗಾಗಿ ಅರ್ಜಿಯ ಜತೆ ಕಾರ್ಮಿಕರ ಆಧಾರ್‌ ಕಾರ್ಡ್‌ ನಕಲು ಪ್ರತಿಯನ್ನು ನೀಡಲು ಮಂಗಳವಾರ ಠಾಣೆಗೆ ಹೋಗಿದ್ದರು. ಠಾಣೆಯಲ್ಲಿದ್ದ ಸಿಬಂದಿಯೊಬ್ಬರು ಅರ್ಜಿ ಮತ್ತು ಕಾರ್ಮಿಕರ ಗುರುತಿನ ಪುರಾವೆಯನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ, ಅವರು ನಾಳೆ ಏನಾದರೂ ಕದ್ದುಕೊಂಡು ಹೋದರೆ ನಮ್ಮ ತಲೆ ಮೇಲೆ ಬರುತ್ತದೆ ಎಂದು ಹೇಳಿರುವುದಾಗಿ ಬಾಲಕೃಷ್ಣ ಭಟ್‌ ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಬಳಿಕ ಉಪ ನಿರೀಕ್ಷಕರ ಕೊಠಡಿಗೆ ಹೋದಾಗ ಅಲ್ಲಿದ್ದ ತನಿಖಾ ಉಪ ನಿರೀಕ್ಷಕ ಅಕ್ಷಯ ಡವಗಿ ಅವರು ಕಾರ್ಮಿಕರ ಫೋನ್‌ ನಂಬರ್‌ ಸಮೇತ ಅರ್ಜಿಯನ್ನು ಪಡೆದಿದ್ದಾರೆ ಎಂದು ಅವರು ಸಂದೇಶದಲ್ಲಿ ತಿಳಿಸಿದ್ದಾರೆ.

ಅಪರಿಚಿತ ಮತ್ತು ಹೊರ ರಾಜ್ಯದ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗಿ ಅವರ ಭಾವಚಿತ್ರ ಸಹಿತ ಮಾಹಿತಿಯನ್ನು ತೆಗೆದಿರಿಸಿಕೊಂಡು ಪೊಲೀಸ್‌ ಠಾಣೆಗೂ ನೀಡಬೇಕೆಂದು ಈ ಹಿಂದೆ ಇಲಾಖೆಯೇ ಪ್ರಕಟನೆ ನೀಡಿತ್ತು. ಅದರಂತೆ ನಾವು ಮಾಹಿತಿ ನೀಡಲು ಠಾಣೆಗೆ ಹೋದಾಗ ಅಲ್ಲಿನ ಸಿಬಂದಿ ಈ ರೀತಿ ವರ್ತಿಸುವುದು ಸರಿಯೇ ಎಂದು ಬಾಲಕೃಷ್ಣ ಭಟ್‌ ಪ್ರಶ್ನಿಸಿದ್ದಾರೆ.

ಅರ್ಥವಾಗದೆ ಸಮಸ್ಯೆ
ಠಾಣೆಯ ತನಿಖಾ ಉಪ ನಿರೀಕ್ಷಕ ಅಕ್ಷಯ ಡವಗಿ ಘಟನೆಯ ಕುರಿತು ಪ್ರತಿಕ್ರಿಯಿಸಿ ಬಾಲಕೃಷ್ಣ ಭಟ್‌ ಹೇಳಿರುವುದು ನಮ್ಮ ಸಿಬಂದಿಗೆ ಸರಿಯಾಗಿ ಆರ್ಥವಾಗದೇ ಇದ್ದುದರಿಂದ ಸಮಸ್ಯೆ ಉದ್ಭವಿಸಿದೆ. ಬಾಲಕೃಷ್ಣ ಭಟ್‌ ಅವರಿಂದ ಕಾರ್ಮಿಕರ ಎಲ್ಲ ಮಾಹಿತಿ ಪಡೆದುಕೊಂಡು ಅವರನ್ನು ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

1-ccrr-2

Team India ಮೂರನೇ ಸುತ್ತಿನ ಅಭ್ಯಾಸ

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.